![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 20, 2023, 9:22 PM IST
ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮೊಹಮ್ಮದ್ ಅಜೀಂ ಅಲಿಯಾಸ್ ಅಜ್ಜು ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ರೇವತಿ ಪಟ್ಟಣದ ನಿವಾಸಿಯಾಗಿರುವ ಅಜೀಂ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪ, ಎರಡು ಸಮುದಾಯಗಳ ನಡುವೆ ದ್ವೇಷ ಬೆಳೆಸುವ ಹಾಗೂ ಧಾರ್ಮಿಕ ಸೌಹಾರ್ದತೆ ಕದಡಲು ಯತ್ನಿಸಿದ ಆರೋಪವಿದೆ ಎಂದು ರೇವತಿ ಪೊಲೀಸ್ ಠಾಣೆಯ ಉಸ್ತುವಾರಿ ಹರೇಂದ್ರ ಸಿಂಗ್ ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.