Operation Talaash: ಕಬ್ಬಿನ ಗದ್ದೆಯಲ್ಲಿ 9 ಮಹಿಳೆಯರನ್ನು ಹತ್ಯೆ ಮಾಡಿದ್ದ ಹಂತಕನ ಬಂಧನ


Team Udayavani, Aug 10, 2024, 4:38 PM IST

Operation Talaash: ಕಬ್ಬಿನ ಗದ್ದೆಯಲ್ಲಿ 9 ಮಹಿಳೆಯರನ್ನು ಹತ್ಯೆ ಮಾಡಿದ್ದ ಹಂತಕನ ಬಂಧನ

ಹೊಸದಿಲ್ಲಿ: ಕಳೆದ 14 ತಿಂಗಳ ಅವಧಿಯಲ್ಲಿ 9 ಮಂದಿ ಮಹಿಳೆಯರ ಹತ್ಯೆ ಮಾಡಿದ್ದ ಸರಣಿ ಹಂತಕನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದೆ.

ಬಂಧಿತ ವ್ಯಕ್ತಿಯನ್ನು 35 ವರ್ಷದ ಕುಲದೀಪ್‌ ಗಂಗ್ವಾರ್‌ ಎಂದು ಗುರುತಿಸಲಾಗಿದೆ. ಒಂಬತ್ತು ಮಧ್ಯವಯಸ್ಕ ಮಹಿಳೆಯರ ಜೀವವನ್ನು ಬಲಿತೆಗೆದುಕೊಂಡ ಕ್ರೂರ ಕೊಲೆಗಳ ಹಿಂದಿನ ಈ ಆರೋಪಿಯು ಮಹಿಳಾ ದ್ವೇಷಿಯಾಗಿದ್ದ ಎಂದು ತಿಳಿದುಬಂದಿದೆ.

ನವಾಬ್‌ ಗಂಜ್‌ ನಿವಾಸಿಯಾಗಿದ್ದ ಕುಲದೀಪ್‌, ಶಾಹಿ-ಶೀಶ್‌ಗಢ ಪ್ರದೇಶದಲ್ಲಿ ಮಹಿಳೆಯರನ್ನು ಬೇಟೆಯಾಡುತ್ತಿದ್ದ. ಅತ್ಯಂತ ನಾಜೂಕಾಗಿ ಕಾರ್ಯಾಚರಣೆ ಮಾಡುತ್ತಿದ್ದ ಆತ ಮಹಿಳೆಯರ ಕತ್ತು ಹಿಸುಕಿ ಕಬ್ಬಿನ ಗದ್ದೆಗಳಲ್ಲಿ ದೇಹಗಳನ್ನು ಎಸೆಯುತ್ತಿದ್ದನು. ಆರು ಕೊಲೆಗಳಲ್ಲಿ ಆತನ ಕೈವಾಡವನ್ನು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ ಉಳಿದ ಮೂರರಲ್ಲಿ ಆತನನ್ನು ಶಂಕಿಸಿದ್ದಾರೆ.

ಕುಲ್ದೀಪ್ ತನ್ನ ಜೀವನದ ಘಟನೆಗಳ ಕಾರಣದಿಂದ ಮಹಿಳೆಯರ ಬಗ್ಗೆ ದ್ವೇಷ ಹೊಂದಿದ್ದನು. ತನ್ನ ತಂದೆಯು ತಾಯಿಯನ್ನು ನಿಂದಿಸುವುದನ್ನು ಮತ್ತು ನಂತರ ಹೆಂಡತಿ ತನ್ನಿಂದ ದೂರವಾದ ಕಾರಣದಿಂದ ಮಹಿಳೆಯ ಮೇಲೆ ಕೋಪ ಬೆಳೆಸಿಕೊಂಡಿದ್ದ. ಹೀಗಾಗಿ ಒಬ್ಬಂಟಿಯಾಗಿರುವ ಮಹಿಳೆಯರನ್ನು ಗುರಿಯಾಗಿಸಲು ಅವನನ್ನು ಪ್ರೇರೇಪಿಸಿತು. ಕೊಲ್ಲುವ ಮೊದಲು ಅವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ವರದಿ ತಿಳಿಸಿದೆ.

45ರಿಂದ 55 ವರ್ಷದ ಮಹಿಳೆಯರ ಮೇಲೆ ಕುಲದೀಪ್‌ ದಾಳಿ ನಡೆಸಿದ್ದಾನೆ. ಹಲವು ತಿಂಗಳುಗಳ ಕಾಲ ನಡೆದ ಈ ಕೃತ್ಯದ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಗಂತೆ ಕೆಲಸ ಮುಗಿಸುತ್ತಿದ್ದ.

ಆಪರೇಷನ್‌ ತಲಾಶ್‌

ಸರಣಿ ಹಂತಕನ ಪತ್ತೆಗಾಗಿ ಎಸ್‌ಎಸ್ ಪಿ ಆನುರಾಗ್‌ ಆರ್ಯ ನೇತೃತ್ವದಲ್ಲಿ ಆಪರೇಷನ್‌ ತಲಾಶ್‌ ಎಂಬ ಕಾರ್ಯಾಚರಣೆ ಆರಂಭಿಸಲಾಗಿತ್ತು. ಗದ್ದೆಗಳಲ್ಲಿ ಒಬ್ಬ ಅಪರಿಚಿತ ತಿರುಗುತ್ತಿರುವ ಮಾಹಿತಿಯನ್ನು ಸ್ಥಳೀಯರು ಪೊಲೀಸರಿಗೆ ನೀಡಿದ್ದರು. ಇದು ಕುಲದೀಪ್‌ ಕಡೆಗೆ ಪೊಲೀಸರು ಶಂಕೆ ಪಡಲು ಕಾರಣವಾಗಿತ್ತು.

22 ತಂಡಗಳನ್ನು ರಚಿಸಿದ ಪೊಲೀಸರು, 600 ಹೆಚ್ಚುವರಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದರು. 1500ಕ್ಕೂ ಹೆಚ್ಚು ಕ್ಯಾಮರಾಗಳ ಫೋಟೇಜ್‌ ಗಳನ್ನು ಪರಿಶೀಲನೆ ಮಾಡಲಾಗಿತ್ತು. ಶಂಕಿತ ವ್ಯಕ್ತಿಯ ಚಿತ್ರವನ್ನು ಬಿಡುಗಡೆ ಮಾಡಿದಾಗ ಕುಲದೀಪ್‌ ಗಂಗ್ವಾರ್‌ ಸಿಕ್ಕಿಬಿದ್ದಿದ್ದಾನೆ. ಅಧಿಕಾರಿಗಳು ಗ್ರಾಮಸ್ಥರಂತೆ ವೇಷಭೂಷಣವನ್ನು ಧರಿಸಿ ಆತನ ದಿನಚರಿಯನ್ನು ಗಮನಿಸಿ ಬಳಿಕ ಬಂಧಿಸಿದ್ದಾರೆ.

ಈಗ ಬಂಧನದಲ್ಲಿರುವ ಕುಲದೀಪ್ ಗಂಗ್ವಾರ್ ಕೊಲೆ ಮತ್ತು ಅತ್ಯಾಚಾರ ಯತ್ನ ಸೇರಿದಂತೆ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾನೆ. ಅಪರಿಚಿತ ಹಂತಕನ ಭಯದಲ್ಲಿ ಬದುಕುತ್ತಿದ್ದ ಬರೇಲಿ ನಿವಾಸಿಗಳಿಗೆ ಈ ಬಂಧನ ಕೊಂಚ ಸಮಾಧಾನ ತಂದಿದೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.