ಒಂದು ದೇಶ ಒಂದು ಚುನಾವಣೆ ಜಾರಿ ನಿರೀಕ್ಷೆ; ಮೋದಿ ಮೂರನೇ ಅವಧಿಯಲ್ಲಿ ಹಲವು ನಿರೀಕ್ಷೆಗಳು

ಮೊದಲ 100 ದಿನಗಳ ಬಗ್ಗೆ ಹೆಚ್ಚಿದ ಕುತೂಹಲ

Team Udayavani, Jun 8, 2024, 8:10 AM IST

ಒಂದು ದೇಶ ಒಂದು ಚುನಾವಣೆ ಜಾರಿ ನಿರೀಕ್ಷೆ

ಹೊಸದಿಲ್ಲಿ: ಭಾನುವಾರ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ಸರಕಾರ‌ದ ಮುಂದೆ ಹಲವು ಸವಾಲುಗಳಿವೆ. ಮೈತ್ರಿ ಸರಕಾರ‌ವನ್ನು ನಿಭಾಯಿಸಿಕೊಂಡು ಮತದಾರರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಬೇಕಾಗಿದೆ. ಸರಕಾರಿ ಉದ್ಯಮಗಳನ್ನು ಖಾಸಗೀಕರಣಗೊಳಿಸು ವುದು, ಹೂಡಿಕೆ ಹಿಂದೆಗೆತದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗುತ್ತದೆ. ಮುಂದಿನ ಐದು ವರ್ಷಗಳ ಮೋದಿ ಸರಕಾರ‌ ಜಾರಿ ಮಾಡಬಹುದಾದ ಯೋಜನೆಗಳ ಕಿರುವಿವರ ಇಲ್ಲಿದೆ.

ಒಂದು ದೇಶ ಒಂದು ಚುನಾವಣೆ: ಹಿಂದಿನ ಅವಧಿಯಲ್ಲಿ ಮೋದಿ ಸರಕಾರ‌ ಒಂದು ದೇಶ ಒಂದು ಚುನಾವಣೆ ನಡೆಸುವ ಬಗ್ಗೆ ಪ್ರಸ್ತಾವಿಸಿತ್ತು. ಲೋಕಸಭಾ ಚುನಾವಣೆ ಜೊತೆಗೆಯೇ ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನೂ ನಡೆಸುವ ಚಿಂತನೆ ಮಾಡಲಾಗಿತ್ತು. ಐದು ವರ್ಷ ಪೂರ್ತಿ ಚುನಾವಣೆಗಳಲ್ಲಿ ಕಾಲ ಕಳೆಯುವ ಬದಲು, ಅಭಿವೃದ್ಧಿಗೆ ಆದ್ಯತೆ ಕೊಡಬಹುದು ಎಂಬುದು ಇದರ ಹಿಂದಿನ ಉದ್ದೇಶ. ಈಗಾಗಲೇ ಇದರ ಸಾಧಕ, ಬಾಧಕಗಳ ಬಗ್ಗೆ ಸುದೀರ್ಘ‌ ಚರ್ಚೆಯಾಗಿದೆ. ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಇದುವರೆಗೆ ಆಗಿಲ್ಲ. 3ನೇ ಅವಧಿಯಲ್ಲಿ ಈ ಬಗ್ಗೆ ಬಲವಾದ ನಿರ್ಧಾರವಾಗುವ ನಿರೀಕ್ಷೆಯಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿ: ಬಿಜೆಪಿ ದೀರ್ಘ‌ಕಾಲದಿಂದ ಏಕರೂಪ ನಾಗರಿಕ ಸಂಹಿತೆ ಜಾರಿಯ ಬಗ್ಗೆ ಹೇಳಿಕೊಂಡು ಬಂದಿದೆ. 2023ರ ಹೊತ್ತಿಗೆ ಕೇಂದ್ರ ಸರಕಾರ‌ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಪ್ರಸ್ತಾವಿಸಿತ್ತು. ಬಿಜೆಪಿ ತನ್ನ ಚುನಾವಣ ಪ್ರಣಾಳಿಕೆಯಲ್ಲೂ, ಏಕರೂಪ ಸಂಹಿತೆಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಸದ್ಯ ಸಮ್ಮಿಶ್ರ ಸರಕಾರ‌ ಇರುವುದರಿಂದ ಈ ಬಗ್ಗೆ ಬಿಜೆಪಿ ಸರಕಾರ‌ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಎದುರಾಗಿದೆ.

ಮೊದಲ 100 ದಿನಗಳ ಕಾರ್ಯಕ್ರಮ ಸಿದ್ಧ
ಮೇ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣೆ ಭಾಷಣ ಮಾಡಿದ್ದ ನರೇಂದ್ರ ಮೋದಿ, ಈಗಾಗಲೇ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಏನು ಮಾಡಬೇಕೆಂಬ ಯೋಜನೆ ಸಿದ್ಧವಾಗಿದೆ. ಜೂ.4ಕ್ಕೆ ಫ‌ಲಿತಾಂಶ ಬಂದ ಕೂಡಲೇ ಅದರ ಜಾರಿಗೆ ಸಿದ್ಧತೆ ಆರಂಭವಾಗುತ್ತದೆ ಎಂದಿದ್ದರು. ಜೂ.2ರಂದು ಅವರು ಅಧಿಕಾರಿಗಳೊಂದಿಗೆ ಸಭೆಯನ್ನೂ ನಡೆಸಿದ್ದರು. ಅಧಿಕಾರಿಗಳ 10 ತಂಡವನ್ನು ರಚಿಸಿ 100 ದಿನಗಳ ಯೋಜನೆ ಜಾರಿಗೆ ಮೋದಿ ಯೋಜಿಸಿದ್ದಾರೆ. ಜೂ.4ರಂದು ಫ‌ಲಿತಾಂಶ ಪ್ರಕಟವಾದ ಬಳಿಕ ಖುದ್ದು ಪ್ರಧಾನಿ ಮೋದಿಯವರೇ ಹೊಸದಿಲ್ಲಿಯಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಸಭೆಯನ್ನೂ ನಡೆಸಿದ್ದರು. ಇದೀಗ ಮೊದಲ 100 ದಿನಗಳ ಬಗ್ಗೆ ದೇಶಾದ್ಯಂತ ಕುತೂಹಲ ಹೆಚ್ಚಾಗಿದೆ.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bridge

Bihar ಸೇತುವೆ ಕುಸಿತ: 3 ತಿಂಗಳಲ್ಲಿ 18ನೇ ಘಟನೆ!

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Amit Shah 2

MSP; ಕರ್ನಾಟಕದಲ್ಲಿ ಕಾಂಗ್ರೆಸ್‌ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್‌ ಶಾ

delhi air

Air pollution: ಗಾಳಿ ಗುಣಮಟ್ಟ ಆಯೋಗಕ್ಕೆ ಸುಪ್ರೀಂಕೋರ್ಟ್‌ ತರಾಟೆ

1-eewqeqwewq

Sikkim ಭಾರೀ ಮಳೆ: ಹಲವೆಡೆ ಭೂಕುಸಿತ, ಸೇತುವೆಗಳಿಗೆ ಹಾನಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.