Property Dispute: ವೃದ್ಧ ಸಹೋದರಿಯರನ್ನು ಅಪಹರಿಸಿ ಮೂರೇ ಗಂಟೆಯಲ್ಲಿ ಸಿಕ್ಕಿಬಿದ್ದರು


Team Udayavani, Sep 14, 2024, 5:19 PM IST

Property Dispute: ವೃದ್ಧ ಸಹೋದರಿಯರನ್ನು ಅಪಹರಿಸಿ ಮೂರೇ ಗಂಟೆಯಲ್ಲಿ ಸಿಕ್ಕಿಬಿದ್ದರು

ಅಜ್ಮೀರ್: ಆಸ್ತಿ ವಿವಾದಕ್ಕೆ ಸಂಬಂಧಿಸಿ ತಂಡವೊಂದು ಇಬ್ಬರು ವೃದ್ಧ ಸಹೋದರಿಯರನ್ನು ಕಾರಿನಲ್ಲಿ ಅಪಹರಿಸಿದ ಘಟನೆ ನಡೆದಿದ್ದು ಘಟನೆ ನಡೆದ ಮೂರೇ ಗಂಟೆಯಲ್ಲಿ ಓರ್ವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಏನಿದು ಪ್ರಕರಣ:
ಅಜ್ಮೀರ್‌ನ ಕ್ರಿಶ್ಚಿಯನ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಇಬ್ಬರು ವೃದ್ಧ ಸಹೋದರಿಯರನ್ನು ಬೆಳಿಗ್ಗೆ ಸುಮಾರು ೭ ಗಂಟೆಯ ಸುಮಾರಿಗೆ ನಾಲ್ವರು ದುಷ್ಕರ್ಮಿಗಳ ತಂಡ ಮನೆಗೆ ಅಕ್ರಮ ಪ್ರವೇಶಿಸಿ ಕಾರಿನಲ್ಲಿ ಅಪಹರಿಸಿದ್ದಾರೆ. ವೃದ್ಧ ಸಹೋದರಿಯರನ್ನು ಅಪಹರಿಸುವುದನ್ನು ಅಲ್ಲಿನ ನೆರೆಮನೆಯವರು ಗಮನಿಸಿದ್ದು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಅಪಹರಣಕಾರರನ್ನು ಬೆನ್ನಟ್ಟಿದ್ದಾರೆ ಸುಮಾರು ಮೂರೂ ಗಂಟೆಗಳ ಕಾಲ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡಿದ ತಂಡಕ್ಕೆ ಇನ್ನು ಸಿಕ್ಕಿಬೀಳುತ್ತೇವೆ ಎಂದು ಹೆದರಿ ಇಬ್ಬರೂ ವೃದ್ಧ ಮಹಿಳೆಯರನ್ನು ಜೈಪುರ ರಸ್ತೆಯ ಯೂನಿವರ್ಸಿಟಿ ಇಂಟರ್ಸೆಕ್ಷನ್ ಬಳಿ ಕಾರಿನಿಂದ ಇಳಿಸಿ ಪರಾರಿಯಾಗಿದ್ದಾರೆ.

ಈ ವೇಳೆ ಗಸ್ತಿನಲ್ಲಿದ್ದ ಪೊಲೀಸರನ್ನು ಕಂಡು ಮೂವರು ಗಡಿಯಿಂದ ಜಿಗಿದು ಪರಾರಿಯಾಗಿದ್ದಾರೆ ಕೂಡಲೇ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಅತನ ಬಳಿಯಿದ್ದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅಪಹರಣಕ್ಕೊಳಗಾದ ಮಹಿಳೆಯರ ಬಳಿ ಮಾಹಿತಿ ಕಲೆ ಹಾಕಿದಾಗ ನಾಲ್ವರು ಆರೋಪಿಗಳು ತಮ್ಮನ್ನು ಅಪಹರಿಸಿದ್ದರು ಅದರಲ್ಲಿ ಓರ್ವನ ಪರಿಚಯ ನಮಗಿದೆ ಆತ ನಮ್ಮ ಅಸ್ತಿ ಕಬಳಿಸಲು ಈ ಹಿಂದೆಯೂ ಯತ್ನಿಸಿದ್ದ ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಈ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ, ಇದೆ ವಿಚಾರಕ್ಕೆ ನಮ್ಮನ್ನು ಅಪಹರಿಸಿ ಅಸ್ತಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಎಂದು ಪದೇ ಪದೇ ಹೇಳುತಿದ್ದ ಬಳಿಕ ಕಾರಿನಲ್ಲಿ ಥಳಿಸಿದ್ದಾರೆ ಮತ್ತು ರಿವಾಲ್ವರ್ ಮತ್ತು ಕತ್ತರಿ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹೆಚ್ಚುವರಿ ಎಸ್ಪಿ ದುರ್ಗ್ ಸಿಂಗ್, ಇಬ್ಬರು ಸಹೋದರಿಯರಾದ ಡಾ. ರಮಾರಾಣಿ ಜೈನ್ (72) ಮತ್ತು ನಿವೃತ್ತ ಪ್ರಾಂಶುಪಾಲರಾದ ಕುಂಕುಮ್ ಜೈನ್ (62) ಅವರನ್ನು ಶನಿವಾರ ಬೆಳಿಗ್ಗೆ ಕ್ರಿಶ್ಚಿಯನ್ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದ ವಿಚಾರ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರಿಗೆ ಜಿಲ್ಲೆಯಲ್ಲಿ ದಿಗ್ಬಂಧನ ವಿಧಿಸಲಾಯಿತು. ಕ್ರಿಶ್ಚಿಯನ್ ಗಂಜ್, ಸಿವಿಲ್ ಲೈನ್ ಮತ್ತು ಕೊತ್ವಾಲಿ ಠಾಣೆ ಪೊಲೀಸರು ಆರೋಪಿಯನ್ನು ಬೆನ್ನಟ್ಟಿದ್ದಾರೆ. ಇದರಿಂದ ಆರೋಪಿಗಳು ಹೆದರಿ ಸಹೋದರಿಯರನ್ನು ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾರೆ. ಅದೇ ಸಮಯದಲ್ಲಿ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು ಆರೋಪಿ ಮುಖೇಶ್ ನನ್ನು ಬಂಧಿಸಿ ಆತನ ಬಳಿಯಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಪಹರಣ ನಡೆಸಲಾಗಿದೆ ಎಂದು ಹೇಳಲಾಗಿದ್ದು ಈ ಕೃತ್ಯದ ಪ್ರಮುಖ ಆರೋಪಿಯನ್ನು ಆದಿಲ್ ಶೇಖ್ ಎಂದು ಹೇಳಲಾಗಿದೆ. ಆಸ್ತಿಗೆ ಸಂಬಂಧಿಸಿದಂತೆ ಈಗಾಗಲೇ ಕ್ರಿಶ್ಚಿಯನ್ ಗಂಜ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Thalapathy 69: ಕ್ರೀಡಾ ಜ್ಯೋತಿ ಹಿಡಿದ ದಳಪತಿ; 69ನೇ ಸಿನಿಮಾದ ಸ್ಪೆಷೆಲ್‌ ಅಪ್ಡೇಟ್‌ ಔಟ್

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

1-asdsadasd

One Nation One Election; ಏಕಕಾಲದಲ್ಲಿ ಚುನಾವಣೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

School Bus: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ…

1-haryanna

Haryana ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್: ಏನೇನಿದೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.