ಪೇಜಾವರ ಶ್ರೀಗಳಿಗೆ ಪದ್ಮವಿಭೂಷಣ; ಹಾಜಬ್ಬ, ತುಳಸೀಗೌಡಗೆ ಪದ್ಮಶ್ರೀ ಗೌರವ


Team Udayavani, Jan 25, 2020, 9:26 PM IST

pejawar

– ರಾಜ್ಯದ ಒಂಭತ್ತು ಮಂದಿಗೆ ಪದ್ಮ ಗೌರವ
– ಕ್ರೀಡೆಯಲ್ಲಿ ಎಂ.ಪಿ.ಗಣೇಶ್‌ಗೆ ಪದ್ಮಶ್ರೀ
– ಈ ಬಾರಿಯೂ ಎಲೆಮರೆಯ ಕಾಯಿಗಳಿಗೆ ಪ್ರಶಸ್ತಿ
– ಮೇರಿ ಕೋಂಗೆ ಪದ್ಮವಿಭೂಷಣ, ಸಿಂಧುಗೆ ಪದ್ಮಭೂಷಣ
– ಜೇಟ್ಲಿ , ಸುಷ್ಮಾ, ಜಾರ್ಜ್‌ ಫ‌ರ್ನಾಂಡೀಸ್‌ಗೂ ಮರಣೋತ್ತರ ಪದ್ಮ ಗೌರವ

ನವದೆಹಲಿ: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಸೇರಿದಂತೆ ರಾಜ್ಯದ ಒಂಭತ್ತು ಮಂದಿಗೆ ಪದ್ಮ ಗೌರವ ಸಂದಿದೆ.

ಗಣರಾಜ್ಯೋತ್ಸವ ಮುನ್ನಾದಿನವಾದ ಶನಿವಾರ ರಾತ್ರಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಬಾರಿ ಏಳು ಮಂದಿಗೆ ಪದ್ಮವಿಭೂಷಣ, 16 ಮಂದಿಗೆ ಪದ್ಮಭೂಷಣ ಮತ್ತು 118 ಮಂದಿಗೆ ಪದ್ಮಶ್ರೀ ಗೌರವ ನೀಡಲಾಗಿದೆ. ಇದರಲ್ಲಿ 34 ಮಂದಿ ಮಹಿಳೆಯರು ಮತ್ತು 18 ಮಂದಿ ವಿದೇಶಿಯರು ಸೇರಿದ್ದಾರೆ. ಅಷ್ಟೇ ಅಲ್ಲ, 12 ಮಂದಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.

ಈ ಬಾರಿ ಕರ್ನಾಟಕದ ಎಂಟು ಮಂದಿಗೆ ಪದ್ಮಶ್ರೀ ಗೌರವ ದೊರೆತಿದೆ. ಅದರಲ್ಲೂ ಸಮಾಜ ಸೇವೆ ವಿಭಾಗದಲ್ಲಿ ತುಳಸಿಗೌಡ ಮತ್ತು ಹರೇಕಲಾ ಹಾಜಬ್ಬ ಅವರಿಗೆ ಪ್ರಶಸ್ತಿ ನೀಡುವ ಮೂಲಕ ತೆರೆ ಮರೆಯ ಕಾಯಿಯಂತಿದ್ದವರನ್ನೂ ಗುರುತಿಸಲಾಗಿದೆ.

ಕರ್ನಾಟಕಕ್ಕೆ 8 ಗೌರವ
ಪದ್ಮವಿಭೂಷಣ
1. ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು, ಪೇಜಾವರ ಮಠ, ಉಡುಪಿ-

ಪದ್ಮಶ್ರೀ
2. ಎಂ.ಪಿ.ಗಣೇಶ್‌, ಕ್ರೀಡೆ
3. ಡಾ. ಬೆಂಗಳೂರು ಗಂಗಾಧರ – ವೈದ್ಯಕೀಯ
4. ಭರತ್‌ ಗೋಯೆಂಕಾ, ವ್ಯಾಪಾರ ಮತ್ತು ಉದ್ಯಮ
5. ತುಳಸಿಗೌಡ, ಸಮಾಜ ಸೇವೆ
6. ಹರೇಕಲಾ ಹಾಜಬ್ಬ, ಸಮಾಜಸೇವೆ
7. ಕೆ.ವಿ.ಸಂಪತ್‌ಕುಮಾರ್‌ ಮತ್ತು ವಿದುಶಿ ಜಯಲಕ್ಷ್ಮೀ ಕೆ.ಎಸ್‌. – ಸಾಹಿತ್ಯ, ಶಿಕ್ಷಣ ಮತ್ತು ಪತ್ರಿಕೋದ್ಯಮ
8. ವಿಜಯ ಸಂಕೇಶ್ವರ, ವ್ಯಾಪಾರ ಮತ್ತು ಉದ್ಯಮ

ಜೇಟ್ಲಿ, ಸುಷ್ಮಾಗೆ ಮರಣೋತ್ತರ ಪ್ರಶಸ್ತಿ
ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿ ಎಂದು ಕರೆಸಿಕೊಂಡಿರುವ ಪದ್ಮವಿಭೂಷಣ ಪ್ರಶಸ್ತಿಯನ್ನು ಈ ಬಾರಿ ಏಳು ಮಂದಿಗೆ ನೀಡಲಾಗಿದೆ. ಇದರಲ್ಲಿ ಜಾರ್ಜ್‌ ಫ‌ರ್ನಾಂಡೀಸ್‌, ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌, ಪೇಜಾವರ ಶ್ರೀಗಳಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ. ಉಳಿದಂತೆ ಬಾಕ್ಸಿಂಗ್‌ ತಾರೆ ಮೇರಿ ಕೋಂ, ಮಾರಿಷಸ್‌ನ ಅನಿರುದ್ಧ್ ಜಗನ್ನಾಥ್‌, ಉತ್ತರ ಪ್ರದೇಶದ ಚನೌ°ಲಾಲ್‌ ಮಿಶ್ರಾಗೂ ಪದ್ಮವಿಭೂಷಣ ಪ್ರಶಸ್ತಿ ಸಂದಿದೆ. ಇನ್ನು ಮನೋಹರ್‌ ಪರಿಕ್ಕರ್‌ ಅವರಿಗೂ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.