Karnataka ಕಾಂಗ್ರೆಸ್ ಸರಕಾರದ ವೈಫಲ್ಯ ಜನರು ನೋಡಿದ್ದಾರೆ: ಹರಿಯಾಣದಲ್ಲಿ ಮೋದಿ
Team Udayavani, Oct 4, 2024, 6:29 AM IST
ಚಂಡೀಗಢ: ಕರ್ನಾಟಕದ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನ ನೋಡಿದ್ದಾರೆ. ಈ ಪಕ್ಷ ಎಂದಿಗೂ ಸ್ಥಿರವಾದ ಆಡಳಿತ ನೀಡಲಾಗದು ಎಂದು ಜನತೆಗೆ ಅರಿವಾಗಿದೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಹರಿಯಾಣದಲ್ಲಿ ಚುನಾವಣೆ ಪ್ರಚಾರದ ಕಡೆಯ ದಿನವಾದ ಗುರುವಾರ ಕಾಂಗ್ರೆಸ್ ವಿರುದ್ಧ ಪ್ರಧಾನಿ ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಬರೀ ವಂಶಾ ಡಳಿತಕ್ಕೆ ಕುಮ್ಮಕ್ಕು ನೀಡುತ್ತದೆ, ಸಾಮಾನ್ಯ ಜನರ ಕಷ್ಟ ಆಲಿಸುವುದಿಲ್ಲ. ಈಗಾಗಲೇ ಹಿಮಾಚಲಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರಗಳ ವೈಫಲ್ಯ ಕಣ್ಣ ಮುಂದಿವೆ. ಕಾಂಗ್ರೆಸ್ ನೀತಿಗಳು ಜನರ ಬದುಕನ್ನು ನಾಶಗೊಳಿಸಿದೆ. ಹಾಗಾಗಿಯೇ ಜನರಿಗೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಬೇಡವಾಗಿದೆ ಎಂದೂ ಪ್ರಧಾನಿ ಹೇಳಿದ್ದಾರೆ.
ಬಹಿರಂಗ ಪ್ರಚಾರಕ್ಕೆ ತೆರೆ, ನಾಳೆ ಮತದಾನ
ಚಂಡೀಗಢ: ಹರಿಯಾಣ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆ ಬಿದ್ದಿದೆ. ಅ. 5ರಂದು ಚುನಾವಣೆ ನಡೆಯಲಿದ್ದು, 8,821 ಶತಾಯುಷಿಗಳು ಸೇರಿ 2 ಕೋಟಿ ಮಂದಿ ಮತ ಚಲಾಯಿಸಲಿದ್ದಾರೆ. 90 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಬಿಜೆಪಿ 3ನೇ ಬಾರಿ ಅಧಿಕಾರ ಕ್ಕೇರುವ ಭರವಸೆಯಲ್ಲಿದ್ದರೆ, ಕಾಂಗ್ರೆಸ್ ದಶಕದ ಬಳಿಕ ಗೆಲುವು ಪಡೆಯುವ ಕನಸು ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.