BJPಯ ತಪ್ಪು ನೀತಿಗಳಿಗೆ ಕಾಂಗ್ರೆಸ್ನ ನ್ಯಾಯ್ ಸೂಕ್ತ ಉತ್ತರ : ರಾಹುಲ್ ಗಾಂಧಿ
Team Udayavani, May 1, 2019, 4:50 PM IST
ಸೀತಾಪುರ, ಉತ್ತರ ಪ್ರದೇಶ : ‘ದೇಶದ ಆರ್ಥಿಕತೆಯನ್ನು ಧ್ವಂಸಗೈದಿರುವ ಬಿಜೆಪಿಯ ತಪ್ಪು ನೀತಿಗಳಿಗೆ ಕಾಂಗ್ರೆಸ್ ಪಕ್ಷದ ನ್ಯಾಯ್ ಯೋಜನೆ ಸೂಕ್ತ ಉತ್ತರವಾಗಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಸ್ವಾನನಲ್ಲಿನ ಗುಲ್ಜಾರ್ ಶಾ ಮೈದಾನದಲ್ಲಿ ಪಕ್ಷದ ಅಭ್ಯರ್ಥಿ ಕೈಸರ್ ಜಹಾನ್ ಅವರ ಪ್ರಚಾರಾರ್ಥ ಏರ್ಪಡಿಸಲಾಗಿದ್ದ ರಾಲಿಯಲ್ಲಿ ಮಾತನಾಡುತ್ತಿದ್ದ ಅವರು, ದೇಶದ ಆರ್ಥಿಕತೆಯನ್ನು ಬುಡಮೇಲು ಮಾಡಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದರು.
“ನೋಟು ಅಮಾನ್ಯ ಮತ್ತು ಜಿಎಸ್ಟಿ ದೇಶದ ಆರ್ಥಿಕತೆಯನ್ನು ನಾಶ ಮಾಡಿದವು. ಬಿಜೆಪಿಯ ಈ ತಪ್ಪು ನೀತಿಗಳಿಂದ ಬಾಧಿತರಾಗಿರುವ ಬಡವರ ಉದ್ಧಾರಕ್ಕೆ ಕಾಂಗ್ರೆಸ್ ಪಕ್ಷ ರೂಪಿಸಿರುವ ನ್ಯಾಯ್ ಸ್ಕೀಮ್ ತಕ್ಕುದಾದ ಉತ್ತರವಾಗಿದೆ” ಎಂದು ರಾಹುಲ್ ಹೇಳಿದರು.
‘ಮೋದಿ ಜೀ ಅವರು ಕೇವಲ 15 ಮಂದಿ ಸಮೂಹವನ್ನು ಉದ್ಧರಿಸಲು ಅವರಿಗೆ 5.50 ಕೋಟಿ ರೂ. ನೀಡಿದರು. ಆದರೆ ಕಾಂಗ್ರೆಸ್ ಪಕ್ಷ ಈ ಮೊತ್ತವನ್ನು ಆ ಉದ್ಯಮಿಗಳಿಂದ ಹಿಂಪಡೆದು ಅದನ್ನು ದೇಶದ 25 ಕೋಟಿ ಕಡು ಬಡವರಿಗೆ ಹಂಚಲಿದೆ’ ಎಂದು ರಾಹುಲ್ ಗುಡುಗಿದರು.
‘ದೇಶದ ಬಡ ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಹೆಸರಲ್ಲಿ ಹಣಕಾಸು ನೆರವು ನೀಡುವ ಪ್ರಧಾನಿ ಮೋದಿ ಅವರ ಯೋಜನೆಯು ಒಂದು ಜೋಕ್ ಆಗಿದೆ’ ಎಂದು ರಾಹುಲ್ ಲೇವಡಿ ಮಾಡಿದರು.
‘ಪ್ರಧಾನಿ ನರೇಂದ್ರ ಮೋದಿ ಅವರು ರಿಲಯನ್ಸ್ ಉದ್ಯಮಿ ಅನಿಲ್ ಅಂಬಾನಿಗೆ ನೆರವಾಗಲು ರಫೇಲ್ ಗುತ್ತಿಗೆಯನ್ನು ಆತನಿಗೆ ನೀಡಿದರು. ಅದಕ್ಕೆ ಬದಲಾಗಿ ಆತ (ಅನಿಲ್ ಅಂಬಾನಿ) ದೇಶವನ್ನೇ ವಂಚಿಸಿದರು’ ಎಂದು ರಾಹುಲ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.