New Parliament: ಇಂದಿನಿಂದ ಹೊಸ ಸಂಸತ್‌ ಭವನದಲ್ಲಿ ಕಲಾಪ… ಶಾಂತಿ ಕಾಪಾಡಲು ಸ್ಪೀಕರ್ ಮನವಿ


Team Udayavani, Sep 19, 2023, 8:29 AM IST

New Parliament: ಇಂದಿನಿಂದ ಹೊಸ ಸಂಸತ್‌ ಭವನದಲ್ಲಿ ಕಲಾಪ… ಶಾಂತಿ ಕಾಪಾಡಲು ಸ್ಪೀಕರ್ ಮನವಿ

ಹೊಸದಿಲ್ಲಿ: ದೇಶದ ಐತಿಹಾಸಿಕ ಹಳೆ ಸಂಸತ್‌ ಭವನ ಇತಿಹಾಸದ ಪುಟಕ್ಕೆ ಸೇರಿದೆ. ಸೋಮವಾರದಂದು ಹಳೆ ಸಂಸತ್‌ ಭವನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಕೊನೆಯ ಕಲಾಪಗಳು ನಡೆದವು. ಮಂಗಳವಾರ ಹೊಸ ಸಂಸತ್‌ ಭವನದಲ್ಲಿ ಸಂಸತ್‌ ಕಲಾಪಗಳು ನಡೆಯಲಿದೆ. ಹೊಸ ಸಂಸತ್‌ ಭವನದಲ್ಲಿ ಕಲಾಪಗಳು ನಡೆಯುವ ಸಂದರ್ಭದಲ್ಲಿ ಅನಾವಶ್ಯಕ ಗದ್ದಲ, ಧರಣಿ, ಕರಪತ್ರ, ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ಕೈಗೊಳ್ಳದಿರುವಂತೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಆಡಳಿತ ಮತ್ತು ವಿಪಕ್ಷ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಸೋಮವಾರದಂದು ಉಭಯ ಸದನಗಳ ಆಡಳಿತ ಮತ್ತು ವಿಪಕ್ಷ ಸದಸ್ಯರು ಹಳೆಯ ಸಂಸತ್‌ ಭವನ ನಡೆದು ಬಂದ ಹಾದಿಯ ಬಗೆಗೆ ಮೆಲುಕು ಹಾಕಿದರು. ಹಳೆ ಸಂಸತ್‌ ಭವನದಲ್ಲಿ ನಡೆದ ಸಂವಿಧಾನ ಸಭಾದಿಂದ ಹಿಡಿದು ಸಾಧನೆಗಳು, ಅನು ಭವಗಳು, ನೆನಪುಗಳು ಮತ್ತು ಕಲಿತ ಪಾಠಗಳ ಬಗೆಗೆ ಸದಸ್ಯರು ತಮ್ಮ ಅನುಭಗಳನ್ನು ಹಂಚಿಕೊಂಡರು.

ಲೋಕಸಭೆ ಕಲಾಪವನ್ನು ಮುಂದೂಡುವುದಕ್ಕೂ ಮುನ್ನ ಮಾತನಾಡಿದ ಸ್ಪೀಕರ್‌ ಓಂ ಬಿರ್ಲಾ, ಈ ಐತಿಹಾಸಿಕ ಮತ್ತು ಪ್ರತಿಷ್ಟಿತ ಕಟ್ಟಡದಲ್ಲಿ ಕೊನೆಯ ದಿನ ನಡೆದ ಕಲಾಪದಲ್ಲಿ ರಚನಾತ್ಮಕ ಚರ್ಚೆಗಳು ನಡೆದಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ಮತ್ತು ಎಲ್ಲ ಪಕ್ಷಗಳ ನಾಯಕರು ತಮ್ಮ ಅನುಭವ, ಅಭಿಪ್ರಾಯಗಳನ್ನು ಮುಖ್ತವಾಗಿ ಹಂಚಿಕೊಂಡಿದ್ದಾರೆ. ಇದೊಂದು ಎಲ್ಲರಿಗೂ ಐತಿಹಾಸಿಕ ಮತ್ತು ಮರೆಯಲಾರದ ಕ್ಷಣವಾಗಿದೆ. ಈಗ ನಾವು ಹೊಸ ಸಂಸತ್‌ ಭವನದತ್ತ ಮುಖ ಮಾಡಿದ್ದೇವೆ. ಆದರೆ ಹಳೆಯ ಕಟ್ಟಡದಲ್ಲಿನ ನೆನಪುಗಳು ಎಂದಿಗೂ ನಮ್ಮೊಂದಿಗಿರಲಿವೆ ಎಂದರು.

