34ಕ್ಕೇರಿದ ಫೋನಿ ಮರಣ ಮೃದಂಗ


Team Udayavani, May 6, 2019, 6:00 AM IST

PTI5_5_2019_000098B

ಒಡಿಶಾದಲ್ಲಿ ಫೋನಿ ಅಬ್ಬರಕ್ಕೆ ಸಿಲುಕಿ ಧರೆಗುರುಳಿದ ಮನೆಗಳಲ್ಲಿ ಅಳಿದುಳಿದ ವಸ್ತುಗಳಿಗಾಗಿ ತಡಕಾಡುತ್ತಿರುವ ಸಂತ್ರಸ್ತರು.

ಭುವನೇಶ್ವರ:ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಫೋನಿ ಚಂಡಮಾರುತಕ್ಕೆ ಆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 34ಕ್ಕೇರಿದೆ.

ಚಂಡಮಾರುತ ಕಾಲಿಟ್ಟ ಮೊದಲ ದಿನವಾದ ಶುಕ್ರವಾರದ ಅಂತ್ಯಕ್ಕೆ ಕೇವಲ 3 ಸಾವು ಎಂದು ಹೇಳಲಾಗಿತ್ತು. ರವಿವಾರದ ಹೊತ್ತಿಗೆ ಆ ಸಂಖ್ಯೆ 12ಕ್ಕೇರಿತ್ತು. ಸೋಮ ವಾರವೂ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಸಾವಿನ ಸಂಖ್ಯೆ 34ಕ್ಕೇರಿದೆ ಎಂದು ರಾಜ್ಯ ಸರಕಾರದ ಕಾರ್ಯದರ್ಶಿ ಎ.ಪಿ. ಪಾಧಿ ಹೇಳಿದ್ದಾರೆ. ಮೃತರಲ್ಲಿ 21 ಮಂದಿ ಪುರಿ ಜಿಲ್ಲೆಗೆ ಸೇರಿದವರಾಗಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ಚಂಡಮಾರುತ ಹಾವಳಿಗೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ನೆರವು ಘೋಷಿಸಿದ ಸಿಎಂ: ಪುರಿ, ಭುವನೇಶ್ವರ ಸೇರಿ ಎಲ್ಲೆಡೆ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಕುಡಿಯುವ ನೀರು, ರಸ್ತೆ, ದೂರವಾಣಿ ಮುಂತಾದ ಅಗತ್ಯ ಸೇವೆಗಳನ್ನು ತುರ್ತಾಗಿ ಪುನರುತ್ಥಾನಗೊಳಿಸಲಾಗುತ್ತಿದೆ. ಇದರ ನಡುವೆಯೇ ರವಿವಾರಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಸಂತ್ರಸ್ತರಿಗೆ ನೆರವು ಪ್ರಕಟಿಸಿದ್ದಾರೆ. ಚಂಡಮಾರುತದ ಪ್ರಭಾವಕ್ಕೆ ತುತ್ತಾಗಿರುವ ಪ್ರದೇಶಗಳನ್ನು ಅತಿ ಭೀಕರ, ಭೀಕರ ಹಾಗೂ ಗಂಭೀರವಾಗಿ ಹಾನಿಗೀಡಾಗಿರುವ ಪ್ರದೇಶಗಳೆಂದು ವಿಂಗಡಿಸಲಾಗಿದೆ. ಪುರಿ ಮತ್ತು ಖುರ್ದಾದ ಕೆಲ ಭಾಗಗಳಲ್ಲಿ (ಅತಿ ಭೀಕರ ಪರಿಣಾಮ) ಆಹಾರ ಸುರಕ್ಷಾ ಕಾಯ್ದೆಯ (ಎಫ್ಎಸ್‌ಎ) ವ್ಯಾಪ್ತಿಗೆ ಒಳಪಟ್ಟಿರುವ ಕುಟುಂಬಗಳಿಗೆ ತಲಾ 50 ಕೆಜಿ ಅಕ್ಕಿ, 2 ಸಾವಿರ ರು. ನಗದು ಮತ್ತು ಪಾಲಿಥಿನ್‌ ಶೀಟ್‌ಗಳನ್ನು ನೀಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಖುರ್ದಾದ ಇತರ ಪ್ರಾಂತ್ಯಗಳಲ್ಲಿನ (ಭೀಕರ ಪರಿಣಾಮ) ಎಫ್ಎಸ್‌ಎ ವ್ಯಾಪ್ತಿಗೊಳಪಡುವ ಕುಟುಂಬಗಳಿಗೆ ಒಂದು ತಿಂಗಳ ಅಕ್ಕಿ, 1 ಸಾವಿರ ರೂ. ನಗದು ಮತ್ತು ಪಾಲಿಥಿನ್‌ ಶೀಟುಗಳನ್ನು ನೀಡಲಾಗುತ್ತದೆ. ಇನ್ನು, ಕಟಕ್‌, ಕೇಂದ್ರಾಪರ, ಜಗತ್‌ಸಿಂಗ್‌ (ಗಂಭೀರ ಪರಿಣಾಮ)ಜಿಲ್ಲೆಗಳಲ್ಲಿನ ನಿರಾಶ್ರಿತ ಕುಟುಂಬಗಳಿಗೆ ತಿಂಗಳ ಕೋಟಾದ ಅಕ್ಕಿ ಮತ್ತು 500 ರೂ. ನೀಡಲಾ ಗುತ್ತದೆ ಎಂದು ತಿಳಿಸಿದ್ದಾರೆ.

