Odisha; ಸೌರಾಘಾತಕ್ಕೆ 3 ದಿನದಲ್ಲಿ 20 ಮಂದಿ ಸಾವು
Team Udayavani, Jun 4, 2024, 12:06 AM IST
ಹೊಸದಿಲ್ಲಿ: ಉತ್ತರ ಹಾಗೂ ಮಧ್ಯಭಾರತದಲ್ಲಿ ತಾಪಮಾನ ದಿನೇ ದಿನೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಒಡಿಶಾ ರಾಜ್ಯದಲ್ಲಿ 20 ಮಂದಿ ಸೌರಾಘಾತಕ್ಕೆ ಸಾವನ್ನಪ್ಪಿದ್ದಾರೆ.
ಒಡಿಶಾದಲ್ಲಿ ಬಿಸಿಹವೆಯ ಪ್ರಮಾಣ ಹೆಚ್ಚುತ್ತಲೇ ಇದೆ. ಶುಕ್ರವಾರದಿಂದ ಒಟ್ಟು 99 ಸೌರಾಘಾತದ ಸಾವುಗಳು ಸಂಭವಿಸಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ಬಳಿಕ 20 ಮಂದಿ ಮಾತ್ರ ಸೌರಾಘಾತಕ್ಕೆ ಮೃತಪಟ್ಟಿದ್ದು, ಇನ್ನೆರಡು ಸಾವುಗಳು ಬೇರೆ ಕಾರಣದಿಂದಾಗಿರುವುದಾಗಿ ತಿಳಿದಿದೆ. ಇನ್ನುಳಿದ ಸಾವುಗಳಿಗೆ ಕಾರಣಗಳನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾವಲಿಗಳು ಸಾವು
ಇತ್ತ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಮಿತಿಮೀರಿದ ತಾಪಮಾನದಿಂದ 24 ಬಾವಲಿಗಳು ಮೃತಪಟ್ಟಿವೆ ಎಂದು ಅರಣ್ಯ ಇಲಾಖೆ ಹೇಳಿದೆ. ಪಾಳಿ ಅರಣ್ಯ ವ್ಯಾಪ್ತಿಯ ಪರ್ಸಾದ ಗ್ರಾಮದ ಕೊಳವೊಂದರ ಬಳಿ ಬಾವಲಿಗಳ ಶವಗಳು ಪತ್ತೆಯಾಗಿವೆ. ಪ್ರಾಥಮಿಕವಾಗಿ ತಾಪ ಹೆಚ್ಚಳದಿಂದ ಪಕ್ಷಿಗಳು ಸತ್ತಿವೆ ಎನ್ನಲಾಗಿದ್ದು, ಉನ್ನತ ತನಿಖೆ ನಡೆಯುತ್ತಿದೆ. ಇದೇ ವೇಳೆ, ದಿಲ್ಲಿಯಲ್ಲೂ ಬಿಸಿ ಹವೆ ಮುಂದುವರಿದಿದ್ದು, ಸೋಮವಾರ 44.7 ಡಿ.ಸೆ. ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.