Video; 1500 ರೂ. ವಾಪಸ್‌ ನೀಡದಕ್ಕೆ ಹಗ್ಗದಿಂದ ಬೈಕ್‌ ಗೆ ಕೈ ಕಟ್ಟಿ ಎಳೆದೊಯ್ದ ದುರುಳರು…


Team Udayavani, Oct 18, 2022, 1:10 PM IST

1500 ರೂ. ವಾಪಸ್‌ ನೀಡದಕ್ಕೆ ಹಗ್ಗದಿಂದ ಬೈಕ್‌ ಗೆ ಕೈ ಕಟ್ಟಿ ಹಾಕಿ ಓಡಿಸಿದ ದುರುಳರು: ವೈರಲ್‌

ಒಡಿಶಾ: ಕೊಟ್ಟ ಹಣ ವಾಪಸ್‌ ಕೊಡದಕ್ಕೆ ವ್ಯಕ್ತಿಯೊಬ್ಬನನ್ನು ಅಮಾನವೀಯ ರೀತಿಯಲ್ಲಿ ನಡೆಸಿಕೊಂಡ ಘಟನೆ ಒಡಿಶಾದ ಕಟಕ್‌ ರಸ್ತೆಯಲ್ಲಿ  ಇತ್ತೀಚೆಗೆ( ಅ.16 ರಂದು) ನಡೆದಿದೆ. 22 ವರ್ಷದ ಜಗನ್ನಾಥ ಬೆಹೆರಾ ಎಂಬ ಯುವಕನ ಕೈಯನ್ನು ಹಗ್ಗದ ಒಂದು ತುದಿಗೆ ಕಟ್ಟಿ ಮತ್ತೊಂದು ತುದಿಯನ್ನು ಬೈಕ್‌ ಗೆ ಕಟ್ಟಿ ಅದರ ಹಿಂದೆ ಓಡುವಂತೆ ಮಾಡಿ, ಅಮಾನವೀಯವಾಗಿ ಹಿಂಸೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ವರದಿಯ ಪ್ರಕಾರ ಕಳೆದ ತಿಂಗಳು ಜಗನ್ನಾಥ ಬೆಹೆರಾ ತನ್ನ ಅಜ್ಜನ ಅಂತಿಮ ವಿಧಿವಿಧಾನವನ್ನು ನಡೆಸಲು ಆರೋಪಿಗಳಿಂದ 1500 ರೂ. ಪಡೆದುಕೊಂಡು ಅದನ್ನು 30 ದಿನಗಳ ಒಳಗೆ ವಾಪಸ್‌ ನೀಡುತ್ತೇನೆ ಎಂದು ಹೇಳಿದ್ದ. 30 ದಿನ ಕಳೆದರೂ ಜಗನ್ನಾಥ ಬೆಹೆರಾ ಹಣ ವಾಪಸ್‌ ನೀಡಿರಲಿಲ್ಲ. ಆ ಕಾರಣಕ್ಕಾಗಿ ಆರೋಪಿಗಳು ಜಗನ್ನಾಥ ಬೆಹೆರಾನನ್ನು ಕಟಕ್‌ ನ ನಡುರಸ್ತೆಯಲ್ಲೇ ಬೈಕ್‌ ಗೆ 12 ಅಡಿ ಉದ್ದದ ಹಗ್ಗವನ್ನು ಕಟ್ಟಿ, ಅದರ ಒಂದು ತುದಿಯನ್ನು ಜಗನ್ನಾಥ ಬೆಹೆರಾ ಅವರ ಕೈಗೆ ಕಟ್ಟಿ ಬೈಕ್‌ ಚಲಾಯಿಸಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಸಲಿಂಗಕಾಮಿ ಕಥಾಹಂದರ… ಗಲ್ಫ್‌ ದೇಶದಲ್ಲಿ ಮೋಹನ್‌ ಲಾಲ್‌‌ ʼಮಾನ್ ಸ್ಟರ್‌ʼ ಸಿನಿಮಾ ಬ್ಯಾನ್

ಆರೋಪಿಗಳು ಕಟಕ್‌ ನ ಸ್ಟುವರ್ಟ್‌ಪಟ್ನಾದಿಂದ ಸುತಾಹತ್ ವರೆಗೆ 20 ಕಿ.ಮೀ ದೂರ ಕೈಗೆ ಹಗ್ಗ ಕಟ್ಟಿ ಬೈಕ್‌ ಚಲಾಯಿಸಿಕೊಂಡು  ಹೋಗಿದ್ದಾರೆ. ಆರೋಪಿಗಳ ಜೊತೆ ಅವರ ಸ್ನೇಹಿತರು ಈ ಅಮಾನವೀಯ ದೃಶ್ಯವನ್ನು ಮೊಬೈಲ್‌ ನಲ್ಲಿ ಚಿತ್ರೀಕರಿಸಿದ್ದಾರೆ. ಇದಾದ ಬಳಿಕ ಜಗನ್ನಾಥ ಬೆಹೆರಾ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಅಕ್ರಮ ಬಂಧನ, ಅಪಹರಣ, ಕೊಲೆ ಯತ್ನದ ಕೇಸ್‌ ದಾಖಲಿಸಿ ಬಂಧಿಸಿದ್ದಾರೆ.

ಹಗ್ಗವನ್ನು ಕೈಗೆ ಕಟ್ಟಿ ಬೈಕ್‌ ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪೊಲೀಸರು ಆರೋಪಿಗಳ ಬೈಕ್‌, ಕೃತ್ಯಕ್ಕೆ ಬಳಸಿದ ಹಗ್ಗವನ್ನು ಜಪ್ತಿ ಮಾಡಿದ್ದಾರೆ. ಇದೇ ವೇಳೆ  ಸಂಚಾರಿ ಪೊಲೀಸರನ್ನು ಘಟನೆ ನಡೆದಾಗ ಏನು ಮಾಡುತ್ತಿದ್ದೀರಿ ಎಂದು ಪೊಲೀಸ್ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.