RSS; ಜಾತಿ ಗಣತಿಗೆ ವಿರೋಧವಿಲ್ಲ, ಆದರೆ….: ಸ್ಪಷ್ಟನೆ ನೀಡಿದ ಆರ್ಎಸ್ಎಸ್
Team Udayavani, Dec 22, 2023, 11:57 AM IST
ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಜಾತಿ ಗಣತಿಯನ್ನು ವಿರೋಧಿಸುವುದಿಲ್ಲ ಎಂದು ಗುರುವಾರ ಹೇಳಿದೆ. ಆದರೆ ಜನಗಣತಿಯನ್ನು ಸಮಾಜದ ಪ್ರಗತಿಗೆ ಬಳಸಬೇಕೆಂದು ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಕೀಯ ಬೇಡ ಎಂದು ಸಂಘಟನೆ ಹೇಳಿದೆ.
ಆರ್ಎಸ್ಎಸ್ ಪದಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಧರ್ ಗಾಡ್ಗೆ ಅವರು ಡಿಸೆಂಬರ್ 19 ರಂದು ಜನಗಣತಿಯನ್ನು ವಿರೋಧ ವ್ಯಕ್ತಪಡಿಸಿದ್ದರು. ಜಾತಿ ಗಣತಿಯು ಒಂದು ನಿರ್ದಿಷ್ಟ ಜಾತಿಯ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಒದಗಿಸುವುದರಿಂದ ಕೆಲವು ಜನರಿಗೆ ರಾಜಕೀಯವಾಗಿ ಲಾಭವಾಗಬಹುದು, ಆದರೆ ಇದು ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ಅಪೇಕ್ಷಣೀಯವಲ್ಲ ಎಂದು ಹೇಳಿದ್ದರು.
ಇದೀಗ, ಆರ್ಎಸ್ಎಸ್ನ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಜಾತಿ ಗಣತಿಯನ್ನು ನಡೆಸುವಾಗ, ಅದು ಬಿರುಕು ಸೃಷ್ಟಿಸದಂತೆ ನೋಡಿಕೊಳ್ಳಬೇಕು ಎಂದು ಸಂಘಟನೆ ಹೇಳಿದೆ.
ಯಾವುದೇ ತಾರತಮ್ಯವಿಲ್ಲದೆ ಸಾಮರಸ್ಯ ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ಹಿಂದೂ ಸಮಾಜವನ್ನು ನಿರ್ಮಿಸಲು ಸಂಘಟನೆಯು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಆರ್ ಎಸ್ಎಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.