ದಾವೂದ್ ಇಬ್ರಾಹಿಂ ಭಾರತಕ್ಕೆ ಹಸ್ತಾಂತರ; ಪಾಕ್ ನ ಸಚಿವ ಭುಟ್ಟೋ ಹೇಳಿದ್ದೇನು?
Team Udayavani, May 6, 2023, 2:50 PM IST
ಪಣಜಿ: ಕರಾಚಿ ಮೂಲದ ಭೂಗತ ಡಾನ್ ದಾವೂದ್ ಇಬ್ರಾಹಿಂನ ಹಸ್ತಾಂತರವು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುತ್ತದೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಕೌನ್ಸಿಲ್ ಸಭೆಗಾಗಿ ಗೋವಾದಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಈ ಹೇಳಿಕೆ ನೀಡಿದರು.
ಮಾಧ್ಯಮಗಳ ಸಂದರ್ಶನದಲ್ಲಿ ಭುಟ್ಟೋ ಮಾತನಾಡುತ್ತಿದ್ದರು. ಈ ಸಂದರ್ಶನದಲ್ಲಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಹಸ್ತಾಂತರಿಸುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಶಮನವಾಗುತ್ತದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದ್ದರು.
“ಹೆಚ್ಚಿರುವ ಅಶಾಂತಿಯು ಆಗಸ್ಟ್ 5, 2019 ರಂದು ಭಾರತದ ಕ್ರಮದ (ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ) ಪರಿಣಾಮವಾಗಿದೆ. ಆ ಸಮಯದಲ್ಲಿ, ಭಾರತ ಏಕಪಕ್ಷೀಯವಾಗಿ ಅಂತಾರಾಷ್ಟ್ರೀಯ ಕಾನೂನು, ನಿರ್ಣಯಗಳು ಮತ್ತು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘಿಸಿದೆ” ಎಂದು ಭುಟ್ಟೋ ಹೇಳಿದರು.
“ನಾವು ಯಾವುದೇ ಬದ್ಧತೆಯನ್ನು ಪೂರೈಸಲು ಬಯಸಿದರೆ ಅಥವಾ ನಾವು ಎರಡೂ ದೇಶಗಳ ನಡುವೆ ಯಾವುದೇ ಮಾತುಕತೆ ನಡೆಸಲು ಬಯಸಿದರೆ, ಲಿಖಿತ ದಾಖಲೆಗಳು ಅಥವಾ ಲಿಖಿತ ಒಪ್ಪಂದಗಳು ಇರುತ್ತವೆ” ಎಂದು ಭುಟ್ಟೋ ಹೇಳಿದರು. ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಒಪ್ಪಂದಗಳಿಗೆ ಭಾರತದ ಬದ್ಧತೆಯನ್ನು ಪಾಕಿಸ್ತಾನ ನಂಬುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.