26/11 ಮುಂಬಯಿ ದಾಳಿಯ ಇನ್ನೊಬ್ಬ ಸೂತ್ರಧಾರಿ ಅಮೆರಿಕಾದಲ್ಲಿ ಬಂಧನ


Team Udayavani, Jun 20, 2020, 1:04 PM IST

26/11 ಮುಂಬಯಿ ದಾಳಿಯ ಇನ್ನೊಬ್ಬ ಸೂತ್ರಧಾರಿ ಅಮೆರಿಕಾದಲ್ಲಿ ಬಂಧನ

ನವದೆಹಲಿ: 26/11 ಮುಂಬಯಿ ದಾಳಿಯ ಸೂತ್ರಧಾರಿಗಳಲ್ಲಿ ಒಬ್ಬನಾದ ಪಾಕಿಸ್ಥಾನ ಮೂಲದ ಕೆನಡಾ ಪ್ರಜೆಯನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ.

59 ವರ್ಷ ಪ್ರಾಯದ ತಹವ್ವೂರ್ ರಾಣಾ ಎಂಬಾತನೇ ಬಂಧಿತ ವ್ಯಕ್ತಿಯಾಗಿದ್ದಾನೆ. ಮುಂಬಯಿ ದಾಳಿಯ ಪ್ರಮುಖ ಸಂಚುಕೋರರಲ್ಲೊಬ್ಬನಾಗಿರುವ ಡೇವಿಡ್ ಹೆಡ್ಲಿಗೆ ಈತ ಪರಮಾಪ್ತನಾಗಿದ್ದಾನೆ.

ರಾಣಾನನ್ನು ಲಾಸ್ ಏಜಂಲೀಸ್ ನಲ್ಲಿ ಜೂನ್ 10ರಂದು ಬಂಧಿಸಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ.

ಈತನಿಗೆ 14 ವರ್ಷಗಳ ಸೆರೆವಾಸ ವಿಧಿಸಿ ಲಾಸ್ ಏಂಜಲೀಸ್ ನ ಫೆಡೆರಲ್ ಜೈಲಿಗೆ ಕಳುಹಿಸಲಾಗಿತ್ತು. ಆದರೆ ಈತನಿಗೆ ಕೋವಿಡ್ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಈತನನ್ನು ಕಳೆದ ವಾರ ಜೈಲಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಆದರೆ, ಈತನನ್ನು ಭಾರತಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆಗಳು ಚಾಲನೆಯಲ್ಲಿರುವ ಕಾರಣ ರಾಣಾನನ್ನು ಜೈಲಿನಿಂದ ಹೊರಬಿಟ್ಟಿರಲಿಲ್ಲ ಎಂಬ ಮಾಹಿತಿಯನ್ನು ಅಮೆರಿಕಾ ವಕೀಲರು ಅಸೋಸಿಯೇಟ್ ಪ್ರೆಸ್ ಗೆ ನೀಡಿದ್ದಾರೆ.

ಮುಂಬಯಿ ದಾಳಿಗೆ ಸಂಬಂಧಿಸಿದ ಸೂತ್ರದಾರರಲ್ಲಿ ಒಬ್ಬನಾಗಿರುವ ರಾಣಾ ಜೂನ್ 10ರಂದು ಬಂಧನವಾಗಿರುವ ಮಾಹಿತಿ ತಮಗೆ ಲಭಿಸಿದೆ ಎಂದು ಭಾರತೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹಾಗೂ, ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ಈತನ ಗಡೀಪಾರು ಸಂಬಂಧ ಭಾರತದ ಮನವಿ ಇರುವುದನ್ನು ಲಾಸ್ ಏಂಜಲೀಸ್ ನಲ್ಲಿರುವ ಜಿಲ್ಲಾ ನ್ಯಾಯಾಧೀಶರಿಗೆ ಯು.ಎಸ್. ಅಟಾರ್ನಿ ಅವರು ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿಯನ್ನು ಈ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಇರುವ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್ ಗೆ ನೀಡಿದ್ದಾರೆ.

ಮುಂಬಯಿ ದಾಳಿ ಸಂಚಿನ ವಿಚಾರಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಬಳಿಕ ಇದೊಂದು ಧನಾತ್ಮಕ ಬೆಳವಣಿಗೆಯಾಗಿದೆ. ಮತ್ತು ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವ ನಿಟ್ಟಿನಲ್ಲಿ ಇನ್ನು ಅಲ್ಲಿ ವಿಚಾರಣೆ ಪ್ರಾರಂಭಗೊಳ್ಳಲಿದೆ ಎಂದು ರಾಷ್ಟ್ರೀಯ ತನಿಖಾ ದಳದ ಹೆಸರು ಹೇಳಲಿಚ್ಚಿಸದ ಉನ್ನತ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡೇವಿಡ್ ಹೆಡ್ಲಿ ಮುಂಬಯಿ ದಾಳಿಗೂ ಮುಂಚೆ ಇಲ್ಲಿ ಸಂಚು ರೂಪಿಸುವ ವಿಚಾರದಲ್ಲಿ ಆತನಿಗೆ ಸೂಕ್ತ ದಾಖಲೆಗಳನ್ನು ತಯಾರಿಸಿಕೊಡುವ ವಿಚಾರದಲ್ಲಿ ರಾಣಾ ನ ಸಂಸ್ಥೆ ನೆರವಾಗಿರುವ ವಿಚಾರದಲ್ಲಿ ಭಾರತ ಈತನ ಮೇಲೆ ಫೋರ್ಜರಿ ಮತ್ತು ನಂಬಿಕೆ ದ್ರೋಹದ ಆರೋಪಗಳನ್ನು ಹೊರಿಸಿ ಈತನನ್ನು ಗಡೀಪಾರು ಮಾಡುವಂತೆ ಅಮೆರಿಕಾಗೆ ಮನವಿ ಸಲ್ಲಿಸಲಾಗಿದೆ ಮತ್ತು ಭಾರತದ ಈ ಆರೋಪವನ್ನು ಮಾನ್ಯ ಮಾಡಿರುವ ಎಫ್.ಬಿ.ಐ. ಈತನ ವಿರುದ್ಧದ ಗಡೀಪಾರು ವಿಚಾರಣಾ ಪ್ರಕ್ರಿಯೆಗೆ ಚಾಲನೆ ನೀಡಲಿದೆ.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.