![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 23, 2022, 7:20 AM IST
ತಿರುವನಂತಪುರ: ಅದ್ಧೂರಿಯಾಗಿ ಮದುವೆ ನಡೆಯಬೇಕು ಎನ್ನುವ ಕಾರಣಕ್ಕಾಗಿ ಚಿತ್ರನಟರನ್ನು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗುತ್ತದೆ.
ಆದರೆ, ಕೇರಳದ ಯುವ ಜೋಡಿಯೊಂದು ದೇಶದ ಭದ್ರತೆಗಾಗಿ ತಮ್ಮ ಜೀವವನ್ನೇ ಮುಡಿಪಾಗಿ ಇರಿಸಿಕೊಳ್ಳುವ ಸೇನಾಧಿಕಾರಿಗಳು ಮತ್ತು ಯೋಧರನ್ನು ಇತ್ತೀಚೆಗೆ ಆಹ್ವಾನಿಸಿತ್ತು. ಇಂಥ ವಿಶೇಷ ಆಹ್ವಾನ ನೀಡಿದ್ದು, ರಾಹುಲ್ ಮತ್ತು ಕಾರ್ತಿಕಾ ಎಂಬ ಯುವ ಜೋಡಿ. ನ.10ರಂದು ಅವರಿಬ್ಬರೂ ದಾಂಪತ್ಯ ಜೀವನ ಪ್ರವೇಶಿಸಿದ್ದರು.
ತಿರುವನಂತಪುರ ಸಮೀಪ ಇರುವ ಪಾಂಗೋಡೆ ಸೇನಾ ನೆಲೆಗೆ ತೆರಳಿ ಇಬ್ಬರು ಆಹ್ವಾನ ನೀಡಿದ್ದರು. ಸೇನಾ ನೆಲೆಯ ಅಧಿಕಾರಿಗಳೇ ನವಜೋಡಿಯನ್ನು ಆಹ್ವಾನಿಸಿದ್ದಾರೆ. ಸೇನಾನೆಲೆಯ ಕಮಾಂಡರ್ ಬ್ರಿ.ಲಲಿತ್ ಶರ್ಮಾ ದಂಪತಿಗೆ ಪುಷ್ಪಗುಚ್ಛ, ಕಿರು ಕಾಣಿಕೆ ನೀಡಿದ್ದಾರೆ.
“ನಾವು ನೆಮ್ಮದಿಯಲ್ಲಿ ಜೀವನ ನಡೆಸಲು ನೀವು ನಿಮ್ಮ ಜೀವನವನ್ನು ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದೀರಿ. ನಿಮ್ಮಿಂದಾಗಿಯೇ ನಾವು ನೆಮ್ಮದಿಯಿಂದ ಜೀವಿಸುತ್ತಿದ್ದೇವೆ’ ಎಂದು ದಂಪತಿ ಕೈಬರಹದ ಆಹ್ವಾನದಲ್ಲಿ ಉಲ್ಲೇಖಿಸಿದ್ದರು. ಅವರ ಆಹ್ವಾನ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.