![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-415x247.jpg)
ರಾಜ್ಯಸಭೆ ಎಲೆಕ್ಷನ್ಗೆ ‘ನೋಟಾ’ ಬೇಡವೆಂದು ‘ಕೈ’ ಹಠ
Team Udayavani, Aug 2, 2017, 8:45 AM IST
![Congress-Party-Logo-650.jpg](https://www.udayavani.com/wp-content/uploads/2017/08/2/Congress-Party-Logo-650-620x387.jpg)
ಹೊಸದಿಲ್ಲಿ: ಗುಜರಾತ್ನಲ್ಲಿ ಕಾಂಗ್ರೆಸ್ ನಾಯಕ, ಸೋನಿಯಾ ಅವರ ಆಪ್ತ ಅಹ್ಮದ್ ಪಟೇಲ್ರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡುವ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಭಾರೀ ‘ಹಣಾ’ಹಣಿ ನಡೆಯುತ್ತಿರುವ ನಡುವೆಯೇ ಈ ಬಾರಿಯ ರಾಜ್ಯಸಭೆ ಚುನಾವಣೆಗೆ ‘ನೋಟಾ'(ವಿದ್ಯುನ್ಮಾನ ಮತಯಂತ್ರದಲ್ಲಿ ‘ಮೇಲಿನ ಯಾರೂ ಅಲ್ಲ’ ಎಂಬ ಗುಂಡಿ) ಆಯ್ಕೆಗೆ ಅವಕಾಶ ನೀಡುವ ಮೂಲಕ ಚುನಾವಣಾ ಆಯೋಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಗುಜರಾತ್ ರಾಜ್ಯಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಷ್ಠೆಯ ವಿಚಾರವಾಗಿ ಎತ್ತಿಕೊಂಡಿರುವಾಗಲೇ ಚುನಾವಣಾ ಆಯೋಗವು ನೋಟಾ ಆಯ್ಕೆಗೆ ಅವಕಾಶ ಕಲ್ಪಿಸಿದೆ. ಇದರಿಂದ ಕೆಂಡಾಮಂಡಲವಾಗಿರುವ ಕಾಂಗ್ರೆಸ್ ಮಂಗಳವಾರ ಆಯೋಗವನ್ನು ಭೇಟಿಯಾಗಿ ಆಕ್ಷೇಪವೆತ್ತಿದೆ. ಆ.8ರ ಚುನಾವಣೆಯಿಂದ ನೋಟಾ ಆಯ್ಕೆ ರದ್ದು ಮಾಡಬೇಕು. ಈ ಆಯ್ಕೆಗೆ ಅವಕಾಶ ನೀಡುವುದು ಸಂವಿಧಾನ ಮತ್ತು ಚುನಾವಣಾ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಕಾಂಗ್ರೆಸ್ ನಾಯಕರಾದ ಆನಂದ್ ಶರ್ಮ ಮತ್ತು ಮನೀಶ್ ತಿವಾರಿ ಹೇಳಿದ್ದಾರೆ. ಆದರೆ, ಇದಕ್ಕೆ ಒಪ್ಪದ ಆಯೋಗ, ‘ಇದೇನೂ ಹೊಸ ನಿರ್ದೇಶನವಲ್ಲ. ಇದನ್ನು 2014ರಲ್ಲೇ ಜಾರಿಗೆ ತರಲಾಗಿದೆ’ ಎಂದು ಸಮರ್ಥಿಸಿಕೊಂಡಿದೆ.
ಇದಕ್ಕೂ ಮುನ್ನ, ರಾಜ್ಯಸಭೆಯ ಕಲಾಪದ ವೇಳೆಯೂ ವಿಪಕ್ಷಗಳು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಹ್ಮದ್ ಪಟೇಲ್ ಅವರು, ‘ಮೊದಲು ರಾಜ್ಯಸಭೆ ಚುನಾವಣೆ ಮುಂದೂಡಲಾಯಿತು. ಅನಂತರ, ಅಧಿಸೂಚನೆ ಹೊರಡಿಸಿದ ಬಳಿಕ ನೋಟಾ ಆಯ್ಕೆಗೆ ಅನುಮತಿ ನೀಡಲಾಯಿತು. ಇದಕ್ಕೆ ಕಾರಣವೇನೆಂದು ಚುನಾವಣಾ ಆಯೋಗಕ್ಕೆ ಚೆನ್ನಾಗಿ ಗೊತ್ತು’ ಎಂದು ಟ್ವೀಟಿಸಿದ್ದಾರೆ.
ಟಾಪ್ ನ್ಯೂಸ್
![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bengal](https://www.udayavani.com/wp-content/uploads/2024/12/Bengal-150x90.jpg)
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
![Government scraps ‘no-detention policy’ for Classes 5 and 8 in central schools](https://www.udayavani.com/wp-content/uploads/2024/12/school-1-150x83.jpg)
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
![1-biren](https://www.udayavani.com/wp-content/uploads/2024/12/1-biren-150x100.jpg)
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
![1-cris](https://www.udayavani.com/wp-content/uploads/2024/12/1-cris-150x93.jpg)
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
![1-maha-kumbha](https://www.udayavani.com/wp-content/uploads/2024/12/1-maha-kumbha-150x93.jpg)
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ](https://www.udayavani.com/wp-content/uploads/2024/12/aa-8-150x89.jpg)
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
![aane](https://www.udayavani.com/wp-content/uploads/2024/12/aane-150x111.jpg)
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
![Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ](https://www.udayavani.com/wp-content/uploads/2024/12/v-2-150x91.jpg)
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
![1-traa](https://www.udayavani.com/wp-content/uploads/2024/12/1-traa-150x92.jpg)
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
![Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು](https://www.udayavani.com/wp-content/uploads/2024/12/pro-2-150x84.jpg)
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.