Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು
ಕುಚೇಷ್ಟೆ ಆದರೂ ಗಂಭೀರವಾದ ವಿಷಯ... ಭದ್ರತಾ ಏಜೆನ್ಸಿಗಳೊಂದಿಗೆ ಮಾತನಾಡುತ್ತಿದ್ದೇವೆ
Team Udayavani, Oct 17, 2024, 7:06 PM IST
ಹೊಸದಿಲ್ಲಿ: ವಿವಿಧ ವಿಮಾನಗಳಿಗೆ ಇತ್ತೀಚೆಗೆ ನಿರಂತರವಾಗಿ ಹುಸಿ ಬಾಂಬ್ ಕರೆಗಳ ಕುರಿತು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ನಾವು ಯಾವುದೇ ರೀತಿಯ ಪಿತೂರಿಯ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ, ಆದರೆ ಈ ಕರೆಗಳು ಎಲ್ಲಿಂದ ಬರುತ್ತಿವೆ ಎಂದು ನಮಗೆ ಸ್ವಲ್ಪಮಟ್ಟಿಗೆ ನಮಗೆ ತಿಳಿದಿದೆ” ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಗುರುವಾರ(ಅ17) ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ”ಕೆಲವು ಅಪ್ರಾಪ್ತ ವಯಸ್ಕರು ಮತ್ತು ಕುಚೇಷ್ಟೆಗಾರರು ಮಾಡುತ್ತಿದ್ದು,ಯಾವುದೇ ರೀತಿಯ ಪಿತೂರಿ ಇಲ್ಲ, ನಾವು ಏರ್ಲೈನ್ಸ್, ಭದ್ರತಾ ಏಜೆನ್ಸಿಗಳೊಂದಿಗೆ ಮಾತನಾಡುತ್ತಿದ್ದೇವೆ. ಸಚಿವಾಲಯದಲ್ಲಿಯೂ ಸಮಾಲೋಚನೆ ನಡೆಯುತ್ತಿದೆ” ಎಂದರು.
ನಮ್ಮ ಕಡೆಯಿಂದ, ನಾವು ಏನು ಮಾಡಬಹುದು ಎಂಬುದನ್ನು ನಾವು ನೋಡಲಿದ್ದೇವೆ. ನಾವು ಸಚಿವಾಲಯದೊಳಗಿನ ವಿಮಾನಯಾನ ಸಂಸ್ಥೆಗಳು, ಭದ್ರತಾ ಏಜೆನ್ಸಿಗಳೊಂದಿಗೆ ಮಾತನಾಡುತ್ತಿದ್ದೇವೆ. ಸಮಾಲೋಚನೆಗಳು ನಡೆಯುತ್ತಿವೆ” ಎಂದು ಸಚಿವ ಹೇಳಿಕೆ ನೀಡಿದ್ದಾರೆ.
ಗಂಭೀರವಾದ ವಿಷಯ
ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿ “ಬಾಂಬ್ ಬೆದರಿಕೆಗಳು ಬಹಳ ಗಂಭೀರವಾದ ವಿಷಯವಾಗಿದೆ. ವಿದೇಶಾಂಗ ಇಲಾಖೆ ಸೇರಿದಂತೆ ನಮ್ಮ ಸಂಬಂಧಿತ ಏಜೆನ್ಸಿಗಳು ಈ ವಿಷಯವನ್ನು ಪರಿಶೀಲಿಸುತ್ತಿವೆ. ಕೆಲವು ಎಫ್ಐಆರ್ಗಳನ್ನು ಸಹ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.
ನಿರಂತರ ಹುಚ್ಚಾಟ
ದೇಶದ ವಿವಿಧೆಡೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ 20 ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಕರೆ ಬಂದಿದ್ದು, ಹಾರಾಟದ ಮೇಲೆ ಪರಿಣಾಮ ಬೀರಿತ್ತು. ಪೊಲೀಸರು ಕಾರ್ಯಪ್ರವೃತ್ತರಾಗಿ ಅಪ್ರಾಪ್ತ ವಯಸ್ಕನೊಬ್ಬನನ್ನು ಬಂಧಿಸಿದ್ದಾರೆ. ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಠಿನ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ
Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್
Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ನ 8 ಬೋಗಿಗಳು
Lawrwnce: ಬಿಷ್ಣೋಯಿ ಗ್ಯಾಂಗ್ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ
Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.