![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 20, 2023, 5:18 PM IST
ಹೊಸದಿಲ್ಲಿ: ”ಭಾರತದ ಬದ್ಧತೆಯು ಕಾನೂನಿನ ನಿಯಮವಾಗಿದ್ದು, ಯಾರಾದರೂ ಮಾಹಿತಿ ನೀಡಿದರೆ ಅದನ್ನು ಪರಿಶೀಲಿಸಲಾಗುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಿಖ್ ಪ್ರತ್ಯೇಕತಾವಾದಿಯನ್ನು ಗುರಿಯಾಗಿಸಿಕೊಂಡ ವಿಫಲ ಸಂಚಿನ ಕುರಿತು ಭಾರತದ ಮೇಲಿನ ಅಮೆರಿಕ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಫೈನಾನ್ಷಿಯಲ್ ಟೈಮ್ಸ್ ಗೆ ಸಂದರ್ಶನದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ,” ಭಾರತ-ಅಮೆರಿಕ ಸಂಬಂಧಗಳನ್ನು ಬಲಪಡಿಸಲು ಬಲವಾದ ಉಭಯಪಕ್ಷೀಯ ಬೆಂಬಲವಿದೆ. ರಾಜತಾಂತ್ರಿಕ ಸಂಬಂಧಗಳೊಂದಿಗೆ ಕೆಲವು ಘಟನೆಗಳನ್ನು ಜೋಡಿಸುವುದು ಸೂಕ್ತವಲ್ಲ”ಎಂದು ಪ್ರತಿಕ್ರಿಯಿಸಿದ್ದಾರೆ.
“ಯಾರಾದರೂ ನಮಗೆ ಯಾವುದೇ ಮಾಹಿತಿಯನ್ನು ನೀಡಿದರೆ, ನಾವು ಖಂಡಿತವಾಗಿಯೂ ಅದನ್ನು ಪರಿಶೀಲಿಸುತ್ತೇವೆ. ನಮ್ಮ ನಾಗರಿಕರು ಏನಾದರೂ ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡಿದ್ದರೆ, ಅದನ್ನು ನೋಡಲು ನಾವು ಸಿದ್ಧರಿದ್ದೇವೆ. ಕಾನೂನು ಸುವ್ಯವಸ್ಥೆಗೆ ನಮ್ಮ ಬದ್ಧತೆ ಇದೆ ” ಎಂದು ಮೋದಿ ಹೇಳಿದ್ದಾರೆ.
ಯುಎಸ್ ಮತ್ತು ಕೆನಡಾದ ದ್ವಿಪೌರತ್ವ ಹೊಂದಿರುವ ಸಿಖ್ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಅವರನ್ನು ಹತ್ಯೆಗೈಯುವ ವಿಫಲ ಸಂಚಿನಲ್ಲಿ ನಿಖಿಲ್ ಗುಪ್ತಾ ಭಾರತದ ಸರಕಾರಿ ಉದ್ಯೋಗಿಯೊಂದಿಗೆ ಕೆಲಸ ಮಾಡುತ್ತಿದ್ದಾನೆ ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ಗಳು ಆರೋಪಿಸಿದ್ದರು. ಆರೋಪಗಳ ಬಳಿಕ ತನಿಖೆಗೆ ಭಾರತ ತನಿಖಾ ಸಮಿತಿಯನ್ನೂ ರಚಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.