Sudan ಸಂಘರ್ಷದ ನಡುವೆಯೇ ಸ್ಥಳಾಂತರ ;ಜೆಡ್ಡಾ ತಲುಪಿದ ಭಾರತೀಯರ 10ನೇ ತಂಡ

ಮುಂದುವರಿದ ಕಾಳಗ ; ಟರ್ಕಿ ವಿಮಾನದ ಮೇಲೆ ಫೈರಿಂಗ್‌

Team Udayavani, Apr 29, 2023, 7:00 AM IST

1-sdasd

ಖಾರ್ತೋಮ್‌/ನವದೆಹಲಿ: ಕದನ ವಿರಾಮ ವಿಸ್ತರಣೆಯ ನಡುವೆಯೂ ಸುಡಾನ್‌ನಲ್ಲಿ ಸೇನೆ ಮತ್ತು ಬಲಿಷ್ಠ ಅರೆಸೇನಾ ಪಡೆಯ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ರಾಜಧಾನಿ ಖಾರ್ತೋಮ್‌ ಹಾಗೂ ಒಮುರ್ಮನ್‌ನಲ್ಲಿ ಗುರುವಾರ ರಾತ್ರಿಯಿಂದೀಚೆಗೆ ಭಾರಿ ಸ್ಫೋಟಗಳು, ಗುಂಡಿನ ಕಾಳಗ ನಡೆದಿದ್ದು, ಜನರು ಭೀತಿಯಲ್ಲೇ ರಾತ್ರಿ ಕಳೆದಿದ್ದಾರೆ.

ವಿದೇಶಿಯರ ಸುರಕ್ಷಿತ ಸ್ಥಳಾಂತರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕದನ ವಿರಾಮವನ್ನು 72 ಗಂಟೆಗಳ ಕಾಲ ವಿಸ್ತರಿಸಲು ಎರಡೂ ಕಡೆಯವರು ಒಪ್ಪಿಗೆ ನೀಡಿದ್ದರು. ಆದರೆ, ವಾಸ್ತವದಲ್ಲಿ ಇದು ಜಾರಿಯಾಗಿಲ್ಲ. ಸೇನೆಯು ಯುದ್ಧವಿಮಾನಗಳ ಮೂಲಕ ಬಾಂಬ್‌ಗಳ ಮಳೆಗರೆದಿದ್ದರೆ, ಸೇನಾ ಪ್ರಧಾನ ಕಚೇರಿಯಲ್ಲಿ ಭಾರೀ ಘರ್ಷಣೆ ವರದಿಯಾಗಿದೆ. ಇಂಥ ಸಂಕಷ್ಟದ ನಡುವೆಯೂ ಭಾರತೀಯರ 10ನೇ ತಂಡ ಯುದ್ಧಪೀಡಿತ ದೇಶವನ್ನು ತೊರೆಯುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ 8, 9 ಮತ್ತು 10ನೇ ತಂಡವು ಸುಡಾನ್‌ನಿಂದ ಜೆಡ್ಡಾಗೆ ತಲುಪಿವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಗ್ಚಿ ಹೇಳಿದ್ದಾರೆ.

ಸಿಬ್ಬಂದಿಯ ಕೊರತೆಯ ನಡುವೆಯೂ ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ದಿನದ 24 ಗಂಟೆಗಳ ಕಾಲವೂ ಕೆಲಸ ಮಾಡಿ, ಅಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕ್ರಮ ಕೈಗೊಂಡಿದೆ ಎಂದು “ಆಪರೇಷನ್‌ ಕಾವೇರಿ’ ಮೂಲಕ ಶುಕ್ರವಾರ ಮುಂಬೈಗೆ ಬಂದಿಳಿದ 39 ವರ್ಷದ ಉದ್ಯಮಿ ಅಬ್ದುಲ್‌ ಖಾದಿರ್‌ ಹೇಳಿದ್ದಾರೆ. ಖಾರ್ತೋಮ್‌ನಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಕೂಡಲೇ ಭಾರತದ ರಾಯಭಾರಿ ಬಿ.ಎಸ್‌.ಮುಬಾರಕ್‌ ಮತ್ತು ಅವರ ತಂಡದಲ್ಲಿದ್ದ 8 ಅಧಿಕಾರಿಗಳು ದಣಿವರಿಯದೇ ಕೆಲಸ ಮಾಡಿದ್ದಾರೆ. ಸೀಮಿತ ಸಿಬ್ಬಂದಿಯ ನಡುವೆಯೂ, ಅಪರಿಮಿತ ಶ್ರಮವಹಿಸಿ ಭಾರತೀಯರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಲು ಪಣತೊಟ್ಟಿದ್ದಾರೆ. ಮುಬಾರಕ್‌ ಅವರು ಸುಡಾನ್‌ನ ಪ್ರತಿಯೊಂದು ಪ್ರದೇಶದಲ್ಲಿರುವ ಭಾರತೀಯರ ಮಾಹಿತಿ ಕಲೆಹಾಕಿ, ವಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನು ರಚಿಸಿ, ನಿರಂತರವಾಗಿ ನಮ್ಮೊಂದಿಗೆ ಸಂಪರ್ಕ ಸಾಧಿಸಿದ್ದರು. ಅವರ ಶ್ರಮದಿಂದಾಗಿಯೇ ನಾವಿಂದು ಸ್ವದೇಶಕ್ಕೆ ತಲುಪಲು ಸಾಧ್ಯವಾಯಿತು ಎಂದೂ ಭಾರತ ತಲುಪಿದವರು ಹೇಳಿದ್ದಾರೆ.

