ಗ್ರಾಮದ ಜನರಿಗೆ ಸೇತುವೆ ನಿರ್ಮಿಸಲು ಪತ್ನಿಯ ಬಂಗಾರವನ್ನೇ ಗಿರವಿಟ್ಟ ಪತಿ.! 100 ಕುಟುಂಬಕ್ಕೆ ಆಸರೆಯಾಯಿತು ಸೇತುವೆ


Team Udayavani, Dec 13, 2022, 4:05 PM IST

tdy-14

ಭುವನೇಶ್ವರ: ಅದು 100 ಕುಟುಂಬದ ಸಣ್ಣ ಹಳ್ಳಿ. ಅಲ್ಲಿರುವ ಜನರು ಸರ್ಕಾರಿ ಆಸ್ಪತ್ರೆಗೆ ಹೋಗಬೇಕಾದರೆ ನದಿ ದಾಟಿಕೊಂಡೇ ಪ್ರಾಣ ಕೈಯಲ್ಲಿ ಹಿಡಿದುಕೊಂಡೇ ಹೋಗಬೇಕು. ಏಕೆಂದರೆ ಆ ನದಿಗೆ ಯಾವ ಸೇತುವೆಯೂ ಇಲ್ಲ.

ರಾಯಗಡದ ಕಾಶಿಪುರ ಬ್ಲಾಕ್ ನ ಬಿಚ್ಲಾ ನದಿಗೆ ಸೇತುವೆ ವ್ಯವಸ್ಥೆಯಿಲ್ಲ. ಕಳೆದ ಎರಡು ಚುನಾವಣೆಯಲ್ಲಿ ಈ ಗ್ರಾಮಕ್ಕೆ ರಾಜಕಾರಣಿಗಳು ಬಂದಿದ್ದಾರೆ. ಸೇತುವೆ ಮಾಡಿಕೊಡುತ್ತೇವೆ ಎಂದು ಹಲವು ಬಾರಿ ಭರವಸೆಗಳನ್ನು ನೀಡಿದ್ದಾರೆ. ಈ ಭರವಸೆಗಳನ್ನೇ ನಂಬಿಕೊಂಡು ಗ್ರಾಮದ ಜನರು ಎರಡು ಚುನಾವಣೆ ಮುಗಿದ ಬಳಿಕವೂ ಕಾದು ಕೂತಿದ್ದಾರೆ. ಆದರೆ ಈ ಭರವಸೆ ಬರೀ ಭರವಸೆಯಾಗಿಯೇ ಉಳಿದಿತ್ತು.

ಗುಂಜಾರಾಂಪಂಜರ ಗ್ರಾಮದ ಟ್ರಕ್ ಚಾಲಕ  26 ವರ್ಷದ ರಂಜಿತ್ ನಾಯಕ್ ಹಾಗೂ ಅವರ ತಂದೆ ಕೈಲಾಸ್‌ ನಾಯಕ್‌ ಉಳಿದವರಂತೆ ಊರಿನ ಜನರು. ಸೇತುವೆ ನಿರ್ಮಿಸಿ ಕೊಡುತ್ತೇವೆ ಎಂದು ಹೇಳಿದ ರಾಜಕಾರಣಿಗಳ ಮಾತಿಗೆ ಸೆಡ್ಡು ಹೊಡೆದು ತಾವೇ ಸೇತುವೆಯನ್ನು ನಿರ್ಮಿಸಲು ಹೊರಟು ಯಶಸ್ವಿಯಾಗಿದ್ದಾರೆ.

ಕಲಹಂಡಿ ಮತ್ತು ನಬರಂಗಪುರ ಗ್ರಾಮದ ಜನರಿಗೆ ನದಿ ದಾಟಿ ಹೋಗುವುದೇ ಕಷ್ಟವಾಗುವ ಸಮಯದಲ್ಲಿ ರಂಜಿತ್‌ ನಾಯಕ್‌ ಕಾಂಕ್ರೀಟ್ ಸೇತುವೆಯನ್ನು ನಿರ್ಮಿಸಲು ಸಾಧ್ಯವಿಲ್ಲ. ನಿರ್ಮಿಸುವುದಾದರೆ ಮರದ ಕಂಬಗಳು ಹಾಗೂ ಬಿದಿರಿನಿಂದಲೇ ನಿರ್ಮಿಸಬೇಕೆಂದು ಯೋಜನೆ ಹಾಕಿಕೊಂಡು ಅದರ ತಯಾರಿಯನ್ನು ಮಾಡಿಕೊಳ್ಳುತ್ತಾರೆ.

