ಕಲಾಂ ಮತ್ತೆ ರಾಷ್ಟ್ರಪತಿಯಾಗುವುದು ಕಾಂಗ್ರೆಸ್ಗೆ ಬೇಕಿರಲಿಲ್ಲ: ಗಾಂಧಿ
Team Udayavani, Dec 26, 2018, 4:30 PM IST
ಹೊಸದಿಲ್ಲಿ : ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಬೆಂಬಲ ಇರುತ್ತಿದ್ದರೆ ಎಪಿಜೆ ಅಬ್ದುಲ್ ಕಲಾಂ ಅವರು 2012ರಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲದಲ್ಲಿ ರಾಷ್ಟ್ರಪತಿ ಹುದ್ದೆಗೆ ಮರಳುವುದು ಸಾಧ್ಯವಿತ್ತು. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಬೆಂಬಲ ಇಲ್ಲದಿದ್ದ ಕಾರಣಕ್ಕೆ ಕಲಾಂ ಅವರು ತಮ್ಮ ಉಮೇದ್ವಾರಿಕೆಯನ್ನು ಹಿಂಪಡೆದುಕೊಂಡರು ಎಂದು ಹೊಸ ಪುಸ್ತಕವೊಂದು ಹೇಳಿದೆ.
‘ಆ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನೇತಾರ ಪ್ರಣಾಬ್ ಮುಖರ್ಜಿ ಅವರನ್ನು ದೇಶದ 13ನೇ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲಾಯಿತು ಮತ್ತು ಮುಖರ್ಜಿ ಅವರು ಪ್ರತಿಭಾ ಪಾಟೀಲ್ ಅವರ ಉತ್ತರಾಧಿಕಾರಿಯಾಗಿ ಐದು ವರ್ಷಗಳ ಅವಧಿಗೆ ರಾಷ್ಟ್ರಪತಿ ಭವನನಲ್ಲಿ ಸ್ಥಾಪಿತರಾದರು’ ಎಂದು ಪುಸ್ತಕವು ವಿವರಿಸಿದೆ.
”2007ರ ಕೊನೆಯಲ್ಲಿ ತಮ್ಮ ರಾಷ್ಟ್ರಪತಿ ಪದಭಾರ ಮುಗಿದಾಗ ಕಲಾಂ ಅವರು ಭಾರತದ ಸಾಂಸ್ಕೃತಿಕ ಸಿರಿವಂತಿಕೆ ಮತ್ತು ಹಿಂದೂ ಸಂಘಟನೆಗಳ ಕೆಲವು ಉದಾರವಾದಿ ಮತ್ತು ಪ್ರಗತಿಪರ ನಾಯಕರ ಬಗ್ಗೆ ಮೆಚ್ಚುಗೆಯನ್ನು ಹೊಂದಿದ್ದರು. ಅದನ್ನು ಅವರು ವಿವಿಧ ವೇದಿಕೆಗಳಲ್ಲಿ ಪ್ರಕಟಿಸುತ್ತಿದ್ದರು. ಹಾಗಾಗಿ ಕಲಾಂ ಅವರು ಹಿಂದು ಭಾರತದ ಅಚ್ಚುಮೆಚ್ಚಿನ ಮುಸ್ಲಿಂ ಆಗಿದ್ದರು” ಎಂದು ರಾಜಮೋಹನ್ ಗಾಂಧಿ ಅವರು ಬರೆದಿರುವ “ಮಾಡರ್ನ್ ಸೌತ್ ಇಂಡಿಯ : ಎ ಹಿಸ್ಟರಿ ಫ್ರಂ ದಿ ಸೆವೆಂಟೀಂತ್ ಸೆಂಚುರಿ ಟು ಅವರ್ ಟೈಮ್ಸ್ ‘ ಎನ್ನುವ ಪುಸ್ತಕದಲ್ಲಿ ಹೇಳಿದ್ದಾರೆ.
”2002ರಲ್ಲಿ ರಾಷ್ಟ್ರಪತಿಗಳಾಗಿದ್ದ ಕೆ ಆರ್ ನಾರಾಯಣನ್ ಅವರ ಉತ್ತರಾಧಿಕಾರಿಯಾಗಿ ಕಲಾಂ ಅವರನ್ನು ಅಂದಿನ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಹೆಸರಿಸಿದ್ದರು. ಎಚ್ ಡಿ ದೇವೇಗೌಡ ಮತ್ತು ಐ ಕೆ ಗುಜ್ರಾಲ್ ಅವರ ಸಚಿವ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಯಾದವ್ ಅವರು ಅಂದಿನ ಡಿಆರ್ಡಿಓ ಮುಖ್ಯಸ್ಥರಾಗಿದ್ದ ಕಲಾಂ ಅವರನ್ನು ಇಷ್ಟಪಟ್ಟಿದ್ದರು” ಎಂದು ರಾಜಮೋಹನ್ ಗಾಂಧಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.