ಸಂಸದರ ವೇತನ ನಿಗದಿ ಸಂಸತ್ತಿನ ಪರಮಾಧಿಕಾರ
Team Udayavani, Mar 25, 2017, 3:50 AM IST
ಹೊಸದಿಲ್ಲಿ: ಸಂಸದರ ವೇತನ ಮತ್ತು ಪಿಂಚಣಿ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಸಂಸದರಿಗೆ ವೇತನ ಮತ್ತು ಪಿಂಚಣಿ ನಿಗದಿ ಮಾಡುವುದು ಸಂಸತ್ತಿನ ಪರಮಾಧಿಕಾರ. ಸುಪ್ರೀಂ ಕೋರ್ಟ್ ಈ ವಿಚಾರವನ್ನು ಕೈಬಿಟ್ಟು ಬೇರೆ ವಿಷಯಗಳ ಕಡೆ ಗಮನ ಹರಿಸುವುದು ಒಳಿತು ಎಂಬ ಪರೋಕ್ಷ ಸಂದೇಶವನ್ನು ಸಂಸದರು ರವಾನಿಸಿದ್ದಾರೆ.
ಇದು ಪೂರ್ಣ ಸಂಸತ್ತಿಗೆ ಒಳಪಡುವ ವಿಚಾರವಾಗಿದ್ದು, ಸಂಸದರ ವೇತನ ಮತ್ತು ಪಿಂಚಣಿಯನ್ನು ನಿರ್ಧರಿಸುವ ಎಲ್ಲ ಹಕ್ಕು ಇರುವುದು ಸಂಸತ್ಗೆ ಮಾತ್ರ ಎಂದು ಶುಕ್ರವಾರ ಲೋಕಸಭೆಯಲ್ಲಿ ಸಚಿವ ಅನಂತ್ ಕುಮಾರ್ ಹೇಳಿದರು. ದೇಶದಲ್ಲಿನ ಶೇ. 80ರಷ್ಟು ಚುನಾಯಿತ ಪ್ರತಿನಿಧಿಗಳು ಕೋಟ್ಯಧಿಪತಿಗಳು ಎಂದು ಸುಪ್ರೀಂ ಕೋರ್ಟ್ ಅಭಿ ಪ್ರಾಯ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಚಿವರು ಸದನದಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ಶೂನ್ಯವೇಳೆ ಟಿಎಂಸಿ ನಾಯಕ ಸುಗತ ರಾಯ್ ಕೂಡ ಇದಕ್ಕೆ ಧ್ವನಿ ಗೂಡಿಸಿದ್ದು, ಸಂಸತ್ ನಿರ್ಧಾರ ಮಾಡಬೇಕಾದ ವಿಷಯವನ್ನು ಕೋರ್ಟ್ ಮಾಡಲು ಹೊರಟು ಸಂಸತ್ತಿನ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸತ್ತೇನೂ “ನಿವೃತ್ತ ಜಡ್ಜ್ಗಳಿಗೆ ಪಿಂಚಣಿಯನ್ನೇಕೆ ನೀಡುತ್ತೀರಿ’ ಎಂದು ಪ್ರಶ್ನಿಸಲಿಲ್ಲ ತಾನೇ? ನೀವೇಕೆ ಸಂಸದರ ವಿಚಾರದಲ್ಲಿ ಪ್ರಶ್ನಿಸುತ್ತೀರಿ ಎಂದೂ ಕೇಳಿದ್ದಾರೆ ರಾಯ್. ಗುರುವಾರವಷ್ಟೇ ರಾಜ್ಯಸಭೆಯಲ್ಲಿ ಸಚಿವ ಜೇಟ್ಲಿ ಅವರೂ ಸುಪ್ರೀಂ ನಿಲುವಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.