ಬಾಂಗ್ಲಾ ಗಡಿ ಮೂಲಕ 2000 ದ ನಕಲಿ ನೋಟು ಕಳುಹಿಸುತ್ತಿರುವ ಪಾಕ್‌ ! 


Team Udayavani, Feb 14, 2017, 9:53 AM IST

new notes.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಧಿಡೀರ್‌ ನೋಟು ಅಪನಗದೀಕರಣ ಗೊಳಿಸಿದ ಬಳಿಕ ಪಾಕಿಸ್ಥಾನದಿಂದ ಭಾರತಕ್ಕೆ ಬರುತ್ತಿದ್ದ ನಕಲಿ ನೋಟುಗಳ ಹರಿವು ನಿಂತುಹೋಗಿತ್ತು.ಆದರೆ ಇದೀಗ 3 ತಿಂಗಳ ಬಳಿಕ  ಪಾಕ್‌ ಮತ್ತೆ ನರಿ ಬುದ್ದಿ ತೋರಿದ್ದು  2000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ  ಬಾಂಗ್ಲಾ ಗಡಿಯ ಮೂಲಕ ಭಾರತಕ್ಕೆ ಕಳ್ಳಸಾಗಾಣಿಕೆ ಮಾಡುತ್ತಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. 

 ಪಾಕ್‌ನಲ್ಲಿ ಮುದ್ರಣಗೊಂಡಿರುವ ನೋಟುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿರುವವರನ್ನು ಬಿಎಸ್‌ಎಫ್ ವಶಕ್ಕೆ ಪಡೆದು ಎನ್‌ಐಎ ವಶಕ್ಕೆ ನೀಡಿರುವುದನ್ನು  ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್‌ ಈ ವರದಿ ಮಾಡಿದೆ. 

ಫೆಬ್ರವರಿ 8 ರಂದು ಬಂಗಾಲದ ಮುರ್ಶಿದಾಬಾದ್‌ನಲ್ಲಿ  2000ದ 40 ನಕಲಿ ನೋಟುಗಳ ಸಮೇತ ಅಜೀಜ್‌ ಉರ್‌ ರೆಹಮಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ವೇಳೆ ಆತ ನೋಟುಗಳು ಪಾಕಿಸ್ಥಾನದಲ್ಲಿ ಪ್ರಿಂಟ್‌ ಆಗಿದ್ದು, ಇದಕ್ಕೆ ಐಎಸ್‌ಐ ಬೆಂಬಲ ನೀಡುತ್ತಿರುವುದಾಗಿ  ಬಾಯ್ಬಿಟ್ಟಿದ್ದ. 

ಅಪನಗದೀಕರಣದ  ಹಿಂದೆಯೂ ಬಾಂಗ್ಲಾ ಗಡಿಯ ಮೂಲಕ ಅಪಾರ ಪ್ರಮಾಣದ ನಕಲಿ ನೋಟುಗಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸುತ್ತಿದ್ದವು ಎಂಬ ಅಂಶ ಬೆಳಕಿಗೆ ಬಂದಿತ್ತು.  ಇದೀಗ ವಶಕ್ಕೆ ಪಡೆದಿರುವ ನೋಟುಗಳ ಪೇಪರ್‌ ಗುಣಮಟ್ಟವೂ ಕಳಪೆಯಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವ್ಯಾಪಕ ತಪಾಸಣೆ ಮತ್ತು ಬ್ಯಾಂಕ್‌ ,ಕಚೇರಿಗಳಲ್ಲಿ ನೋಟುಗಳನ್ನು  ಸೂಕ್ತ ಪರಿಶೀಲನೆ ನಡೆಸಿಯೆ ಪಡೆಯಲಾಗುತ್ತಿದೆ.

ಹೊಸ ನೋಟಿನಲ್ಲಿ ಭದ್ರತಾ ವೈಶಿಷ್ಟ್ಯಗಳೆಂಬಂತೆ  ಪಾರದರ್ಶಕ ಪ್ರದೇಶ, ವಾಟರ್‌ ಮಾರ್ಕ್‌,  ಅಶೋಕ ಸ್ತಂಭದ ಲಾಂಛನ, ಎಡ, ಆರ್‌ಬಿಐ ಗವರ್ನರ್ ಸಹಿ, ಗ್ಯಾರಂಟಿ ಷರತ್ತು ಮತ್ತು ಮುಂಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ  ಮುಖಬೆಲೆಯ ಮೇಲೆ ‘ರೂ 2000 ಅಕ್ಷರಗಳನ್ನು ಸೂಕ್ಷ್ಮವಾಗಿ ಗಮನಿಸಲು ಸಲಹೆ ನೀಡಿದೆ. 

ನೋಟು ಪರಿಶೀಲನೆ ವೇಳೆ ಚಂದ್ರಯಾನದ ವಿಶಿಷ್ಟ ಚಿತ್ರ, ಸ್ವಚ್ಛ  ಭಾರತ್ ಲೋಗೋ ಮತ್ತು ಹಿಂಭಾಗದಲ್ಲಿರುವ ಮುದ್ರಣದ ವರ್ಷ ಪರಿಶೀಲಿಸಿದಾಗ ನೋಟು ನಕಲಿ ಎಂದು ತಿಳಿಯುವುದಾಗಿ ತಜ್ಞರು ಸಲಹೆ ನೀಡಿದ್ದಾರೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.