ನಗರದಲ್ಲಿ ಮಿತಿ ಮೀರಿದ ಶಬ್ದ ಮಾಲಿನ್ಯ ಪ್ರಮಾಣ


Team Udayavani, Apr 11, 2017, 12:27 PM IST

sound.jpg

ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ 7 ನಗರಗಳಲ್ಲಿ ಶಬ್ದ ಮಾಲಿನ್ಯದ ಮಟ್ಟವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿದೆ ಎಂದು ಪರಿಸರ ಸಚಿವ ಅನಿಲ್‌ ಮಾಧವ್‌ ದವೆ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖೀತ ಉತ್ತರ ನೀಡುವ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ)ಯು ಎಲ್ಲ ರಾಜ್ಯಗಳಲ್ಲಿನ ಮಂಡಳಿಗಳೊಂದಿಗೆ ಸೇರಿ ಶಬ್ದ ಮಾಲಿನ್ಯದ ಕುರಿತು ನಿಗಾವಹಿಸಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಲಕ್ನೋ ಮತ್ತು ಹೈದರಾಬಾದ್‌ನಲ್ಲಿ 70 ಶಬ್ದ ಮೇಲ್ವಿಚಾರಣಾ ಕೇಂದ್ರಗಳ ಮೂಲಕ ಪರಿಶೀಲನೆ ಕಾರ್ಯ ಆರಂಭಿಸಿತ್ತು.

ವಾಹನಗಳ ಹಾರ್ನ್ ಸೇರಿದಂತೆ ವಿವಿಧ ಶಬ್ದಗಳನ್ನು ಅಧ್ಯಯನ ನಡೆಸಿ, ಈ ಏಳೂ ನಗರಗಳಲ್ಲಿ ಶಬ್ದ ಮಾಲಿನ್ಯದ ಸರಾಸರಿ ಮಟ್ಟವು ಸಾಮಾನ್ಯವಾಗಿ ಇರುವಂಥ ಅನುಮತಿಯ ಮಿತಿಗಿಂತ ಹೆಚ್ಚಿರುತ್ತದೆ ಎಂಬುದನ್ನು ಪತ್ತೆಹಚ್ಚಿದೆ ಎಂದಿದ್ದಾರೆ ಸಚಿವ ದವೆ.

ಇದೇ ವೇಳೆ, ಕೇಂದ್ರ ಮೋಟಾರು ವಾಹನಗಳ ಕಾಯ್ದೆ-1989ರ ಪ್ರಕಾರ ಪೊಲೀಸ್‌ ವ್ಯಾನ್‌, ಆ್ಯಂಬುಲೆನ್ಸ್‌ ಮತ್ತು ಅಗ್ನಿಶಾಮಕ ವಾಹನಗಳು ಹೊರತುಪಡಿಸಿ ಇತರೆ ಯಾವುದೇ ವಾಹನಗಳಲ್ಲೂ ಪ್ರಷರ್‌ ಹಾರ್ನ್(ಸೈರನ್‌ಗಳು ಹಾಗೂ ಬಹು-ಧ್ವನಿಯ ಹಾರ್ನ್ಗಳು)ಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ ಎಂದೂ ಸಚಿವ ದವೆ ಸ್ಪಷ್ಟಪಡಿಸಿದ್ದಾರೆ.

10 ಕಡೆ ಕೇಂದ್ರ: ಶಬ್ದಮಾಲಿನ್ಯದ ಮಟ್ಟವೆಷ್ಟು ಎಂಬುದನ್ನು ಅರಿಯಲು ಬೆಂಗಳೂರಿನಲ್ಲಿ ಪರಿಸರ ಭವನ, ಪೀಣ್ಯ, ನಿಸರ್ಗ ಭವನ, ಮಾರತಹಳ್ಳಿ, ಬಿಟಿಎಂ, ಯಶವಂತಪುರ, ಆರ್‌.ವಿ.ಸಿ.ಇ, ವೈಟ್‌ಫೀಲ್ಡ್‌, ದೊಮ್ಮಲೂರು ಹಾಗೂ ನಿಮ್ಹಾನ್ಸ್‌ ಬಳಿ ಶಬ್ದಮಾಲಿನ್ಯ ನಿಗಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.

