Petrol, diesel ಬೆಲೆ ಹೆಚ್ಚಳ: ಹಿಮಾಚಲ ಬಳಿಕ ಈಗ ಪಂಜಾಬ್ಗೆ ಆರ್ಥಿಕ ಕಷ್ಟ
Team Udayavani, Sep 6, 2024, 6:45 AM IST
ಚಂಡೀಗಢ: ಸಿಎಂ ಭಗವಂತ್ ಸಿಂಗ್ ಮಾನ್ ನೇತೃತ್ವದ ಪಂಜಾಬ್ನ ಆಮ್ ಆದ್ಮಿ ಪಕ್ಷದ ಸರಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್(ಮೌಲ್ಯವರ್ಧಿತ ತೆರಿಗೆ) ಹೆಚ್ಚಳ ಮಾಡಿದೆ. ಅದರಂತೆ ಪೆಟ್ರೋಲ್ ಬೆಲೆ ಪ್ರತೀ ಲೀಟರ್ಗೆ 61 ಪೈಸೆ, ಡೀಸೆಲ್ ಬೆಲೆ 92 ಪೈಸೆ ಹೆಚ್ಚಳವಾಗಲಿದೆ.
ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ, ಸುಖೀÌಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರಕಾರದ ಬಳಿಕ ವಿಪಕ್ಷಗಳ ಆಡಳಿತದ ಮತ್ತೂಂದು ಸರಕಾರವೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆಯೇ ಎಂಬ ಪ್ರಶ್ನೆ ಮೂಡಿದೆ.
ಪಂಜಾಬ್ನಲ್ಲಿ ರಾಜ್ಯ ಸರಕಾರಿ ನೌಕರರ ಆಗಸ್ಟ್ ವೇತನ ಹಾಗೂ ಪಿಂಚಣಿ ಸಹ 4 ದಿನಗಳು ವಿಳಂಬವಾಗಿದ್ದು, ಪಂಜಾಬ್ ಆರ್ಥಿಕ ಸಂಕಷ್ಟದ ಬಗ್ಗೆ ಈಗ ಸಾಕಷ್ಟು ಚರ್ಚೆ ಆರಂಭವಾಗಿದೆ.
ವ್ಯಾಟ್ ಹೆಚ್ಚಳದಿಂದ ಪೆಟ್ರೋಲ್ನಿಂದ 150 ಕೊಟಿ ರೂ., ಡೀಸೆಲ್ನಿಂದ 395 ಕೋಟಿ ರೂ.ನಷ್ಟು ಆದಾಯ ಸರಕಾರಕ್ಕೆ ಬರಲಿದೆ. ರಾಜ್ಯದ ಪ್ರಸ್ತುತ ಆರ್ಥಿಕ ಸವಾಲುಗಳ ಬಗ್ಗೆ ಕಾರ್ಯತಂತ್ರ ರೂಪಿಸಲು ಈ ಸಂಪುಟ ಸಭೆ ಕರೆಯಲಾಗಿತ್ತು ಎಂದು ವರದಿಯಾಗಿದೆ. ಪಂಜಾಬ್ಗ 10 ಸಾವಿರ ಕೋಟಿ ರೂ.ನಷ್ಟು ಕೇಂದ್ರ ಸರಕಾರದ ನಿಧಿ ಬರಲು ಬಾಕಿ ಯಿದೆ. ಹೀಗಾಗಿ ವ್ಯಾಟ್ ಹೆಚ್ಚಳ ಮಾಡಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಿಎಂ ಭಗವಂತ್ ಮಾನ್ ಮುಂದಾಗಿದ್ದಾರೆ ಎಂದು ಸರಕಾರ ತಿಳಿಸಿದೆ.
ವಿದ್ಯುತ್ ಸಬ್ಸಿಡಿಯೂ ಕಡಿತ: ಇದಲ್ಲದೇ ಪ್ರತೀ ಯುನಿಟ್ಗೆ 3 ರೂ. ವಿದ್ಯುತ್ ಸಬ್ಸಿಡಿ ನೀಡುವ ಹಿಂದಿನ ಕಾಂಗ್ರೆಸ್ ಸರಕಾರದ ಯೋಜನೆಯನ್ನೂ ಪಂಜಾಬ್ ಸರಕಾರ ರದ್ದುಗೊಳಿಸಿದೆ. ಇದರಿಂದ ಸರಕಾರಕ್ಕೆ ವರ್ಷಕ್ಕೆ 1,500-1,800 ಕೋಟಿ ರೂ. ಉಳಿತಾಯವಾಗಲಿದೆ ಎಂದು ಹೇಳಲಾಗಿದೆ. ಸರಕಾರದ ನಿರ್ಧಾರಕ್ಕೆ ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಆರೋಪ-ಪ್ರತ್ಯಾರೋಪ
ಕೇಂದ್ರ ಸರಕಾರದಿಂದ 10 ಸಾವಿರ ಕೋಟಿ ರೂ. ಬಾಕಿ ಇರುವ ಕಾರಣ ಈ ಕ್ರಮ: ಆಪ್ ಸರಕಾರ
ಆರ್ಥಿಕತೆ ನಿಭಾಯಿಸುವಲ್ಲಿ ಆಪ್ ಸರಕಾರ ವಿಫಲ: ಬಿಜೆಪಿ ಆರೋಪ
ಎರಡೂವರೆ ವರ್ಷಗಳಲ್ಲಿ ಆಪ್ ಪಂಜಾಬ್ ಅನ್ನು ದಿವಾಳಿಯಾಗಿಸಿದೆ ಎಂದು ಕಿಡಿ
ರಾಜ್ಯ ಸರಕಾರಿ ನೌಕರರ ಆಗಸ್ಟ್ ವೇತನ, ಪಿಂಚಣಿ ಸಹ 4 ದಿನಗಳು ವಿಳಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.