Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ
Team Udayavani, May 7, 2024, 6:55 PM IST
ಪಣಜಿ: ಗೋವಾದಲ್ಲಿ ಮೇ 7 ರಂದು ಲೋಕಸಭಾ ಚುನಾವಣೆಯ ಗೋವಾದ ಎರಡೂ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.
ಗೋವಾದಲ್ಲಿ ತಾಪಮಾನ ಹೆಚ್ಚಳ ಗಮನದಲ್ಲಿಟ್ಟುಕೊಂಡು ಮತದಾರರಿಗೆ ತಂಪು ಪಾನೀಯಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಷ್ಟೇ ಅಲ್ಲದೆ ಇಕೊಫ್ರೆಂಡ್ಲಿ ಮತ ಕೇಂದ್ರದ ಕುರಿತಂತೆ ಭಾರಿ ಚರ್ಚೆ ನಡೆದಿದ್ದು, ಮತದಾರರ ಆಕರ್ಷಣೆಗೆ ಕಾರಣವಾಗಿದೆ. ಈ ವಿಶೇಷ ಮತಗಟ್ಟೆಗಳ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಗೋವಾದ ಸಾಖಳಿ ಮತಕೇಂದ್ರ ಹಾಗೂ ಅಮೋಣಾ ಮತಕೇಂದ್ರಗಳಲ್ಲಿ ಇಕೋ ಫ್ರೆಂಡ್ಲಿ ಮತಗಟ್ಟೆಗಳನ್ನಾಗಿ ಸಿದ್ಧಪಡಿಸಲಾಗಿತ್ತು. ಈ ಮತಗಟ್ಟೆಯ ಕುರಿತ ವೀಡಿಯೊವನ್ನು ಕೂಡ ಚುನಾವಣಾ ಆಯೋಗವು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ.
ಈ ಇಕೊಫ್ರೆಂಡ್ಲಿ ಮತಗಟ್ಟೆಯನ್ನು ತೆಂಗಿನ ಗರಿಯನ್ನು ಹೆಣೆದು ಅತ್ಯಾಕರ್ಷಣೀಯವಾಗಿ ಸಜ್ಜುಗೊಳಿಸಲಾಗಿತ್ತು. ಇಷ್ಟೇ ಅಲ್ಲದೆ ಹೂವು ಹಣ್ಣುಗಳಿಂದ ಅಲಂಕೃತಗೊಳಿಸಲಾಗಿತ್ತು.
ಮತಕೇಂದ್ರದ ಹೊರ ಭಾಗದಲ್ಲಿ ಸ್ವಾಗತ ಕಮಾನ್ ಕೂಡ ಹಾಕಲಾಗಿತ್ತು. ಹೂವಿನ ಕುಂಡಗಳನ್ನು ಇಟ್ಟು ಮತಗಟ್ಟೆಯನ್ನು ಮದುವೆ ಮನೆಯಂತೆ ಸಿಂಗರಿಸಲಾಗಿತ್ತು. ಈ ಮತಗಟ್ಟೆಗಳು ಮತದಾರರ ಆಕರ್ಷಣೆಗೆ ಕಾರಣವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಗೋವಾದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಮಧ್ಯಾಹ್ನದವರೆಗೆ ಶೇ 49 ರಷ್ಟು ಮತದಾನವಾಗಿದೆ. ಮಧ್ಯಾಹ್ನ 3 ವರೆಗೆ ಶೇ. 61.39 ರಷ್ಟು ಮತದಾನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.