ಸಿದ್ಧಗೊಳಿಸಿದ ಆಹಾರದ ಪೊಟ್ಟಣಗಳನ್ನು ಉಚಿತವಾಗಿ ಪೂರೈ ಸಲು ತೀರ್ಮಾನಿಸಲಾಗಿದೆ. ಜತೆಗೆ, ಚಂಡ ಮಾರುತ ಬಾಧಿತ ಎಲ್ಲಾ ಪ್ರದೇಶಗಳಿಗೆ ಕುಡಿ ಯುವ ನೀರಿನ ಸೌಕರ್ಯ ಪುನರುತ್ಥಾನ ಗೊಳಿಸುವ ಕಾಮಗಾರಿ ಭರದಿಂದ ಸಾಗಿದ್ದು, ರವಿವಾರಸಂಜೆ ವೇಳೆಗೆ, ಪುರಿಯ ಶೇ. 70 ರಷ್ಟು ಪ್ರಾಂತ್ಯಗಳಿಗೆ ಕುಡಿಯುವ ನೀರು ಲಭ್ಯ ವಾಗಲಿದೆ ಎಂದು ಪಟ್ನಾಯಕ್‌ ತಿಳಿಸಿದ್ದಾರೆ. ಇದೇ ವೇಳೆ ಪರಿಹಾರ ಕಾರ್ಯಕ್ಕಾಗಿ ಉ. ಪ್ರದೇಶ, ಗುಜರಾತ್‌ ಸೇರಿದಂತೆ ವಿವಿಧ ರಾಜ್ಯಗಳಿಂದ ನೆರವಿನ ಮಹಾಪೂರ ಹರಿದು ಬಂದಿದೆ.

ದೂರವಾಣಿ ಸೇವೆಗೆ ಆದ್ಯತೆ
ಒಡಿಶಾದಲ್ಲಿ ಅಸ್ತವ್ಯಸ್ತಗೊಂಡಿರುವ ದೂರವಾಣಿ ಸಂಪರ್ಕ ವ್ಯವಸ್ಥೆಯನ್ನು ಪುನರ್‌ ಪ್ರತಿಷ್ಠಾಪಿಸಲು ನಿರ್ಧರಿಸಿರುವ ಪ್ರಮುಖ ದೂರವಾಣಿ ಸಂಸ್ಥೆಗಳಾದ ಭಾರ್ತಿ ಏರ್‌ಟೆಲ್, ವೊಡಾಫೋನ್‌, ಐಡಿಯಾ ಮತ್ತು ರಿಲಯನ್ಸ್‌ ಜಿಯೋ ಸಂಸ್ಥೆಗಳು ಆ ರಾಜ್ಯದಲ್ಲಿ 930 ಬೇಸ್‌ ಟ್ರಾನ್ಸೀವರ್‌ ಕೇಂದ್ರಗಳನ್ನು (ಬಿಟಿಎಸ್‌) ಸ್ಥಾಪಿಸಲು ತೀರ್ಮಾನಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.