Parliament Security Breach: ಎಂಟು ಭದ್ರತಾ ಸಿಬ್ಬಂದಿ ಅಮಾನತು


Team Udayavani, Dec 14, 2023, 11:51 AM IST

Parliament Security Breach: Eight Security Personnel Suspended

ಹೊಸದಿಲ್ಲಿ: ಬುಧವಾರ ಲೋಕಸಭೆಯಲ್ಲಿ ನಡೆದ ಭಾರಿ ಭದ್ರತಾ ಲೋಪ ಘಟನೆಯ ಬಳಿಕ ಇದೀಗ ಲೋಕಸಭೆ ಸೆಕ್ರೆಟರಿಯೇಟ್ ಎಂಟು ಮಂದಿ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಬುಧವಾರ ಸಂಸತ್ ಭವನದಲ್ಲಿ ಭಾರಿ ಭದ್ರತಾ ಲೋಪವಾಗಿದ್ದು, ಲೋಕಸಭೆಗೆ ವೀಕ್ಷಕರ ಗ್ಯಾಲರಿಯಿಂದ ಕಲಾಪದೆಡೆಗೆ ನುಗ್ಗಿದ ಇಬ್ಬರು ಗ್ಯಾಸ್ ಕ್ಯಾನಿಸ್ಟರ್ ಗಳನ್ನು ಸಿಡಿಸಿ ಆತಂಕ ಮೂಡಿಸಿದ್ದರು.

ಘಟನೆ ಸಂಭವಿಸಿದಾಗ ಸಿಬ್ಬಂದಿಯು ಪ್ರವೇಶ ದ್ವಾರ ಮತ್ತು ಸಂಸತ್ ಭವನದ ಪ್ರವೇಶ ಪ್ರದೇಶ ಸೇರಿದಂತೆ ನಿರ್ಣಾಯಕ ಪ್ರವೇಶ ಕೇಂದ್ರಗಳಲ್ಲಿ ನಿಂತಿದ್ದರು.

ಭದ್ರತಾ ಲೋಪದ ನಂತರ, ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವಾಲಯವು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ, ತನಿಖೆಯ ನೇತೃತ್ವ ವಹಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಮುಖ್ಯಸ್ಥರನ್ನು ನೇಮಿಸಿದೆ.

ಇದನ್ನೂ ಓದಿ:Rajya Sabha; ಋತುಸ್ರಾವ ಅಂಗವಿಕಲತೆಯಲ್ಲ: ವೇತನ ಸಹಿತ ಮುಟ್ಟಿನ ರಜೆಗೆ ಸ್ಮೃತಿ ಇರಾನಿ ವಿರೋಧ

ಏನಾಯ್ತು?: ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾಗರ ಶರ್ಮಾ ಹಾಗೂ ಮನೋರಂಜನ್‌ ಸುಮಾರು 10ರಿಂದ 12 ಅಡಿ ಎತ್ತರದಿಂದ ಸಂಸದರು ಕುಳಿತಿದ್ದ ಟೇಬಲ್‌ ಮೇಲೆ ಜಿಗಿದಿದ್ದಾರೆ

