Seema Haider: ಸಚಿನ್-ಸೀಮಾ ಹೈದರ್ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
Team Udayavani, Jul 27, 2023, 10:44 AM IST
ನೋಯ್ಡಾ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಚಿನ್ – ಸೀಮಾ ಹೈದರ್ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಪಬ್ ಜೀ ಆಡಿ ಪ್ರಿಯಕರನನ್ನು ಭೇಟಿ ಆಗಲು ಅಕ್ರಮವಾಗಿ ಭಾರತಕ್ಕೆ ಬಂದ ಪಾಕ್ ಮೂಲದ ಸೀಮಾ ಹೈದರ್ ಅವರ ವಿಚಾರಣೆ ನಡೆಯುತ್ತಿದೆ. ಅವರ ಹಿನ್ನೆಲೆ ಹಾಗೂ ಮೂಲವನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿದ್ದಾರೆ.
ಸೀಮಾ ಹೈದರ್ ಭಾರತಕ್ಕೆ ಬಂದು ಸಚಿನ್ ಅವರೊಂದಿಗೆ ವಿವಾಹವಾಗಿದ್ದಾರೆ. ಅವರ ಮದುವೆಗೆ ನಕಲಿ ಗುರುತಿನ ದಾಖಲೆಗಳನ್ನು ಸೃಷ್ಟಿಸಿದ ಇಬ್ಬರು ವ್ಯಕ್ತಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ ಮೂಲದ ಪುಷ್ಪೇಂದ್ರ ಮತ್ತು ಪವನ್ ಬಂಧಿತರು. ಬಂಧಿತರಿಂದ 15 ನಕಲಿ ಆಧಾರ್ ಕಾರ್ಡ್ ಹಾಗೂ ಉಪಕರಣವನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಮೂರು ದಿನಗಳಿಂದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸುವ ದಂಧೆಯ ಬಗ್ಗೆ ಬಾಯಿ ಬಿಟ್ಟಿದ್ದಾರೆ.
ಸೀಮಾ ಹೈದರ್ ಗ್ರೇಟರ್ ನೋಯ್ಡಾಗೆ ಬಂದು, ಆ ಬಳಿಕ ಮದುವೆಯಾಗುವ ನಿಟ್ಟಿನಲ್ಲಿ ಸಚಿನ್ ಅವರೊಂದಿಗೆ ಬುಲಂದ್ಶಹರ್ಗೆ ಪ್ರಯಾಣ ಬೆಳೆಸಿದ್ದರು. ಪುಷ್ಪೇಂದ್ರ ಮತ್ತು ಪವನ್ ಉತ್ತರ ಪ್ರದೇಶದ ಬುಲಂದ್ಶಹರ್ನ ಅಹ್ಮದ್ಗಢದಲ್ಲಿ ಜನ ಸೇವಾ ಕೇಂದ್ರವನ್ನು (ಸಾರ್ವಜನಿಕ ಸೇವಾ ಕೇಂದ್ರ) ನಡೆಸುತ್ತಿದ್ದರು. ಇಲ್ಲಿ ನಕಲಿ ಗುರುತಿನ ದಾಖಲೆ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗುತ್ತಿತ್ತು. ಈ ಕೇಂದ್ರದಲ್ಲಿಯೇ ಸಚಿನ್ ಮತ್ತು ಸೀಮಾ ಹೈದರ್ ತಮ್ಮ ಮದುವೆಗೆ ಅಗತ್ಯ ದಾಖಲೆಗಳನ್ನು ಪಡೆಯಲು ನೆರವು ಕೋರಿದ್ದಾರೆ. ಈ ವೇಳೆ ಪುಷ್ಪೇಂದ್ರ ಮತ್ತು ಪವನ್ ಅಗತ್ಯ ದಾಖಲೆಗಳ ನಕಲಿ ಪ್ರತಿಯನ್ನು ಮಾಡಿಕೊಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.