ಭಾರತ ಶುಕ್ರವಾರ 754 ಜನರನ್ನು ಸುರಕ್ಷಿತವಾಗಿ ಕರೆತಂದಿದೆ. ಭಾರತೀಯ ವಾಯುಪಡೆಯ C-17 ಹೆವಿ-ಲಿಫ್ಟ್ ವಿಮಾನದಲ್ಲಿ 392 ಜನರು ನವದೆಹಲಿಗೆ ಆಗಮಿಸಿದರೆ, 362 ಭಾರತೀಯರ ಮತ್ತೊಂದು ಬ್ಯಾಚ್ ಅನ್ನು ಬೆಂಗಳೂರಿಗೆ ಕರೆತರಲಾಯಿತು.ಅಧಿಕೃತ ಮಾಹಿತಿಯ ಪ್ರಕಾರ, ದೇಶಕ್ಕೆ ಕರೆತಂದ ಒಟ್ಟು ಭಾರತೀಯರ ಸಂಖ್ಯೆ ಈಗ 1,360 ಆಗಿದೆ.

ಈ ನಡುವೆ, ಶುಕ್ರವಾರ ಬೆಳಗ್ಗೆ ಗುಜರಾತ್‌ನ 56 ನಾಗರಿಕರು ಮುಂಬೈ ಮೂಲಕ ಅಹಮದಾಬಾದ್‌ ತಲುಪಿದ್ದಾರೆ. ಸುರಕ್ಷಿತವಾಗಿ ಕರೆತಂದಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದವನ್ನೂ ಸಲ್ಲಿಸಿದ್ದಾರೆ.

ಟರ್ಕಿ ವಿಮಾನದ ಮೇಲೆ ಫೈರಿಂಗ್‌
ತನ್ನ ನಾಗರಿಕರನ್ನು ಕರೆದೊಯ್ಯಲೆಂದು ಖಾರ್ತೋಮ್‌ನ ವಾಯುನೆಲೆಗೆ ಬಂದಿಳಿದ ಟರ್ಕಿಯ ರಕ್ಷಣಾ ವಿಮಾನದ ಮೇಲೆ ಶುಕ್ರವಾರ ಗುಂಡಿನ ದಾಳಿಯಾಗಿದೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ. ವಿಮಾನವು ವಾಡಿ ಸೇಡ್ನಾದಲ್ಲಿ ಸುರಕ್ಷಿತವಾಗಿ ಕೆಳಗಿಳಿದಿದೆ ಎಂದು ಮೂಲಗಳು ತಿಳಿಸಿವೆ. ಟರ್ಕಿ ವಿಮಾನದ ಮೇಲೆ ಅರೆಸೇನಾಪಡೆಯೇ ಗುಂಡಿನ ದಾಳಿ ನಡೆಸಿ, ಇಂಧನ ವ್ಯವಸ್ಥೆಯನ್ನು ಹಾನಿಗೀಡುಮಾಡಿದೆ ಎಂದು ಸುಡಾನ್‌ ಸೇನೆ ಆರೋಪಿಸಿದೆ. ಆದರೆ ಆರೋಪ ನಿರಾಕರಿಸಿರುವ ಅರೆಸೇನಾಪಡೆ, ನಾಗರಿಕರ ಸುರಕ್ಷಿತ ಸ್ಥಳಾಂತರಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದೆ.

ಸುಡಾನ್‌ ತೊರೆಯುವಂತೆ ಸೂಚನೆ
ಯಾವುದೇ ಕ್ಷಣದಲ್ಲಾದರೂ ಸುಡಾನ್‌ನಲ್ಲಿ ಪರಿಸ್ಥಿತಿ ಕೈಮೀರಿ ಹೋಗಬಹುದು. ಹೀಗಾಗಿ, ಅಲ್ಲಿರುವ ಎಲ್ಲ ಅಮೆರಿಕನ್‌ ನಾಗರಿಕರು 24ರಿಂದ 48 ಗಂಟೆಗಳೊಳಗಾಗಿ ಸುಡಾನ್‌ ತೊರೆಯಬೇಕು ಎಂದು ತನ್ನ ನಾಗರಿಕರಿಗೆ ಶ್ವೇತಭವನ ಸೂಚಿಸಿದೆ. ಜತೆಗೆ, ಸುಡಾನ್‌ನಲ್ಲಿರುವ ಅಮೆರಿಕದ ನಾಗರಿಕರ ರಕ್ಷಣೆಗೆ ಅಗತ್ಯವಾದ ಆಯ್ಕೆಗಳನ್ನು ನಾವು ಸೃಷ್ಟಿಸುತ್ತಿದ್ದೇವೆ ಎಂದು ಶ್ವೇತಭವನದ ವಕ್ತಾರ ಕರೈನ್‌ ಜೀನ್‌ ಪೀರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.