ನಮ್ಮ ಸಂಸದೀಯ ಪ್ರಜಾಸತ್ತೆಯ ಮುಂದಿನ ಪಯಣ ಹೊಸ ಸಂಸತ್‌ ಭವನದಲ್ಲಿ ಆರಂಭಗೊಳ್ಳಲಿದೆ.ಈ ಸಂಸತ್‌ ಭವನದಲ್ಲಿ ನಾವು ಹೊಸ ಮೈಲುಗಲ್ಲುಗಳನ್ನು ನೆಡಬೇಕಿದೆ. ಎಲ್ಲ ಸದಸ್ಯರು ಅನಾವಶ್ಯಕ ಗದ್ದಲ, ಗಲಾಟೆ, ಧರಣಿ, ಪ್ರತಿಭಟನೆಯಲ್ಲಿ ತೊಡಗಿ ಕೊಳ್ಳಲದೆ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೇಶದ ಸಂಸದೀಯ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕು ಎಂದವರು ಕರೆ ನೀಡಿದರು.

ಹೊಸ ಸಂಸತ್‌ ಭವನದಲ್ಲಿ ಹೊಸ ಉತ್ಸಾಹ, ಸ್ಫೂರ್ತಿಯೊಂದಿಗೆ ಉತ್ತಮ ಗುಣಮಟ್ಟದ ಚರ್ಚೆಗಳು ಸದನದಲ್ಲಿ ನಡೆಯಲಿ ಎಂದು ಹಾರೈಸಿದ ಅವರು, ಇದೇ ವೇಳೆ ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಹಳೆ ಕಟ್ಟಡದಲ್ಲಿ ಲೋಕಸಭೆ ಸ್ಪೀಕರ್‌ ಆಗಿ ಕರ್ತವ್ಯ ನಿರ್ವಹಿಸಿದಾಗಿನ ತಮ್ಮ ಅನುಭವವನ್ನು ಅವರು ಸದಸ್ಯರೊಂದಿಗೆ ಹಂಚಿ ಕೊಂಡರು.

ಮಂಗಳವಾರ ಅಪರಾಹ್ನ ಗಂಟೆ 2.15ಕ್ಕೆ ಹೊಸ ಸಂಸತ್‌ ಭವನದ ಮೇಲ್ಮನೆ ಚೇಂಬರ್‌ನಲ್ಲಿ ಕಲಾಪಗಳು ಆರಂಭಗೊಳ್ಳಲಿದ್ದರೆ ಕೆಳಮನೆ ಚೇಂಬರ್‌ನಲ್ಲಿ ಅಪರಾಹ್ನ ಗಂಟೆ 1.15ಕ್ಕೆ ಲೋಕಸಭೆ ಕಲಾಪ ಆರಂಭಗೊಳ್ಳಲಿದೆ.

ಇದನ್ನೂ ಓದಿ : Asian Games  ಫುಟ್ ಬಾಲ್‌: ಭಾರತಕ್ಕೆ ಇಂದು ಚೀನ ಸವಾಲು

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

1-LOP

Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್‌ ವಿರುದ್ಧ ಕ್ರಮ?

1-weww

Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ

NIA

MP ಎಂಜಿನಿಯರ್‌ ರಶೀದ್‌ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್‌ಐಎ ಅಸ್ತು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.