![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 8, 2023, 6:40 AM IST
ನವದೆಹಲಿ: ಇತರೆ ಹಿಂದುಳಿದ ವರ್ಗ(ಒಬಿಸಿ)ಗಳ ಕೆನೆಪದರದ ಈಗಿರುವ ವಾರ್ಷಿಕ ಆದಾಯ ಮಿತಿ 8 ಲಕ್ಷ ರೂ. ಮುಂದುವರಿಯಲಿದ್ದು, ಇದನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಲೋಕಸಭೆಯಲ್ಲಿ ಮಂಗಳವಾರ ಕೇಂದ್ರ ಸರ್ಕಾರ ತಿಳಿಸಿದೆ.
ಒಬಿಸಿ ಕೆನೆಪದರದ ಸ್ಥಿತಿಯನ್ನು ನಿರ್ಧರಿಸಲು ವಾರ್ಷಿಕ ಆದಾಯ ಮಿತಿಯನ್ನು ಇದುವರೆಗೆ ನಾಲ್ಕು ಬಾರಿ ಪರಿಷ್ಕರಿಸಲಾಗಿದೆ ಎಂದು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಸಮಾಜ ಕಲ್ಯಾಣ ಸಚಿವ ವಿರೇಂದ್ರ ಕುಮಾರ್ ತಿಳಿಸಿದರು.
2014ರಲ್ಲಿ ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. ಇದೀಗ 654 ವೈದ್ಯಕೀಯ ಕಾಲೇಜುಗಳಿದ್ದು, ಕಾಲೇಜುಗಳ ಸಂಖ್ಯೆಯಲ್ಲಿ ಶೇ.69ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
1955ರ ಪೌರತ್ವ ಕಾಯಿದೆಯ ಅನುಸಾರ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡಲು 31 ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ್ ರೈ ಮಾಹಿತಿ ನೀಡಿದರು.
ಇನ್ನೊಂದೆಡೆ, 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರ ದಾಳಿಗಳಲ್ಲಿ 30 ನಾಗರಿಕರು ಹಾಗೂ 31 ಭದ್ರತಾ ಪಡೆಯ ಸಿಬ್ಬಂದಿ ಅಸುನೀಗಿದ್ದು, 221 ಮಂದಿ ಗಾಯಗೊಂಡಿದ್ದಾರೆ ಎಂದು ರೈ ತಿಳಿಸಿದರು.
ಅಕ್ರಮ ಲೋನ್ ಆ್ಯಪ್ ಗಳ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 859.15 ಕೋಟಿ ರೂ. ಮೌಲ್ಯದ ಆರೋಪಿತ ವ್ಯಕ್ತಿಗಳು ಮತ್ತು ಕಂಪನಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೇ 1999ರ ವಿದೇಶಿ ವಿನಿಮಯ ಕಾಯ್ದೆ ಅಡಿ 289.28 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಭಾಗವತ್ ಕರಾಡ್ ಮಾಹಿತಿ ನೀಡಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.