ʼಭಾರತದಲ್ಲಿ ಸರ್ವಾಧಿಕಾರʼ: ರಾಜಕೀಯವಾಗಿ ಸದ್ದು ಮಾಡಿದ ಯೂಟ್ಯೂಬರ್‌ ಧ್ರುವ್‌ ರಥೀ ವಿಡಿಯೋ


Team Udayavani, Feb 26, 2024, 4:55 PM IST

ʼಭಾರತದಲ್ಲಿ ಸರ್ವಾಧಿಕಾರʼ: ರಾಜಕೀಯವಾಗಿ ಸದ್ದು ಮಾಡಿದ ಯೂಟ್ಯೂಬರ್‌ ಧ್ರುವ್‌ ರಥೀ ವಿಡಿಯೋ

ಮುಂಬಯಿ: ಖ್ಯಾತ ಯೂಟ್ಯೂಬರ್‌ ಧ್ರುವ್‌ ರಥೀ ಇತ್ತೀಚೆಗೆ ಹಾಕಿರುವ ವಿಡಿಯೋ ರಾಜಕೀಯವಾಗಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ವೈಯಕ್ತಿಕ ದಾಳಿಗಳು ನಡೆಯುತ್ತಿದೆ ಧ್ರುವ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಸಂಪೂರ್ಣವಾಗಿ ವಿಡಿಯೋ ನೋಡಿ ಎಂದು ಮನವಿ ಮಾಡಿದ್ದಾರೆ.

ʼಭಾರತದಲ್ಲಿ ಸರ್ವಾಧಿಕಾರ ʼ ಎನ್ನುವ ಹೆಡ್ಡಿಂಗ್‌ ಕೊಟ್ಟಿರುವ ವಿಡಿಯೋ ಮೂರೇ ದಿನದಲ್ಲಿ 11 ಮಿಲಿಯನ್‌ ವೀಕ್ಷಣೆ ಕಂಡಿದೆ. ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಕೆಲವೊಂದಿಷ್ಟು ಅಂಶಗಳನ್ನು ವಿಡಿಯೋದಲ್ಲಿ ಹೇಳಲಾಗಿದೆ. ಇದೇ ಕಾರಣದಿಂದ ವಿಡಿಯೋ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿದೆ. ಹಲವು ರಾಜಕೀಯ ಮುಖಂಡರು ಇದನ್ನು ಹಂಚಿಕೊಂಡಿದ್ದಾರೆ. ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ ಎಂದು ಧ್ರುವ್‌ ರಥೀ ಕೆಲವೊಂದಿಷ್ಟು ಉದಾಹರಣೆಯನ್ನು ಕೊಟ್ಟು ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋ ಬಿಜೆಪಿ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದೆ.

“ವೀಡಿಯೊಗೆ 10 ಮಿಲಿಯನ್ ವೀಕ್ಷಣೆ ಆಗಿದೆ. ಎಲ್ಲಾ ಬಿಜೆಪಿ ಬೆಂಬಲಿಗರಿಗೆ ನನ್ನ ಏಕೈಕ ವಿನಂತಿ- ದಯವಿಟ್ಟು ಮುಕ್ತ ಮನಸ್ಸಿನಿಂದ ಪೂರ್ಣ ವೀಡಿಯೊವನ್ನು ಒಮ್ಮೆ ನೋಡಿ. ನನ್ನ ಮೇಲಿನ ವೈಯಕ್ತಿಕ ದಾಳಿಗಳು ದಿಕ್ಕು ತಪ್ಪಿಸುತ್ತಿವೆ. ನೀವು ನಿಜವಾಗಿಯೂ ರಾಷ್ಟ್ರದ ಬಗ್ಗೆ ಕಾಳಜಿ ವಹಿಸುತ್ತಿದ್ದರೆ ನಿಜವಾದ ಸಮಸ್ಯೆ ತುಂಬಾ ಗಂಭೀರವಾಗಿದೆ. . ಎದ್ದೇಳಿ! ಜೈ ಹಿಂದ್,” ಧ್ರುವ್‌ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋದಲ್ಲಿ ಹೇಳಿದ್ದೇನು?: ಯೂಟ್ಯೂಬರ್‌ ಧ್ರುವ್‌ ರಥೀ ತನ್ನ ವಿಡಿಯೋಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಅವರ ಕೆಲವೊಂದು ವಿಡಿಯೋಗಳು ವಿವಾದವನ್ನು ಸೃಷ್ಟಿಸಿದ್ದುಂಟು. ಈ ವಿಡಿಯೋದಲ್ಲಿ ಮೋದಿ ಅವರ ಸರ್ಕಾರದ ಬಗ್ಗೆ ಹೇಳುತ್ತಾ,  ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಭಾರತ ಸರ್ಕಾರವನ್ನು ಸರ್ವಾಧಿಕಾರಿಯಂತೆ ಉತ್ತರ ಕೊರಿಯಾ ಸರ್ಕಾರದೊಂದಿಗೆ ಹೋಲಿಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವ ಕೊನೆಗೊಂಡಿದೆಯೇ ಎನ್ನುವ ಅಂಶದ ಬಗ್ಗೆ ವಿಡಿಯೋದಲ್ಲಿ ಅವರು ಮಾತನಾಡಿದ್ದಾರೆ. ದೇಶದ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ ಕೇಂದ್ರದ ಕೈಗೊಂಬೆಯಂತಿದೆ. ಸರ್ಕಾರ ಅದನ್ನು ತನಗೆ ಬೇಕಾದಂತೆ ಇತರೆ ಪಕ್ಷದ ನಾಯಕರ ವಿರೋಧ ದಾಳಿ ನಡೆಸಲು ಬಳಸುತ್ತಿದೆ ಎನ್ನುವುದನ್ನು ಕೆಲ ಘಟನೆಯ ಉದಾಹರಣೆಯನ್ನು ಕೊಟ್ಟು ಹೇಳಿದ್ದಾರೆ. ಇನ್ನು ದೇಶದ ಚುನಾವಣೆ ಆಯೋಗದ ಬಗ್ಗೆಯೂ ಕೆಲವೊಂದು ವಿಚಾರಗಳನ್ನು ಮುಂದಿಟ್ಟಿದ್ದಾರೆ.

ರೈತರ ಪ್ರತಿಭಟನೆ ಹಾಗೂ ಚಂಡಿಗಢ ಮೇಯರ್‌ ಚುನಾವಣೆಯ ಬಗ್ಗೆಯೂ ವಿಡಿಯೋದಲ್ಲಿ ಹೇಳಲಾಗಿದೆ. ತಾನು ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಮಾತನಾಡಿಲ್ಲ. ವಾಸ್ತವ ಸಂಗತಿಗಳನ್ನು ಮಾತ್ರ ಹೇಳಿದ್ದೇನೆ ಎಂದು ಧ್ರುವ್‌ ಹೇಳಿದ್ದಾರೆ.

ಸದ್ಯ ಧ್ರುವ್‌ ರಥೀ ಅವರ ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಧ್ರುವ್‌ ರಥೀ ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ. ಈ ವಿಡಿಯೋವನ್ನು ತೆಗೆದು ಹಾಕಬೇಕೆಂದು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಸರ್ಕಾರದ ದಿನಗಳ ಪೋಸ್ಟ್‌ ಮಾಡಿ, ಧ್ರುವ್‌ ರಥೀ ವಿಡಿಯೋಗೆ ಮೆಚ್ಚುಗೆ ನೀಡಿದ್ದಾರೆ.

 

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.