ಹೈವೋಲ್ಟೇಜ್ ಡ್ರಾಮಾ: ವಿಮಾನದಲ್ಲೇ ಕಾಂಗ್ರೆಸ್‌ ನಾಯಕ ಖೇರಾ ಬಂಧನ… ಕಾಂಗ್ರೆಸ್‌ ಪ್ರತಿಭಟನೆ


Team Udayavani, Feb 24, 2023, 7:22 AM IST

ಹೈವೋಲ್ಟೇಜ್ ಡ್ರಾಮಾ: ವಿಮಾನದಲ್ಲೇ ಕಾಂಗ್ರೆಸ್‌ ನಾಯಕ ಖೇರಾ ಬಂಧನ… ಕಾಂಗ್ರೆಸ್‌ ಪ್ರತಿಭಟನೆ

ಹೊಸದಿಲ್ಲಿ: ಅವಹೇಳನಕಾರಿ ಹೇಳಿಕೆ ನೀಡಿರುವ ಆರೋ­ಪದಲ್ಲಿ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಅವರನ್ನು ಗುರುವಾರ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಈ ದಿಢೀರ್‌ ಬೆಳ­ವಣಿಗೆಯಿಂದಾಗಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಹೈವೋಲ್ಟೆàಜ್‌ ಡ್ರಾಮಾ ನಡೆದಿದ್ದು, ವಿಮಾನ ಸಂಚಾರವೂ 2 ಗಂಟೆ ವಿಳಂಬ­ವಾಯಿತು.
ಇನ್ನೊಂದೆಡೆ, ಪವನ್‌ ಖೇರಾ ಅವರಿಗೆ ನಿರೀಕ್ಷಣ ಜಾಮೀನು ಮಂಜೂರು ಮಾಡಿರುವ ಸುಪ್ರೀಂ, ಫೆ.28ರ ವರೆಗೆ ಅವರಿಗೆ ಬಂಧನದಿಂದ ರಕ್ಷಣೆ ಒದಗಿಸಿದೆ. ಘಟನೆ ಬೆನ್ನಲ್ಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ ನಡೆದಿದ್ದು, ಪ್ರತಿಭಟನೆಗಳೂ ನಡೆದಿವೆ.

ಆಗಿದ್ದೇನು?: ಇತ್ತೀಚೆಗೆ ಅದಾನಿ ಗ್ರೂಪ್‌ ವಿರುದ್ಧದ ಹಿಂಡನ್‌ಬರ್ಗ್‌ ವರದಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಅವರು, ಪ್ರಧಾನಿ ಮೋದಿಯವರನ್ನು “ನರೇಂದ್ರ ಗೌತಮ್‌ದಾಸ್‌ ಮೋದಿ, ಅಲ್ಲಲ್ಲ ನರೇಂದ್ರ ದಾಮೋದರ್‌ದಾಸ್‌ ಮೋದಿ’ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಖೇರಾ ವಿರುದ್ಧ ದೇಶದ ಮೂಲೆ ಮೂಲೆಗಳಲ್ಲೂ ಕೇಸು ದಾಖಲಾಗಿತ್ತು. ಅಸ್ಸಾಂನಲ್ಲಿ ದಾಖಲಾಗಿದ್ದ ಎಫ್ಐಆರ್‌ಗೆ ಅನುಗುಣವಾಗಿ ಖೇರಾರನ್ನು ಬಂಧಿಸಲು ನೆರವಾಗುವಂತೆ ಅಸ್ಸಾಂ ಪೊಲೀ­ಸರು ದಿಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು.