ಇದೇ ವರ್ಷದ ಜೂನ್‌ ನಲ್ಲಿ ತನ್ನ ಊರಿಗೆ ಸೇತುವೆಯನ್ನು ಮಾಡಬೇಕೆಂದು ಹಗಲು ರಾತ್ರಿಯೆನ್ನದೇ ದುಡಿಯಲು ಆರಂಭಿಸುತ್ತಾರೆ. ಕೆಲಸ ಶುರುವಾದ ಕೆಲ ಸಮಯದಲ್ಲಿ ಮರದ ಕಂಬ ಹಾಗೂ ಇತರ ಸೌಲಭ್ಯಗಳ ಕೊರತೆ ಉಂಟಾಗುತ್ತದೆ. ಏನಾದರೂ ಮಾಡಿ ಮುಂದೆ ಇಟ್ಟ ಹೆಜ್ಜೆಯನ್ನು ಹಿಂದಕ್ಕಿಡಬಾರದೆಂದು ರಂಜಿತ್‌ ನಿರ್ಧರಿಸುತ್ತಾರೆ.

ಬಡ ಕುಟುಂಬಕ್ಕೆ ಕಷ್ಟಕಾಲದಲ್ಲಿ ಆಸರೆಗಿದದ್ದು, ರಂಜಿತ್‌ ಅವರ ಪತ್ನಿಯ ಬಂಗಾರ ಮಾತ್ರ. ಆದರೆ ಇದನ್ನೇ ರಂಜಿತ್‌ ಅವರು ಅಡವಿಟ್ಟು ಅದರಲ್ಲಿ ಬಂದ 70,000  ರೂ.ವನ್ನು ಸೇತುವೆ ನಿರ್ಮಾಣಕ್ಕಾಗಿ ಬಳಸುತ್ತಾರೆ. ಆ 70 ಸಾವಿರ ರೂ.ನಿಂದ ಸೇತುವೆಗೆ ಬೇಕಾದ ಬಿದಿರು ಮತ್ತು ಮರದ ಕಂಬಗಳನ್ನು ಮಾರುಕಟ್ಟೆಯಿಂದ ತರಿಸಿ, ಸೇತುವೆಯನ್ನು ನಿರ್ಮಿಸುತ್ತಾರೆ.

ತಂದೆ – ಮಗ ನಿರ್ಮಾಣ ಮಾಡಿದ ಸೇತುವೆ 100 ಕುಟುಂಬಕ್ಕೆ ಆಸರೆಯಾಗಿದೆ.

ಜನ ನದಿ ದಾಟಲು ಕಷ್ಟಪಡುತ್ತಿದ್ದರು. ಕೆಲವೊಮ್ಮೆ ನದಿ ದಾಟುವಾಗ ಜನರಿಗೆ ಹಾನಿ ಆಗುತ್ತಿತ್ತು. ನದಿ ನೀರಿನ ಹರಿವು ಹೆಚ್ಚಾರುವುದರಿಂದ ಪ್ರಾಣಕ್ಕೆ ಅಪಾಯವೂ ಹೆಚ್ಚು. ಎಲ್ಲಿಯವರೆಗೆ ಎಂದರೆ ವಾಹನಗಳು ಕೂಡ ನೀರಿನ ವೇಗಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು ಎಂದು ರಂಜಿತ್‌ ನಾಯಕ್‌ ಹೇಳುತ್ತಾರೆ.

ರಾಯಗಡ ಜಿಲ್ಲಾಧಿಕಾರಿ ರಂಜಿತ್‌ ನಾಯಕ್‌ ಅವರ ಕಾರ್ಯಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಒಡಿಶಾ ಸರ್ಕಾರವು ಹಿಂದುಳಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇತುವೆಗಳನ್ನು ನಿರ್ಮಿಸಲು ʼಬಿಜು ಸೇತು ಯೋಜನೆʼಯನ್ನು ಹಾಕಿಕೊಂಡಿದೆ. ಆದರೆ ಅದು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗುತ್ತಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.