ಓಲ್ಡ್ ಗೋವಾ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ಫೆಸ್ಟ್: ಲಕ್ಷಾಂತರ ಭಕ್ತರು ಭಾಗಿ

ಗೋವಾ ಸಿಎಂ ಸಾವಂತ್ ಸೇರಿ ವಿವಿಧ ರಾಜ್ಯಗಳ ಚರ್ಚ್ ಗಳ ಧರ್ಮಗುರುಗಳು ಭಾಗಿ

Team Udayavani, Dec 3, 2022, 8:13 PM IST

1-dadasd

ಪಣಜಿ: ಸಂತ ಫ್ರಾನ್ಸಿಸ್ ಜೇವಿಯರ್ ರವರು ಏಸುಕ್ರಿಸ್ತರ ಬಗ್ಗೆ ಬೋಧನೆ ಮಾಡುವ ಮೂಲಕ ಜನರಲ್ಲಿ ಸಾಮರಸ್ಯ ಸೃಷ್ಠಿಸಲು ಪ್ರಯತ್ನಿಸಿದರು. ಸಂತ ಫ್ರಾನ್ಸಿಸ್ ಜೇವಿಯರ್ ರವರು ಕೈಯ್ಯಲ್ಲಿ ಗಂಟೆ ಮತ್ತು ಶಿಲುಬೆಯನ್ನು ಹಿಡಿದು ಹೊರಬರುತ್ತಿದ್ದರು. ಜನರನ್ನು ಒಗ್ಗೂಡಿಸಿ ಅವರು ಏಸುವಿನ ಕಥೆಗಳನ್ನು ಹಳುತ್ತಿದ್ದರು ಮತ್ತು ಪ್ರಾರ್ಥಿಸಲು ಹೇಳುತ್ತಿದ್ದರು, ಅದು ಅದ್ವಿತೀಯ ಬೋಧನಾ ವಿಧಾನವಾಗಿತ್ತು ಎಂದು ಬಾಮ್ ಜೀಸಸ್ ಬಾಸಿಲಿಕಾ ರೆಕ್ಟರ್ ಫಾದರ್  ಪ್ಯಾಟ್ರಿಸಿಯೋ ಫರ್ನಾಂಡಿಸ್ ಆಶೀರ್ವಚನ ನೀಡಿದರು.

ಶನಿವಾರ ನಡೆದ ಜಗತ್ಪ್ರಸಿದ್ಧ ಓಲ್ಡ್ ಗೋವಾದ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ನ ಫೆಸ್ಟ್ ನಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪ್ರಾರ್ಥನಾ ಸಭೆಗಳಲ್ಲಿ ಪಾಲ್ಗೊಂಡರು. ಈ ಪ್ರಾರ್ಥನಾ ಸಭೆಯಲ್ಲಿ ಫಾದರ್  ಪ್ಯಾಟ್ರಿಸಿಯೋ ಫರ್ನಾಂಡಿಸ್ ಆಶೀರ್ವಚನ ನೀಡಿದರು.

ಸಂತ ಫ್ರಾನ್ಸಿಸ್ ಕ್ಸೇವಿಯರ್ ರವರು 1541 ರಲ್ಲಿ ಲಿಸ್ಬನ್ ನಿಂದ ಪ್ರಯಾಣ ಬೆಳೆಸಿದರು ಮತ್ತು ಮೇ 6, 1542 ರಂದು ಭಾರತವನ್ನು ತಲುಪಿದರು. ಅವರು ಗೋವಾಕ್ಕೆ ಬರಲು ಒಂದು ವರ್ಷ ಒಂದು ತಿಂಗಳು ನಾಲ್ಕು ದಿನ ತೆಗೆದುಕೊಂಡರು. ಗೋವಾಕ್ಕೆ ಬಂದ ನಂತರ ಪ್ರೀತಿ, ಸೌಹಾರ್ದತೆಯ ಸಂದೇಶ ಸಾರಲು ಪ್ರಯತ್ನಿಸಿದರು. ಗೋವಾದಿಂದ ವಸಾಯಿ, ತಿರುವನಂತಪುರ, ಮದ್ರಾಸ್, ಮೈಲಾಪುರ್, ಮಲಯ, ಮಲಕ್ಕಾ, ಇಂಡೋನೇಷಿಯಾ, ಫಿಲಿಪೈನ್ಸ್, ಜಾವಾ, ಬೊರ್ನಿಯೊ, ಜಪಾನ್ ದೇಶಗಳಿಗೂ ತೆರಳಿ ಧರ್ಮ ಪ್ರಚಾರ ಮಾಡಿದರು ಎಂದು ಫಾದರ್ ಪ್ಯಾಟ್ರಿಸಿಯೋ ನುಡಿದರು.

ಓಲ್ಡ್ ಗೋವಾ ಫೆಸ್ಟ್ ನ ಪ್ರಾರ್ಥನಾ ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ರಾಜ್ಯದ ಶಾಸಕರು ಮತ್ತು ಸಚಿವರು, ವಿವಿಧ ರಾಜ್ಯಗಳ ಚರ್ಚ್ ಗಳ ಧರ್ಮಗುರುಗಳು, ದೇಶವಿದೇಶಗಳಿಂದ ಆಗಮಿಸಿದ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು. ಶನಿವಾರ ಬೆಳಿಗ್ಗೆಯಿಂದ ವಿವಿಧ ಭಾಷೆಗಳಲ್ಲಿ ಪ್ರಾರ್ಥನಾ ಸಭೆ ಜರುಗಿತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.