2029ರಿಂದ ಒಂದು ದೇಶ ಒಂದು ಚುನಾವಣೆ ಜಾರಿ? ಏನಿದು ಸಮಿತಿಯ ವರದಿ?


Team Udayavani, Mar 15, 2024, 6:40 AM IST

voter

ಹೊಸದಿಲ್ಲಿ: ಬಹು ನಿರೀಕ್ಷಿತ “ಒಂದು ದೇಶ; ಒಂದು ಚುನಾವಣೆ’ಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮ ನಾಥ್‌ ಕೋವಿಂದ್‌ ನೇತೃತ್ವದ ಸಮಿತಿ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಕೆ ಮಾಡಿದೆ. ಈ ಶಿಫಾರಸನ್ನು ಸಂಸತ್ತು ಅನುಮೋದಿಸಿದಲ್ಲಿ 2029ರಿಂದ ಜಾರಿಯಾಗಲಿದೆ.

ಈಗ ಸರಕಾರ ಅವಧಿ ಮುಗಿದಾಗ, ಸರಕಾರಗಳು ಪತನ ಗೊಂಡಾಗ ವಿವಿಧ ರಾಜ್ಯಗಳಲ್ಲಿ, ಕೇಂದ್ರದಲ್ಲಿ ಚುನಾವಣೆಗಳು ಆಗಾಗ ನಡೆಯುತ್ತಿವೆ. ಇದರಿಂದ ಸರಕಾರ, ಉದ್ದಿಮೆಗಳು, ಕೆಲಸಗಾರರು, ಕೋರ್ಟ್‌ಗಳು, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಮೇಲೆ ಹೊರೆಯಾಗುತ್ತಿದೆ. ಹೀಗಾಗಿ ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಒಮ್ಮತಾಭಿಪ್ರಾಯ ಹೊಂದಿದೆ ಎಂದು ವರದಿ ಉಲ್ಲೇಖೀಸಿದೆ.

ಅನುಕೂಲ
ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದ್ದ ಮೊದಲ 2 ದಶಕಗಳ ಅವಧಿಯಲ್ಲಿ ಏಕಕಾಲದಲ್ಲಿ ಚುನಾವಣೆ ನಡೆದಿತ್ತು. ಅದರಿಂದ ದೇಶದ ಬೊಕ್ಕಸಕ್ಕೆ, ಸಮಾಜಕ್ಕೆ ಅನುಕೂಲವಾಗಿತ್ತು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ವಿವಿಧ ಪಕ್ಷಗಳು, ಚುನಾವಣ ಆಯೋಗ, ಆರ್ಥಿಕ, ಕಾನೂನು ಸಹಿತ ಪ್ರಮುಖ ಕ್ಷೇತ್ರಗಳ ತಜ್ಞರ ಜತೆಗೆ ವಿಚಾರ ವಿನಿಮಯ ನಡೆಸಿದಾಗ ಒಂದೇ ಹಂತದ ಚುನಾವಣೆಯೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಮಿತಿ ಹೇಳಿದೆ. ಈ ವ್ಯವಸ್ಥೆಯ ಮೂಲಕ ದೇಶದ ಅಭಿವೃದ್ಧಿಯ ಗತಿಯನ್ನು ಹೆಚ್ಚಿಸಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯ ತಳಹದಿಯನ್ನು ಮತ್ತಷ್ಟು ಭದ್ರಪಡಿಸುವುದಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಸಮಿತಿ ಹೇಳಿದೆ.

ಹೊಸ ಚುನಾವಣೆ
ಅವಧಿಗೆ ಮುನ್ನ ಲೋಕಸಭೆ ವಿಸರ್ಜನೆಗೊಂಡರೆ, ಅವಿಶ್ವಾಸ ಗೊತ್ತುವಳಿ ನಿರ್ಣಯದ ಮೂಲಕ ಸರಕಾರ ಪತನಗೊಂಡರೆ ಉಳಿದ ಅವಧಿಗೆ ಹೊಸ ಚುನಾವಣೆ ನಡೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಆದರೆ ರಾಜ್ಯ ವಿಧಾನಸಭೆಗಳಿಗೆ ಸಂಬಂಧಿಸಿ ಕೋವಿಂದ್‌ ಸಮಿತಿ ಒಂದೋ ನಿಗದಿತ ರಾಜ್ಯ ವಿಧಾನಸಭೆಯ ಅವಧಿ ಮುಗಿದಿದ್ದರೆ ಅದನ್ನು ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಬೇಕು. ಮತ್ತೂಂದು ರಾಜ್ಯದ ವಿಧಾನಸಭೆ ಅವಧಿ ಮುಕ್ತಾಯ ಬಾಕಿ ಇದ್ದರೆ ಕಡಿತಗೊಳಿಸಬೇಕು ಎಂದಿದೆ.

