ಪ್ರೀತಿಗಾಗಿ ಶೂಟ್‌ ಮಾಡಿಕೊಂಡ ಬಿಜೆಪಿ ಯುವ ನಾಯಕ: ಮನೆಯವರಿಂದ ಅಂಗದಾನ


Team Udayavani, Jul 7, 2018, 12:34 PM IST

alok-lokhande-700.jpg

ಭೋಪಾಲ್‌ : ತಾನು ಪ್ರೀತಿಸಿದ ಹುಡುಗಿಯ ಮೇಲೆ ತನಗಿರುವ ಪ್ರೇಮವನ್ನು ಸಾಬೀತು ಪಡಿಸುವ ಸಲುವಾಗಿ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಯುವ ದಳದ ನಾಯಕನ ಹೃದಯ ಸಹಿತ ಅನೇಕ ಬಹುಮುಖ್ಯ ಅಂಗಾಂಗಳನ್ನು ಆತನ ಮನೆಯವರು ದಾನವಾಗಿ ನೀಡುವ ಮೂಲಕ ಮನುಕುಲದ ಮೇಲಿರುವ ತಮ್ಮ ಪ್ರೀತಿಯನ್ನು ಸಾಬೀತು ಪಡಿಸಿದ್ದಾರೆ.  

ತನ್ನ ಪ್ರಿಯತಮೆಯ ಮೇಲಿನ ಪ್ರೀತಿಯನ್ನು ಸಾಬೀತು ಪಡಿಸಲು ತನ್ನನ್ನು ಶೂಟ್‌ ಮಾಡಿಕೊಂಡ 30ರ ಹರೆಯದ ಯುವಕ ಅತುಲ್‌ ಲೋಖಂಡೆಗೆ “ಮೆದುಳು ಸಾವು’ ಆಗಿರುವುದನ್ನು ವೈದ್ಯರು ಘೋಷಿಸಿದಾಗ ಆತನ ಮನೆಯವರು ಆತನ ಅನೇಕ ಪ್ರಮುಖ ಅಂಗಾಂಗಳನ್ನು ದಾನವಾಗಿ ನೀಡುವ ದೃಢ ಮನಸ್ಸು ಮಾಡಿದರು. 

ಒಡನೆಯೇ ಲೋಖಂಡೆಯ ಮೃತ ದೇಹವನ್ನು ಏರ್‌ ಅಂಬುಲೆನ್ಸ್‌ ಮೂಲಕ ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ರವಾನಿಸಲಾಯಿತು. ಆತನ ಹೃದಯವನ್ನು ಸಾಗಿಸುವ ವಾಹನಕ್ಕೆ  ಇಂದು ಬೆಳಗ್ಗೆ ಆಸ್ಪತ್ರೆ ಮತ್ತು ವಿಮಾನ ನಿಲ್ದಾಣದ ನಡುವೆ ಕೂಡಲೇ ಗ್ರೀನ್‌ ಕಾರಿಡಾರ್‌ ನಿರ್ಮಿಸಲಾಯಿತು. 

ಲೋಖಂಡೆಗೆ ತಾನು ಪ್ರೀತಿಸುತ್ತಿದ್ದ 27ರ ಹರೆಯದ ತರುಣಿಯ ತಂದೆಯೊಂದಿಗೆ ಮಾತಿನ ಜಗಳವಾಗಿತ್ತು. ಅದನ್ನು ಅನುಸರಿಸಿ ಜುಲೈ 3ರಂದು ರಾತ್ರಿ ಆತ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಎಸಗಿದ್ದ. 

ಅಂದು ಮಧ್ಯರಾತ್ರಿಯ ಹೊತ್ತಿಗೆ ಲೋಖಂಡೆಯ ಬ್ರೇನ್‌ ಡೆಡ್‌ ಆಗಿರುವುದನ್ನು ವೈದ್ಯರು ಘೋಷಿಸಿದ ಬಳಿಕ ಆತನ ಮನೆಯವರು ಆತನ ಅಂಗಾಂಗ ದಾನಕ್ಕೆ ನಿರ್ಧರಿಸಿದರು ಎಂದು ಬನ್ಸಾಲ್‌ ಆಸ್ಪತ್ರೆಯ ಅಂಗಾಂಗ ಕಸಿ ಸಮನ್ವಯಕಾರ ರಾಕೇಶ್‌ ತಾರೆ ಹೇಳಿದರು. 

ಲೋಖಂಡೆಯ ಕಿಡ್ನಿ ಮತ್ತು ಲಿವರ್‌ ಅನ್ನು ಭೋಪಾಲ್‌ ನ ಮೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.ಕಣ್ಣುಗಳನ್ನು ಸರಕಾರದ ಹಮೀದಿಯಾ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರಾಕೇಶ್‌ ತಿಳಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.