Panaji: ಜಲಪಾತ- ಪ್ರವಾಸಿಗರ ನಿರ್ಬಂಧ ಹಿಂಪಡೆದ ಗೋವಾ ಅರಣ್ಯ ಇಲಾಖೆ
Team Udayavani, Aug 14, 2024, 4:55 PM IST
ಪಣಜಿ: ಭಾರೀ ಮಳೆಯಿಂದಾಗಿ ಜಲಪಾತಗಳ ವೀಕ್ಷಣೆಗೆ ಹೋಗುವುದು ಅಪಾಯಕಾರಿಯಾಗಿ ಪರಿಣಮಿಸಿದೆ. ಹೀಗಾಗಿ ಒಂದು ತಿಂಗಳ ಹಿಂದೆ ಗೋವಾ ರಾಜ್ಯ ಅರಣ್ಯ ಇಲಾಖೆ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರು ತೆರಳಲು ನಿಷೇಧ ಹೇರಿತ್ತು.
ಸದ್ಯ ಮಳೆ ಇಳಿಮುಖವಾಗಿರುವುದರಿಂದ ಜಲಪಾತಗಳಲ್ಲಿ ನೀರಿನ ರಭಸ ಕಡಿಮೆಯಾಗಿದೆ. ಹೀಗಾಗಿ ಜಲಪಾತಗಳಿಗೆ ತೆರಳುವವರಿಗೆ ರಾಜ್ಯ ಅರಣ್ಯ ಇಲಾಖೆ ನಿರ್ಬಂಧವನ್ನು ಹಿಂಪದೆಡಿದೆ. ಇದರಿಂದಾಗಿ ಗೋವಾದ ಸುಪ್ರಸಿದ್ಧ ಜಲಪಾತ ವೀಕ್ದಣೆಗೆ ತೆರಳಲು ಪ್ರವಾಸಿಗರಿಗೆ ಅವಕಾಶ ಲಭಿಸಿದಂತಾಗಿದೆ.
1 ತಿಂಗಳ ಹಿಂದೆ ಗೋವಾದ ಪಾಳಿ-ಸತ್ತರಿಯಲ್ಲಿ ಜಲಪಾತಕ್ಕೆ ಹೋದ ಪ್ರವಾಸಿಗರು ಸಿಕ್ಕಿಬಿದ್ದರು. ಅವರು ನದಿ ದಾಟಲು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕಾಯಿತು. ಅದೇ ರೀತಿ ಜಲಪಾತದಲ್ಲಿ ಉಕ್ಕಿ ಹರಿಯುವ ನೀರು ಪ್ರವಾಸಿಗರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೀಗಾಗಿ ಎಲ್ಲ ಜಲಪಾತಗಳಿಗೂ ಅರಣ್ಯ ಇಲಾಖೆ ನಿಷೇಧ ಹೇರಿತ್ತು.
ಹಾಗಾಗಿ ಜಲಪಾತಕ್ಕೆ ಯಾರೂ ಹೋಗದಂತೆ ಸೂಚನೆ ನೀಡಲಾಗಿತ್ತು. ಜಲಪಾತಕ್ಕೆ ಹೋದರೆ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಎಚ್ಚರಿಕೆಯ ಆದೇಶ ನೀಡಿತ್ತು. ಆದರೆ, ಪ್ರಸ್ತುತ ದಿನಗಳಲ್ಲಿ ಮಳೆ ನಿಂತಿದ್ದರಿಂದ ಜಲಪಾತದ ನೀರಿನ ತೀವ್ರತೆ ಕಡಿಮೆಯಾಗಿದೆ. ಇದರಿಂದಾಗಿ ಅರಣ್ಯ ಇಲಾಖೆ ವಿಧಿಸಿದ್ದ ನಿಷೇಧಾಜ್ಞೆ ತೆರವಾಗಿದೆ. ಆದರೆ, ಜಲಪಾತಕ್ಕೆ ತೆರಳಲು ಪ್ರವಾಸಿಗರು ಅಗತ್ಯ ಮುನ್ನೆಚರಿಕೆಗಳನ್ನು ವಹಿಸುವಂತೆ ಸೂಚನೆ ನೀಡಲಾಗಿದೆ.
ಜಲಪಾತದ ಸ್ಥಳದಲ್ಲಿ ಯಾವುದೇ ಮಾಲಿನ್ಯ ಮಾಡಬಾರದು ಎಂದು ಸೂಚಿಸಲಾಗಿದೆ. ಏಕೆಂದರೆ ಹೆಚ್ಚಿನ ಜಲಪಾತಗಳು ಅಭಯಾರಣ್ಯ ಪ್ರದೇಶದಲ್ಲಿವೆ. ಅಭಯಾರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದ್ದು, ತ್ಯಾಜ್ಯ ಎಸೆಯದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚಿಸಿದೆ.
ಈ ಮೂಲಕ ಗೋವಾದ ಜಗತ್ಪ್ರಸಿದ್ಧ ದೂಧ್ ಸಾಗರ್ ಜಲಪಾತ ವೀಕ್ಷಣೆಗೆ ಕೂಡ ಪ್ರವಾಸಿರಿಗೆ ಅನುಮತಿ ಲಭಿಸಿದಂತಾಗಿದೆ. ಆದರೆ ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.