ಸಂವಿಧಾನ ತಿದ್ದುಪಡಿಗೆ ಶಿಫಾರಸು
ಈ ಸಂಬಂಧ ಸಂವಿಧಾನದ 5 ವಿಧಿಗಳಿಗೆ ತಿದ್ದುಪಡಿ ತರಬೇಕು. ಅವುಗಳಿಗೆ ರಾಜ್ಯ ವಿಧಾನಸಭೆಗಳ ಸಮ್ಮತಿಯ ಅಗತ್ಯವಿಲ್ಲ. ಇದರ ಜತೆಗೆ ದೇಶಕ್ಕೆ ಅನ್ವಯವಾಗುವ ಒಂದೇ ರೀತಿಯ ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿ ಹೊಂದಬೇಕು ಎಂದಿದೆ.

ಏನಿದು ಸಮಿತಿಯ ವರದಿ?
ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಒಂದು ದೇಶ; ಒಂದು ಚುನಾವಣೆ ಅಧ್ಯಯನಕ್ಕೆ ಸಮಿತಿ.

ವಿಧಾನಸಭೆ, ಲೋಕಸಭೆ, ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ಸಾಧ್ಯವೇ ಎಂಬ ಅಧ್ಯಯನ.
ಹಲವು ಪಕ್ಷಗಳ ಪ್ರತಿನಿಧಿಗಳು, ಕಾನೂನು ಸಹಿತ ವಿವಿಧ ಕ್ಷೇತ್ರಗಳ ತಜ್ಞರ ಜತೆ ಸಮಿತಿ ಚರ್ಚೆ.
ಈ ಹಂತದಲ್ಲಿ ಪದೇಪದೆ ಚುನಾವಣೆ ಬದಲು ಏಕ ರೀತಿಯ ಚುನಾವಣೆ ಬಗ್ಗೆ ಅಭಿಪ್ರಾಯ ಸಲ್ಲಿಕೆ.

ವರದಿಯಲ್ಲಿ ಏನಿದೆ?
ಮೊದಲ ಹಂತದಲ್ಲಿ ರಾಜ್ಯ ವಿಧಾನಸಭೆಗಳು, ಲೋಕಸಭೆಗೆ ಚುನಾವಣೆ ನಡೆಯಬೇಕು.
ಅವುಗಳು ಪೂರ್ತಿಗೊಂಡ 100 ದಿನಗಳ ಬಳಿಕ ಪಂಚಾಯತ್‌ಗಳು, ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ.
ಅತಂತ್ರ ವಿಧಾನಸಭೆ, ಲೋಕಸಭೆ ನಿರ್ಮಾಣಗೊಂಡರೆ, ವಿಶ್ವಾಸಮತ ಯಾಚನೆ ವೇಳೆ ಸರಕಾರ ಪತನಗೊಂಡರೆ ಆ ನಿಗದಿತ 5 ವರ್ಷಗಳ ಉಳಿದ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕು.
3 ಹಂತಗಳ ಚುನಾವಣೆಯಲ್ಲಿ ದೇಶಕ್ಕೆ ಅನ್ವಯವಾಗುವಂತೆ ಒಂದೇ ರೀತಿಯ ಮತದಾರರ ಪಟ್ಟಿ, ಮತದಾರರ ಗುರುತಿನ ಚೀಟಿ.

ರಾಜ್ಯದ ಪ್ರಸಕ್ತ ವಿಧಾನಸಭೆ ಅವಧಿ ಒಂದು ವರ್ಷ ವಿಸ್ತರಣೆ?
ಈ ಶಿಫಾರಸು ಜಾರಿಗೆ ಬಂದಲ್ಲಿ ಕರ್ನಾಟಕದ ಹಾಲಿ ವಿಧಾನಸಭೆಯ ಅವಧಿ ಒಂದು ವರ್ಷ ವಿಸ್ತರಣೆಗೊಳ್ಳಲಿದೆ.
ಅಂದರೆ ಪ್ರಸಕ್ತ ವಿಧಾನಸಭೆ ಅವಧಿ 2028ಕ್ಕೆ ಮುಗಿಯಲಿದ್ದು, ಮುಂದೆ ಲೋಕಸಭೆ ಚುನಾವಣೆಯ ಜತೆ 2029ರಲ್ಲಿ ಚುನಾವಣೆ ನಡೆಯಬೇಕಿರುವುದರಿಂದ ಒಂದು ವರ್ಷ ಮುಂದಕ್ಕೆ ಹಾಕುವಂತೆ ಸಂವಿಧಾನ ತಿದ್ದುಪಡಿ ಮಾಡಲು ಅವಕಾಶ ಇದೆ.ಈ ಶಿಫಾರಸು 2024ರಲ್ಲಿ ಜಾರಿಗೆ ಬಂದರೆ ಅಂದಿನಿಂದ ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಸರಕಾರಗಳ ಅವಧಿ 2029ಕ್ಕೆ ಮುಗಿಯಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.