ಹಿಡಿಯಲು ಯತ್ನಿಸಿದಾಗ ಒಂದು ಟೇಬಲ್‌ನಿಂದ ಮತ್ತೂಂದು ಟೇಬಲ್‌ ಮೇಲೆ ಜಿಗಿಯುತ್ತ ಹುಚ್ಚಾಟ ಮೆರೆದಿದ್ದಾರೆ. ಸಭಾಪತಿ ಕೊಠಡಿಯತ್ತ ಓಡಲು ಯತ್ನಿಸಿದ್ದಲ್ಲದೇ, ಅರೆಕ್ಷಣದಲ್ಲಿ ತಮ್ಮ ಶೂಗಳಡಿ ಬಚ್ಚಿಟ್ಟು ತಂದಿದ್ದ ಗ್ಯಾಸ್‌ ಕ್ಯಾನಿಸ್ಟರ್‌ (ಹೊಗೆ ಬಾಂಬ್‌) ಹೊರ ತೆಗೆದು ಸ್ಪ್ರೇ ಮಾಡಿದ್ದಾರೆ. ಈ ಕ್ಯಾನಿಸ್ಟರ್‌ನಿಂದ ಹೊರ ಬಂದ ಹಳದಿ ಬಣ್ಣದ ಹೊಗೆ ಕ್ಷಣಕಾಲ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಅಷ್ಟರಲ್ಲೇ ಕೆಲ ಸಂಸದರು ಆಗಂತುಕರನ್ನು ಹಿಡಿದು, ತದುಕಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಪೀಕರ್‌ ಓಂ ಪ್ರಕಾಶ್‌ ಬಿರ್ಲಾ ಸಂಸತ್‌ ಕಲಾಪ ವೀಕ್ಷಣೆಗೆ ನೀಡಿದ್ದ ಎಲ್ಲ ಪಾಸ್‌ಗಳನ್ನು ರದ್ದುಗೊಳಿಸಿದ್ದಾರೆ.

ಭದ್ರತಾ ಉಸ್ತುವಾರಿ ಯಾರು?

ಸಂಸತ್ತಿನ ಆವರಣ ಹಾಗೂ ಸುತ್ತಮುತ್ತಲಿನ ಸಂಸದರ ಸುರಕ್ಷತೆಯನ್ನು ಸಂಸತ್ತಿನ ಭದ್ರತಾ ಸೇವೆಗೆ ವಹಿಸಲಾಗಿದೆ. ಇದು ಒಟ್ಟಾರೆ ಸಮನ್ವಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ದೆಹಲಿ ಪೊಲೀಸ್‌, ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (ಸಿಆರ್‌ಪಿಎಫ್), ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ), ಇಂಟೆಲಿಜೆನ್ಸ್‌ ಬ್ಯೂರೋ (ಐಬಿ), ವಿಶೇಷ ರಕ್ಷಣಾ ಗುಂಪು (ಎಸ್‌ಪಿಜಿ) ಮತ್ತು ನ್ಯಾಷನಲ್‌ ಸೆಕ್ಯುರಿಟಿ ಗಾರ್ಡ್‌ (ಎನ್‌ಎಸ್‌ಜಿ) ನಂತಹ ವಿವಿಧ ಭದ್ರತಾ ಸಂಸ್ಥೆಗಳು ಇವೆ. ಭದ್ರತಾ ಸಿಬ್ಬಂದಿ ಆಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ. ಸಂಸತ್ತಿನ ಪರಿಧಿಯ ನಿಯಂತ್ರಣವನ್ನು ತೆಗೆದುಕೊಳ್ಳುವಾಗ ದೆಹಲಿ ಪೊಲೀಸರ ಶಾರ್ಪ್‌ಶೂಟರ್‌ಗಳು ಮತ್ತು ಎಸ್‌ ಡಬ್ಯುಎಟಿ ಕಮಾಂಡೋಗಳಿಂದ ಸಹಾಯ ಪಡೆಯುತ್ತವೆ. ಲೋಕಸಭೆಯ ಸೆಕ್ರೆಟರಿಯಟ್‌ನ ಹೆಚ್ಚುವರಿ ಕಾರ್ಯದರ್ಶಿ (ಭದ್ರತೆ) ಅವರು ಸಂಸತ್ತಿನ ಭದ್ರತಾ ಸೇವೆ, ದೆಹಲಿ ಪೊಲೀಸ್‌, ಐಟಿಬಿಪಿ, ಸಿಆರ್‌ಪಿಎಫ್‌ ಮತ್ತಿತರ ಪಡೆಗಳು ಇಡೀ ಸಂಸತ್ತಿನ ಭದ್ರತೆಯ ಉಸ್ತುವಾರಿ ವಹಿಸಿರುತ್ತವೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.