New Parliament: ಇಂದಿನಿಂದ ಹೊಸ ಸಂಸತ್‌ ಭವನದಲ್ಲಿ ಕಲಾಪ… ಶಾಂತಿ ಕಾಪಾಡಲು ಸ್ಪೀಕರ್ ಮನವಿ


Team Udayavani, Sep 19, 2023, 8:29 AM IST

New Parliament: ಇಂದಿನಿಂದ ಹೊಸ ಸಂಸತ್‌ ಭವನದಲ್ಲಿ ಕಲಾಪ… ಶಾಂತಿ ಕಾಪಾಡಲು ಸ್ಪೀಕರ್ ಮನವಿ

ಹೊಸದಿಲ್ಲಿ: ದೇಶದ ಐತಿಹಾಸಿಕ ಹಳೆ ಸಂಸತ್‌ ಭವನ ಇತಿಹಾಸದ ಪುಟಕ್ಕೆ ಸೇರಿದೆ. ಸೋಮವಾರದಂದು ಹಳೆ ಸಂಸತ್‌ ಭವನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಕೊನೆಯ ಕಲಾಪಗಳು ನಡೆದವು. ಮಂಗಳವಾರ ಹೊಸ ಸಂಸತ್‌ ಭವನದಲ್ಲಿ ಸಂಸತ್‌ ಕಲಾಪಗಳು ನಡೆಯಲಿದೆ. ಹೊಸ ಸಂಸತ್‌ ಭವನದಲ್ಲಿ ಕಲಾಪಗಳು ನಡೆಯುವ ಸಂದರ್ಭದಲ್ಲಿ ಅನಾವಶ್ಯಕ ಗದ್ದಲ, ಧರಣಿ, ಕರಪತ್ರ, ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ಕೈಗೊಳ್ಳದಿರುವಂತೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಆಡಳಿತ ಮತ್ತು ವಿಪಕ್ಷ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಸೋಮವಾರದಂದು ಉಭಯ ಸದನಗಳ ಆಡಳಿತ ಮತ್ತು ವಿಪಕ್ಷ ಸದಸ್ಯರು ಹಳೆಯ ಸಂಸತ್‌ ಭವನ ನಡೆದು ಬಂದ ಹಾದಿಯ ಬಗೆಗೆ ಮೆಲುಕು ಹಾಕಿದರು. ಹಳೆ ಸಂಸತ್‌ ಭವನದಲ್ಲಿ ನಡೆದ ಸಂವಿಧಾನ ಸಭಾದಿಂದ ಹಿಡಿದು ಸಾಧನೆಗಳು, ಅನು ಭವಗಳು, ನೆನಪುಗಳು ಮತ್ತು ಕಲಿತ ಪಾಠಗಳ ಬಗೆಗೆ ಸದಸ್ಯರು ತಮ್ಮ ಅನುಭಗಳನ್ನು ಹಂಚಿಕೊಂಡರು.

ಲೋಕಸಭೆ ಕಲಾಪವನ್ನು ಮುಂದೂಡುವುದಕ್ಕೂ ಮುನ್ನ ಮಾತನಾಡಿದ ಸ್ಪೀಕರ್‌ ಓಂ ಬಿರ್ಲಾ, ಈ ಐತಿಹಾಸಿಕ ಮತ್ತು ಪ್ರತಿಷ್ಟಿತ ಕಟ್ಟಡದಲ್ಲಿ ಕೊನೆಯ ದಿನ ನಡೆದ ಕಲಾಪದಲ್ಲಿ ರಚನಾತ್ಮಕ ಚರ್ಚೆಗಳು ನಡೆದಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ಮತ್ತು ಎಲ್ಲ ಪಕ್ಷಗಳ ನಾಯಕರು ತಮ್ಮ ಅನುಭವ, ಅಭಿಪ್ರಾಯಗಳನ್ನು ಮುಖ್ತವಾಗಿ ಹಂಚಿಕೊಂಡಿದ್ದಾರೆ. ಇದೊಂದು ಎಲ್ಲರಿಗೂ ಐತಿಹಾಸಿಕ ಮತ್ತು ಮರೆಯಲಾರದ ಕ್ಷಣವಾಗಿದೆ. ಈಗ ನಾವು ಹೊಸ ಸಂಸತ್‌ ಭವನದತ್ತ ಮುಖ ಮಾಡಿದ್ದೇವೆ. ಆದರೆ ಹಳೆಯ ಕಟ್ಟಡದಲ್ಲಿನ ನೆನಪುಗಳು ಎಂದಿಗೂ ನಮ್ಮೊಂದಿಗಿರಲಿವೆ ಎಂದರು.

ನಮ್ಮ ಸಂಸದೀಯ ಪ್ರಜಾಸತ್ತೆಯ ಮುಂದಿನ ಪಯಣ ಹೊಸ ಸಂಸತ್‌ ಭವನದಲ್ಲಿ ಆರಂಭಗೊಳ್ಳಲಿದೆ.ಈ ಸಂಸತ್‌ ಭವನದಲ್ಲಿ ನಾವು ಹೊಸ ಮೈಲುಗಲ್ಲುಗಳನ್ನು ನೆಡಬೇಕಿದೆ. ಎಲ್ಲ ಸದಸ್ಯರು ಅನಾವಶ್ಯಕ ಗದ್ದಲ, ಗಲಾಟೆ, ಧರಣಿ, ಪ್ರತಿಭಟನೆಯಲ್ಲಿ ತೊಡಗಿ ಕೊಳ್ಳಲದೆ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಶದ ಸಂಸದೀಯ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕು ಎಂದವರು ಕರೆ ನೀಡಿದರು.

ಹೊಸ ಸಂಸತ್‌ ಭವನದಲ್ಲಿ ಹೊಸ ಉತ್ಸಾಹ, ಸ್ಫೂರ್ತಿಯೊಂದಿಗೆ ಉತ್ತಮ ಗುಣಮಟ್ಟದ ಚರ್ಚೆಗಳು ಸದನದಲ್ಲಿ ನಡೆಯಲಿ ಎಂದು ಹಾರೈಸಿದ ಅವರು, ಇದೇ ವೇಳೆ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಹಳೆ ಕಟ್ಟಡದಲ್ಲಿ ಲೋಕಸಭೆ ಸ್ಪೀಕರ್‌ ಆಗಿ ಕರ್ತವ್ಯ ನಿರ್ವಹಿಸಿದಾಗಿನ ತಮ್ಮ ಅನುಭವವನ್ನು ಅವರು ಸದಸ್ಯರೊಂದಿಗೆ ಹಂಚಿ ಕೊಂಡರು.

ಮಂಗಳವಾರ ಅಪರಾಹ್ನ ಗಂಟೆ 2.15ಕ್ಕೆ ಹೊಸ ಸಂಸತ್‌ ಭವನದ ಮೇಲ್ಮನೆ ಚೇಂಬರ್‌ನಲ್ಲಿ ಕಲಾಪಗಳು ಆರಂಭಗೊಳ್ಳಲಿದ್ದರೆ ಕೆಳಮನೆ ಚೇಂಬರ್‌ನಲ್ಲಿ ಅಪರಾಹ್ನ ಗಂಟೆ 1.15ಕ್ಕೆ ಲೋಕಸಭೆ ಕಲಾಪ ಆರಂಭಗೊಳ್ಳಲಿದೆ.

ಇದನ್ನೂ ಓದಿ : Asian Games  ಫುಟ್ ಬಾಲ್‌: ಭಾರತಕ್ಕೆ ಇಂದು ಚೀನ ಸವಾಲು

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.