![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 26, 2021, 11:21 AM IST
ನವ ದೆಹಲಿ : ಲಸಿಕೆಯ ಕೊರತೆಯ ವಿಚಾರಗಳು ಕೇಳಿ ಬರುತ್ತಲೇ ಇದ್ದರೂ ನಿರಂತರವಾಗಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ನೀಡಿರುವ ಲಸಿಕೆಯ ಪ್ರಮಾಣಗಳ ವರದಿಯನ್ನು ತನ್ನ ಪ್ರಕಟಣೆಯಲ್ಲಿ ನೀಡುತ್ತಿದೆ.
ಇಂದು(ಸೋಮವಾರ, ಜುಲೈ 26) ಬೆಳಗ್ಗಿನವರೆಗಿನ ವರದಿಯ ಪ್ರಕಾರ, ದೇಶದ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರದಿಂದಿ ಉಚಿತವಾಗಿ 45.37 ಕೋಟಿಯಷ್ಟು ಲಸಿಕೆಯ ಡೋಸ್ ಗಳನ್ನು ನೀಡಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ
45,37,70,580 ಕೋಟಿಯಷ್ಟು ಲಸಿಕೆಯ ಡೋಸ್ ಗಳನ್ನು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಸುಮಾರು, 59, 39,010 ಡೋಸ್ ಲಸಿಕೆಗಳು ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡುವುದಕ್ಕೆ ತಯಾರಾಗಿ ಇದೆ ಎಂದು ಸಚಿವಾಲಯ ತಿಳಿಸಿದೆ.
ಇನ್ನು, ಕೇಂದ್ರ ಸರ್ಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡಿದ 3,09,11,310 ಕೋವಿಡ್ ಡೋಸ್ ಗಳು ಬಳಕೆಯಾಗಿ ಉಳಿದಿವೆ ಎಂದು ಕೂಡ ಹೇಳಿದೆ.
ಸಂಭಾವ್ಯ ಮೂರನೇ ಅಲೆಯ ನಡುವೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನಕ್ಕೆ ವೇಗ ನೀಡುತ್ತಿದ್ದು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕನುಗುಣವಾಗಿ ಕೇಂದ್ರ ಸರ್ಕಾರ ಲಸಿಕೆಗಳನ್ನು ಪೂರೈಸುತ್ತಿದೆ. ಮಾತ್ರವಲ್ಲದೇ ಮಕ್ಕಳಿಗೆ ನೀಡುವ ಲಸಿಕಾ ಪ್ರಯೋಗಗಳು ಕೂಡ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದ್ದು, ಕೋವಿಡ್ 19 ಸೋಂಕಿನ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೆನ್ಸಿಂಗ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.