ಇವುಗಳನ್ನು ವಸತಿ ವಲಯ, ವಾಣಿಜ್ಯ ವಲಯ, ಮೌನ ವಲಯ ಹಾಗೂ ಕೈಗಾರಿಕಾ ವಲಯವೆಂದು ವಿಂಗಡಿಸಲಾಗಿತ್ತು. 2015ರಲ್ಲಿ ನಡೆಸಿದ ಈ ಸರ್ವೆಯಲ್ಲಿ ಪ್ರತಿದಿನ, ಪ್ರತಿ ತಿಂಗಳು ಹಾಗೂ ವಾರ್ಷಿಕ ಮಾಲಿನ್ಯದ ಮಟ್ಟವೆಂದು ವಿಭಜಿಸಿ ವರದಿ ನೀಡಲಾಗಿತ್ತು.

ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿವು: ಮೆಟ್ರೋಪಾಲಿಟನ್‌ ನಗರಗಳಲ್ಲಿ ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ದೀಪಾವಳಿ ಸಂದರ್ಭದಲ್ಲಿ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲೆಂದೇ ರಾತ್ರಿ 10 ರಿಂದ ಬೆಳಗ್ಗೆ 6ರವರೆಗೆ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಜತೆಗೆ, ಜನರಲ್ಲಿ ಮಾಲಿನ್ಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ.

ಶಬ್ದ ಮಾಲಿನ್ಯ(ನಿಯಂತ್ರಣ ಮತ್ತು ನಿಬಂಧನೆ) ನಿಯಮಗಳು-2000ದ ಪ್ರಕಾರ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಶಬ್ದ ಮಾಡುವ ಧ್ವನಿವರ್ಧಕಗಳ ಬಳಕೆಗೆ, ಮಾಲಿನ್ಯ ಉಂಟುಮಾಡುವಂಥ ಹಾರ್ನ್ಗಳು ಹಾಗೂ ನಿರ್ಮಾಣ ಕಾಮಗಾರಿಯಲ್ಲಿ ಬಳಸಲಾಗುವ ಹೆಚ್ಚು ಶಬ್ದ ಮಾಡುವ ಉಪಕರಣಗಳಿಗೆ ನಿಷೇಧ ಹೇರಿದೆ.

ಎಲ್ಲೆಲ್ಲಿ ಎಷ್ಟೆಷ್ಟು?
ಬಿಟಿಎಂ ಲೇಔಟ್‌ ಪ್ರದೇಶದಲ್ಲಿ ಹಗಲು ಮತ್ತು ರಾತ್ರಿ ಹೊತ್ತು ಶಬ್ದ ಮಾಲಿನ್ಯವು ಮಿತಿಗಿಂತ ಶೇ.100ರಷ್ಟು ಹೆಚ್ಚಾಗಿರುವುದು ಕಂಡುಬಂದರೆ, ಮಾರತಹಳ್ಳಿಯಲ್ಲಿ ಹಗಲು ಹೊತ್ತು ಮಾಲಿನ್ಯವು ಮಿತಿಯನ್ನು ಮೀರಿತ್ತು. ರಾತ್ರಿ ಹೊತ್ತು ಶೇ.88ರಷ್ಟು ಮೀರಿರುವುದು ಕಂಡುಬಂದಿತ್ತು. ಇನ್ನು ನಿಮ್ಹಾನ್ಸ್‌ನಲ್ಲೂ ಹಗಲು, ರಾತ್ರಿಯೂ ಶಬ್ದಮಾಲಿನ್ಯ ಮಿತಿಯನ್ನು ದಾಟಿರುವುದು ಖಚಿತವಾಗಿದೆ. ಯಶವಂತಪುರದಲ್ಲೂ ಈ ಸ್ಥಿತಿ ಭಿನ್ನವಾಗಿಲ್ಲ. ಆದರೆ, ವೈಟ್‌ಫೀಲ್ಡ್‌ನಲ್ಲಿ ಮಾಲಿನ್ಯವು ಮಿತಿಗಿಂತ ಹೆಚ್ಚಾಗಿಲ್ಲ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.