ವಿಮಾನದಿಂದ ಕೆಳಗಿಳಿಸಿದರು!: ರಾಯು³ರದಲ್ಲಿ ಶುಕ್ರವಾರ ಆರಂಭವಾಗಲಿರುವ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಳ್ಳಲೆಂದು ಖೇರಾ ಸಹಿತ ಕಾಂಗ್ರೆಸ್‌ನ ಹಲವು ನಾಯಕರು ದಿಲ್ಲಿಯಲ್ಲಿ ಇಂಡಿಗೋ ವಿಮಾನ ಹತ್ತಿದ್ದರು. ಈ ವೇಳೆ ಖೇರಾ ಅವರ ಬಳಿ ಬಂದ ಸಿಬಂದಿ, “ನಿಮ್ಮ ಬ್ಯಾಗ್‌ಗೆ ತಪ್ಪು ಟ್ಯಾಗ್‌ ಹಾಕಿದ್ದೀರಿ. ನಮ್ಮೊಂದಿಗೆ ಬನ್ನಿ’ ಎಂದು ಹೇಳಿ ವಿಮಾನದಿಂದ ಕೆಳಗಿಳಿಸಿದರು. ಅಲ್ಲಿ ಕಾಯುತ್ತಿದ್ದ ಪೊಲೀಸರು ಖೇರಾರನ್ನು ವಶಕ್ಕೆ ಪಡೆದರು. ಈ ವೇಳೆ ಆಕ್ರೋಶಗೊಂಡ ರಣದೀಪ್‌ ಸುಜೇìವಾಲ, ಕೆ.ಸಿ.ವೇಣುಗೋಪಾಲ್‌ ಸಹಿತ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕೂಡ, “ಅರೆಸ್ಟ್‌ ವಾರಂಟ್‌ ಇಲ್ಲದೇ ನೀವು ಬಂಧಿಸು­ವಂತಿಲ್ಲ’ ಎಂದು ವಾದಿಸಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಟಾರ್ಮ್ಯಾಕ್ ನಲ್ಲೇ ಧರಣಿ
ವಿಮಾನದ ಹೊರಗೆ ಟಾರ್ಮ್ಯಾಕ್ ನಲ್ಲೇ ಕುಳಿತು ಧರಣಿ ಆರಂಭಿಸಿದ ಕಾಂಗ್ರೆಸ್‌ ನಾಯಕರು, ಖೇರಾ ಅವರನ್ನು ಬಿಡದೇ ವಿಮಾನ ಹಾರಲು ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದರು. ಜತೆಗೆ “ಜಬ್‌ ಜಬ್‌ ಮೋದಿ ಡರ್ತಾ ಹೈ, ಪೊಲೀಸ್‌ ಕೆ ಪೀಛೆ ಚುಪ್ತಾ ಹೆ’ (ಯಾವಾಗ ಮೋದಿ ಹೆದರುತ್ತಾರೋ, ಪೊಲೀಸರ ಹಿಂದೆ ಅಡಗುತ್ತಾರೆ) ಎಂದು ಘೋಷಣೆಗಳನ್ನು ಕೂಗತೊಡಗಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಇಂಡಿಗೋ ಸಿಬಂದಿ, ಕೂಡಲೇ ಎಲ್ಲ ಪ್ರಯಾಣಿಕರನ್ನೂ ಕೆಳಗಿಳಿಸಿ ಬೇರೆ ವಿಮಾನದಲ್ಲಿ ಕಳುಹಿಸುವ ವ್ಯವಸ್ಥೆ ಮಾಡಿದರು.

ಕಾಂಗ್ರೆಸ್‌ -ಬಿಜೆಪಿ ವಾಕ್‌ವಾರ್‌
ಖೇರಾ ಬಂಧನ ವಿಚಾರವು ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇಂದ್ರ ಸರಕಾರವು ಭಾರತದ ಪ್ರಜಾಸತ್ತೆಯನ್ನು “ಹಿಟ್ಲರ್‌ಶಾಹಿ’ ಮತ್ತು “ಸರ್ವಾಧಿಕಾರ’ವಾಗಿ ಬದಲಾಯಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, “ವಿಪಕ್ಷಗಳ ನಾಯಕರು ತಾವು ಕಾನೂನಿಗಿಂತಲೂ ಮೇಲು ಎಂಬ ತಪ್ಪುಕಲ್ಪನೆಯಲ್ಲಿ ಬದುಕಬಾರದು’ ಎಂದು ಹೇಳಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, “ಸಂಸತ್‌ನಲ್ಲಿ ಧ್ವನಿಯೆತ್ತಿದರೆ ವಿಪಕ್ಷಗಳಿಗೆ ನೋಟಿಸ್‌ ನೀಡಲಾಗುತ್ತದೆ. ಸಮಾವೇಶ ನಡೆಯುವಾಗಲೇ ಛತ್ತೀಸ್‌ಗಢದಲ್ಲಿ ನಮ್ಮ ನಾಯಕರ ಮೇಲೆ ಇಡಿ ದಾಳಿ ನಡೆಯುತ್ತದೆ. ನಮ್ಮ ವಕ್ತಾರ ಖೇರಾರನ್ನು ಒತ್ತಾಯವಾಗಿ ವಿಮಾನದಿಂದ ಇಳಿಸಿ ಬಂಧಿಸಲಾಗಿದೆ. ಈ ಸರ್ವಾಧಿಕಾರ ವನ್ನು ನಾವು ಖಂಡಿಸುತ್ತೇವೆ’ ಎಂದಿದ್ದಾರೆ. ಬಿಜೆಪಿ ವಕ್ತಾರ ಗೌರವ್‌ ಭಾಟಿಯಾ, “ಎಲ್ಲವನ್ನೂ ಕಾನೂನುಪ್ರಕಾರವೇ ಮಾಡಲಾಗಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.