![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 28, 2018, 3:26 PM IST
ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿರುವ ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಯಾವುದೇ ಜೀವ ಬೆದರಿಕೆ ಇಲ್ಲ ಎಂದು ಮಾಂಡೋಲಿ ಜೈಲು ಅಧಿಕಾರಿಗಳು ಹೇಳಿದ್ದಾರೆ. ಅಂತಹ ಆರೋಪಗಳು ನಿರಾಧಾರವಾಗಿವೆ ಎಂದವರು ಹೇಳಿದ್ದಾರೆ.
ಈಶಾನ್ಯ ದಿಲ್ಲಿಯ ಮಾಂಡೋಲಿ ಜೈಲಿನ 11ನೇ ನಂಬರ್ ಕೊಠಡಿಯಲ್ಲಿ ಇರಿಸಲಾಗಿರುವ ಖಾನ್ ಅವರನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತನಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಮಾನತುಲ್ಲ ಖಾನ್ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಶೆಫಾಲಿ ಬರ್ನಾಲಾ ಹೊರಡಿಸಿದ ಆದೇಶದ ಅನುಸಾರ ಜೈಲಿನ ಸುಪರಿಂಟೆಂಡೆಂಟರು ಕೋರ್ಟಿಗೆ ವರದಿ ಸಲ್ಲಿಸಿದ್ದು “ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರಿಗೆ ಜೈಲಿನಲ್ಲಿ ಯಾವುದೇ ಜೀವ ಬೆದರಿಕೆ ಇಲ್ಲ; ಆ ಬಗೆಯ ಆರೋಪಗಳು ಸುಳ್ಳು ಮತ್ತು ನಿರಾಧಾರ’ ಎಂದು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.