![kambala2](https://www.udayavani.com/wp-content/uploads/2025/02/kambala2-1-415x249.jpg)
![kambala2](https://www.udayavani.com/wp-content/uploads/2025/02/kambala2-1-415x249.jpg)
Team Udayavani, Apr 24, 2020, 11:55 AM IST
ಹೊಸದಿಲ್ಲಿ: ಕೃಷಿ ಆಧಾರಿತ ಸಸ್ಯಾ ಹಾರಿ ಪದಾರ್ಥಗಳ ಲಭ್ಯತೆ ನಡುವೆಯೂ, ಕೋವಿಡ್ ಸಾಂಕ್ರಾಮಿಕದ ಈ ಸಂಕಷ್ಟದ ಸಮಯದಲ್ಲಿ ಚಿಕನ್, ಮೊಟ್ಟೆಯಂತಹ ಮಾಂಸಾಹಾರದ ಸೇವನೆಗೆ ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮ ಇಡೀ ಮಾನವ ಜನಾಂಗದ ಅಸ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೆ, ಪ್ರಾಣಿ, ಪಕ್ಷಿ ಹಾಗೂ ಮೀನುಗಳ ಹತ್ಯೆಗೆ ನಿಷೇಧ ಹೇರುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಮಾ. 30ರಂದು ಎಲ್ಲಾ ರಾಜ್ಯಗಳಿಗೆ ಸುತ್ತೋಲೆಯೊಂದನ್ನು ಹೊರಡಿಸಿ, “ಕೋವಿಡ್ ಹರಡುವಿಕೆಯಲ್ಲಿ ಮೊಟ್ಟೆ ಮತ್ತು ಕೋಳಿ ಮಾಂಸದ ಪಾತ್ರ ಏನೂ ಇಲ್ಲ. ಹಾಗಾಗಿ, ಮೊಟ್ಟೆ ಮತ್ತು ಕೋಳಿ ಮಾಂಸವನ್ನು ತಿನ್ನಬ ಹುದು ಎಂಬುದರ ಬಗ್ಗೆ ಸಾರ್ವಜನಿಕರಿಗೆ ತಿಳಿ ಹೇಳಿ. ಈ ಬಗ್ಗೆ ಸಾಮಾಜಿಕ ಜಾಲತಾಣ, ಟಿವಿ, ರೇಡಿಯೋಗಳ ಮೂಲಕವೂ ಪ್ರಚಾರ ನೀಡಿ’ ಎಂದು ಸಲಹೆ ನೀಡಿತ್ತು. ಕೇಂದ್ರದ ಈ ಸುತ್ತೋಲೆ ಪ್ರಶ್ನಿಸಿ ವಿಶ್ವ ಜೈನ ಸಂಘಟನೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.