Parliament ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆ
1995ರ ವಕ್ಫ್ ಕಾಯ್ದೆ ವಕ್ಫ್ ; ಮಂಡಳಿಯಲ್ಲಿ ಇಬ್ಬರು ಮಹಿಳಾ ಸದಸ್ಯರಿಗೆ ಸ್ಥಾನ
Team Udayavani, Aug 8, 2024, 7:15 AM IST
ಹೊಸದಿಲ್ಲಿ: ಗುರುವಾರ (ಆ. 8) ಲೋಕಸಭೆಯಲ್ಲಿ ವಕ್ಫ್ ಮಂಡಳಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗುವುದು ಎಂದು
ಕೇಂದ್ರ ಸರಕಾರವು ಲೋಕಸಭೆ ಕಲಾಪ ಸಲಹಾ ಸಮಿತಿಗೆ ಬುಧವಾರ ಮಾಹಿತಿ ನೀಡಿದೆ.
ಈ ಮಧ್ಯೆ ಮಸೂದೆಯನ್ನು ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. 1923 ವಕ್ಫ್ ಕಾಯ್ದೆ ಯನ್ನು ಹಿಂಪಡೆದು, 1995ರ ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತರಲು ಕೇಂದ್ರ ಸರಕಾರ ಯೋಜಿಸಿದೆ.
ಹೊಸ ಕಾಯ್ದೆಯ ಮೂಲಕ ಕೇಂದ್ರ ಸರಕಾರವು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಸುಧಾ ರಣೆ ತರಲು ಮುಂದಾಗಿದೆ. ಸುಮಾರು 40 ತಿದ್ದುಪಡಿಗಳನ್ನು ಜಾರಿಗೆ ತರಲು ಯೋಜಿಸ ಲಾಗಿದೆ. ವಿಶೇಷವಾಗಿ ಆಸ್ತಿಗಳ ಮೌಲ್ಯವನ್ನು ದೃಢಪಡಿಸುವುದಕ್ಕಾಗಿ ಕಾಯ್ದೆಯ ಮೂಲಕ ವಕ್ಫ್ ಮಂಡಳಿಯನ್ನು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನೋಂದಣಿ ಮಾಡುವುದು ಸೇರಿದಂತೆ ಅನೇಕ ಸುಧಾರಣೆಗಳನ್ನು ಉದ್ದೇಶಿಸಲಾಗಿದೆ. ಜತೆಗೆ ಮಂಡಳಿಯಲ್ಲಿ ಇಬ್ಬರು ಮಹಿಳೆಯರಿಗೆ ಕಡ್ಡಾಯ ಸ್ಥಾನ ಹಾಗೂ ಮುಸ್ಲಿಮತೇರರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದೆ.
ಸ್ಥಾಯೀ ಸಮಿತಿ ಪರಾಮರ್ಶೆಗೆ ಆಗ್ರಹ
ಮಸೂದೆಯನ್ನು ಮಂಡಿಸಿದ ಬಳಿಕ ಪರಾಮರ್ಶೆಗಾಗಿ ಸಂಸದೀಯ ಸ್ಥಾಯೀ ಸಮಿತಿಗೆ ಕಳುಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಆದರೆ ಸರಕಾರ ಮಾತ್ರ ಈ ಕುರಿತು ಕಲಾಪ ಸಲಹಾ ಸಮಿತಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದೆ.
ತಿದ್ದುಪಡಿ
ಮಸೂದೆಯಲ್ಲಿ ಏನಿದೆ?
-ದೇಶದಲ್ಲಿರುವ ವಕ್ಫ್ ಆಸ್ತಿಗಳನ್ನು ಗುರುತಿಸುವುದು
-ಜಿಲ್ಲಾಧಿಕಾರಿ ಕಚೇರಿಗಳಲ್ಲಿ ವಕ್ಫ್ ಮಂಡಳಿ ನೋಂದಣಿ
-ವಕ್ಫ್ ಮಂಡಳಿಯಲ್ಲಿ 2 ಮಹಿಳಾ ಸದಸ್ಯರು ಕಡ್ಡಾಯ
-ಬೋಹ್ರಾ ಸಮುದಾಯದಹಕ್ಕುಗಳ ರಕ್ಷಣೆ
-ಮುಸ್ಲಿಮ್ ಸಮುದಾಯದ ಎಲ್ಲ ವರ್ಗದವರಿಗೂ ಅವಕಾಶ
-ಇಸ್ಲಾಮಿಕ್ ರಾಷ್ಟ್ರಗಳಂತೆ ವಕ್ಫ್ ಮಂಡಳಿ ಪುನಾರಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.