ಪೆಗಾಸಸ್‌ ಗೂಢಚಾರಿಕೆ ಮಾಡಿಲ್ಲ!


Team Udayavani, Aug 26, 2022, 7:05 AM IST

thumb news 5 court

ಹೊಸದಿಲ್ಲಿ: ದೇಶದ ಗಣ್ಯಾತಿಗಣ್ಯರ ಮೇಲೆ ಪೆಗಾಸಿಸ್‌ ಬಳಸಿ ಗೂಢಚಾರಿಕೆ ನಡೆಸ ಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. 29 ಫೋನ್‌ಗಳನ್ನು ಪರೀಕ್ಷಿಸಲಾಗಿದ್ದು, ಇವು ಗಳಲ್ಲಿ 5 ಫೋನ್‌ಗಳಲ್ಲಿ ಮಾತ್ರ ಮಾಲ್‌ವೇರ್‌ ಪತ್ತೆ ಯಾಗಿದೆ ಎಂದು ಸುಪ್ರೀಂ ಕೋರ್ಟ್‌ ನೇಮಿಸಿದ್ದ ತಾಂತ್ರಿಕ ಸಮಿತಿ ವರದಿ ನೀಡಿದೆ.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ.ಎನ್‌.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ಹಿಮಾ ಕೊಹ್ಲಿ ಅವರಿದ್ದ ಪೀಠಕ್ಕೆ ವರದಿ ಸಲ್ಲಿಸಲಾಗಿದೆ.

ಕೇಂದ್ರದ ಇಬ್ಬರು ಸಚಿವರು, ಪತ್ರಕರ್ತರು, ವಿಪಕ್ಷಗಳ ನಾಯಕರು, ನ್ಯಾಯಮೂರ್ತಿಗಳು, ಉದ್ಯಮಿಗಳು ಸೇರಿ 300 ಮಂದಿ  ಮೇಲೆ ಇಸ್ರೇಲ್‌ ಮೂಲದ ಪೆಗಾಸಿಸ್‌ ಎಂಬ ಸ್ಪೈವೇರ್‌ ಅನ್ನು ಬಿಟ್ಟು ಗೂಢಚಾರಿಕೆ ಮಾಡಿಸಲಾಗಿತ್ತು ಎಂಬ ಆರೋಪ ಸಂಬಂಧ ಯಾವುದೇ ಸಾಕ್ಷ್ಯ ಗಳು ಸಿಕ್ಕಿಲ್ಲ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.

ಕೇಂದ್ರದ ಅಸಹಕಾರ:

ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿದ ನಿವೃತ್ತ ನ್ಯಾ| ಆರ್‌.ವಿ. ರವೀಂದ್ರನ್‌ ನೇತೃತ್ವದ ಸಮಿತಿ ಕೇಂದ‌ದ ವಿರುದ್ಧವೂ ಅತೃಪ್ತಿ ವ್ಯಕ್ತ ಪಡಿ ಸಿದೆ. ಒಟ್ಟಾರೆ 3 ಭಾಗಗಳಾಗಿ ಈ ವರದಿ ಸಲ್ಲಿ ಸಿದ್ದು, ಒಂದರಲ್ಲಿ ವ್ಯಕ್ತಿಗಳ ಖಾಸಗಿತನಕ್ಕೆ ಭದ್ರತೆ ನೀಡು  ವಂಥ ಕಾನೂನು ತರಬೇಕು ಎಂದು ಹೇಳಿದೆ. ಅಲ್ಲದೆ, ದೇಶಕ್ಕೆ ಸೈಬರ್‌ ಭದ್ರತೆ ನೀಡ ಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದೆ.

ನಾಲ್ಕು ವಾರಗಳ ಬಳಿಕ ವಿಚಾರಣೆ:

ನಾಲ್ಕು ವಾರಗಳ ಬಳಿಕ ವಿಚಾರಣೆ ನಡೆ ಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ. ಜತೆಗೆ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಪ್ರತೀ ವಿಷಯ ದಲ್ಲೂ ಸರಕಾರಗಳಿಗೆ ವಿನಾಯಿತಿ ಸಿಗದು. ಈ ವಿಚಾರದಲ್ಲಿ ನ್ಯಾಯಾಲಯವೂ ಮೂಕನಂತೆ ಕುಳಿತುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು :

ಪೆಗಾಸಸ್‌ ಬಳಸಿ ಗೂಢಚಾರಿಕೆ ನಡೆಸಲಾಗಿಲ್ಲ  ಎಂದು ಸುಪ್ರೀಂ ಸಮಿತಿ ವರದಿ ನೀಡಿದ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ತಿರುಗಿಬಿದ್ದಿದೆ. ಈಗಲಾದರೂ ರಾಹುಲ್‌ ಗಾಂಧಿ ಕ್ಷಮೆ ಕೇಳುತ್ತಾರೆಯೇ ಎಂದು ಮಾಜಿ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಪ್ರಶ್ನಿಸಿದ್ದಾರೆ. ಪೆಗಾಸಸ್‌ ಮೂಲಕ ಕೇಂದ್ರ ಸರಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ ಎಂದು ರಾಹುಲ್‌ ಈ ಹಿಂದೆ ಆರೋಪಿಸಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.