![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 27, 2020, 12:24 PM IST
ಮುಂಬೈ: ತೀವ್ರ ಚರ್ಚೆ, ವಿವಾದಕ್ಕೆ ಕಾರಣವಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಮನೆಯನ್ನು ಬಿಎಂಸಿ(ಬೃಹತ್ ಮುಂಬಯಿ ಮಹಾನಗರಪಾಲಿಕೆ) ಧ್ವಂಸಗೊಳಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಶುಕ್ರವಾರ(ನವೆಂಬರ್ 27, 2020), ಇದೊಂದು ದ್ವೇಷದ ನಡವಳಿಕೆಯೇ ಹೊರತು, ಕಾನೂನು ಸಮ್ಮತವಾದುದಲ್ಲ ಎಂದು ತಿಳಿಸಿದೆ.
ಸೆಪ್ಟೆಂಬರ್ 9(2020)ರಂದು ಮುಂಬೈನ ಪಾಲಿ ಹಿಲ್ ಪ್ರದೇಶದಲ್ಲಿದ್ದ ನಟಿ ಕಂಗನಾ ರಣಾವತ್ ನಿವಾಸದ ಒಂದು ಭಾಗವನ್ನು ಬೃಹನ್ಮುಂಬಯಿ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಗಳು ಒಡೆದು ಹಾಕಿದ್ದರು. ಏತನ್ಮಧ್ಯೆ ಕಂಗನಾ ಬಿಎಂಸಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಬಿಎಂಸಿ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿತ್ತು.
ಮಹಾರಾಷ್ಟ್ರ ಸರ್ಕಾರ ಹಾಗೂ ಆಡಳಿತಾರೂಢ ಶಿವಸೇನಾ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ದ್ವೇಷದಿಂದ ಬಿಎಂಸಿ ತನ್ನ ಮನೆಯನ್ನು ಭಾಗಶಃ ಒಡೆದು ಹಾಕಿರುವುದಾಗಿ ಕಂಗನಾ ಆರೋಪಿಸಿದ್ದರು ಎಂದು ವರದಿ ತಿಳಿಸಿದೆ.
ನಟಿ ಕಂಗನಾ ರಣಾವತ್ ಅವರು ಅಕ್ರಮವಾಗಿ ಮನೆ ಕಟ್ಟಿರುವುದಾಗಿ ಬಿಎಂಸಿ ಆರೋಪಿಸಿತ್ತು. ಕಂಗನಾ ಅವರು ಸುಮಾರು 14 ನಿಯಮವನ್ನು ಉಲ್ಲಂಘಿಸಿರುವುದಾಗಿ ಬಿಎಂಸಿ ಪಟ್ಟಿ ಮಾಡಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಕಂಗನಾ ರಾಜ್ಯದಿಂದ ಹೊರಗಿದ್ದ ವೇಳೆ, ಕೇವಲ 24ಗಂಟೆಗಳ ಕಾಲಾವಧಿಯಲ್ಲಿ ಉತ್ತರ ನೀಡುವಂತೆ ಬಿಎಂಸಿ ಸೂಚಿಸಿತ್ತ. ಆದರೆ ಆಕೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಸಮಯವನ್ನು ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.