Panaji: ದೂಧ್ ಸಾಗರ್ ಟ್ರೆಕ್ಕಿಂಗ್ಗಾಗಿ ಪ್ರವಾಸಿಗರಿಗೆ ಆನ್ಲೈನ್ ಮೂಲಕ ನೋಂದಣೆ
Team Udayavani, Aug 20, 2024, 9:16 PM IST
ಪಣಜಿ: ಪ್ರವಾಸಿಗರು ಈಗ ದೂಧ್ ಸಾಗರ್ ಟ್ರೆಕ್ಕಿಂಗ್ಗಾಗಿ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅಲ್ಲದೆ ಚಾರಣಕ್ಕೆ ರೂ. 527 ಬದಲಿಗೆ 327 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಈ ಹೊಸ ವೆಬ್ಸೈಟ್ ಅನ್ನು ಗೋವಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ದಿವ್ಯಾ ರಾಣೆ ಮತ್ತು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಗಣೇಶ ಗಾಂವ್ಕರ್ ಉದ್ಘಾಟಿಸಿದರು.
ದೂಧ್ಸಾಗರ ಜಲಪಾತದಲ್ಲಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಮಿತಿಗೊಳಿಸುವುದು ಇದರ ಉದ್ದೇಶವಾಗಿದೆ. ದೂಧ್ಸಾಗರ ಜಲಪಾತಕ್ಕೆ ಬರುವ ಪ್ರವಾಸಿಗರ ಸುರಕ್ಷತೆ ಹಾಗೂ ಪರಿಸರ ಸ್ವಚ್ಛವಾಗಿಡಲು ಪ್ರವಾಸಿಗರು ನೋಂದಣಿ ಮಾಡಿಕೊಳ್ಳುವುದು ಅಗತ್ಯ ಎಂದು ವಿವರಿಸಿದರು.
ಟ್ರೆಕ್ಕಿಂಗ್ ಶುಲ್ಕವನ್ನು ಸಹ ಆನ್ಲೈನ್ನಲ್ಲಿ ಪಾವತಿಸಬೇಕಾಗುತ್ತದೆ ಎಂದ ಅವರು, ಅಕ್ಟೋಬರ್ ನಲ್ಲಿ ಜೀಪೇ ಪ್ರಾರಂಭವಾಗಲಿದೆ. ಪ್ರವಾಸಿಗರಿಗೆ ಮಾರ್ಗದರ್ಶಿಗೆ 200 ರೂ., ಅರಣ್ಯ ನಿಗಮಕ್ಕೆ 50 ರೂ., ಪ್ರವೇಶಕ್ಕೆ 100 ರೂ. ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ 150 ರೂ.ಗಳು ಒಟ್ಟು 500 ರೂ. ವಿಧಿಸಲಾಗುವುದು. ಇದಲ್ಲದೇ ಪ್ರವಾಸಿಗರು ಜಿಎಸ್ಟಿ ಪಾವತಿಸಬೇಕಾಗುತ್ತದೆ. ಆದ್ದರಿಂದ ನೀವು ದೂಧ್ಸಾಗರ್ ಟ್ರೆಕ್ಕಿಂಗ್ ಗಾಗಿ ಒಟ್ಟು 527 ರೂಪಾಯಿಗಳನ್ನು ಪಾವತಿಸಬೇಕು ಎಂದು ತಿಳಿಸಿದರು.
ಇಲ್ಲಿರುವ ಮಾರ್ಗದರ್ಶಕರು ಏಕಕಾಲಕ್ಕೆ 10 ಮಂದಿ ಪ್ರವಾಸಿಗರಿಗೆ ಮಾರ್ಗದರ್ಶಕರು ದೂಧ್ಸಾಗರದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದೇ ವೇಳೆ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಶಿಸ್ತುಬದ್ಧಗೊಳಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಅದೇ ಪ್ರಕ್ರಿಯೆ ಇಲ್ಲಿಯೂ ನಡೆಯುತ್ತಿದೆ ಎಂದು ಹೇಳಿದರು.
ಕಳೆದ ಮೂರು ದಿನಗಳಿಂದ ದೂಧ್ಸಾಗರ ಜಲಪಾತದಲ್ಲಿ ಚಾರಣ ಮಾರ್ಗದರ್ಶಕರು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿದ್ದರಿಂದ ಸೋಮವಾರ ರಾಜಕೀಯ ಹಸ್ತಕ್ಷೇಪ ಕಂಡುಬಂದಿದೆ. ರಾಜಕೀಯ ಒತ್ತಡಕ್ಕೆ ಮಣಿದು ಗೃಹರಕ್ಷಕ ದಳದಲ್ಲಿದ್ದ ಪತ್ರಕರ್ತರ ಪತ್ನಿಯನ್ನು ಕೂಡಲೇ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಟ್ರೆಕ್ಕಿಂಗ್ ಗೆ ಬರುವ ಪ್ರವಾಸಿಗರಿಗೆ ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಏಕಾಏಕಿ 177 ರೂಪಾಯಿ ಶುಲ್ಕ ವಿಧಿಸಿದೆ. ಇದಲ್ಲದೇ ಅರಣ್ಯ ಇಲಾಖೆ ಶುಲ್ಕವನ್ನು ರೂ.50 ರೂ ಹೆಚ್ಚಳ ಮಾಡಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಗೈಡ್ಗಳು ಪ್ರವಾಸಿಗರಿಗೆ ಸೇವೆ ನೀಡುವುದನ್ನು ನಿಲ್ಲಿಸಿದ್ದಾರೆ. ಗೈಡ್ ನನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದ ಪತ್ರಕರ್ತನ ಗೃಹರಕ್ಷಕ ದಳದಲ್ಲಿದ್ದ ಪತ್ನಿಯನ್ನು ರಾಜಕೀಯ ಹಸ್ತಕ್ಷೇಪದಿಂದ ವರ್ಗಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.