ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ… ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
Team Udayavani, Feb 23, 2024, 9:19 AM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಡರಾತ್ರಿ ವಾರಾಣಸಿಗೆ ಆಗಮಿಸಿದ್ದು ಇಲ್ಲಿನ ಹೆದ್ದಾರಿಯ ಪರಿಶೀಲನೆ ನಡೆಸಿದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಕಾಶಿಗೆ ಬಂದಿಳಿದ ಪ್ರಧಾನಿ ಮೋದಿ ಇತ್ತೀಚಿಗೆ ಉದ್ಘಾಟನೆಗೊಂಡಿದ್ದ ಶಿವಪುರ-ಫುಲ್ವಾರಿಯಾ-ಲಹರ್ತಾರಾ ಹೆದ್ದಾರಿಯನ್ನು ಪರಿಶೀಲಿಸಿದರು.
ಬಳಿಕ ಈ ಕುರಿತು ತಮ್ಮ X ಖಾತೆಯಲ್ಲಿ ಭೇಟಿ ನೀಡಿದ ವಿಚಾರವನ್ನು ಹಂಚಿಕೊಂಡಿದ್ದಾರೆ ಪ್ರಧಾನಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಗಿದ್ದರು.
ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ:
ಎರಡು ದಿನಗಳ ಭೇಟಿಗಾಗಿ ವಾರಣಾಸಿಗೆ ಬಂದಿರುವ ಪ್ರಧಾನಿ ಅವರು ಇಂದು 13,202 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಡಳಿತದ ಹಿರಿಯ ಅಧಿಕಾರಿ, ಇಂದು ಪ್ರಧಾನಿಯವರು 11,972 ಕೋಟಿ ಮೌಲ್ಯದ 24 ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಜೊತೆಗೆ 2,195 ಕೋಟಿ ಮೌಲ್ಯದ 12 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Upon landing in Kashi, inspected the Shivpur-Phulwaria-Lahartara Marg. This project was inaugurated recently and has been greatly helpful to people in the southern part of the city. pic.twitter.com/9W0YkaBdLX
— Narendra Modi (@narendramodi) February 22, 2024
ಇದಾದ ಬಳಿಕ ಪ್ರಧಾನಮಂತ್ರಿಯವರು ಬಿಎಚ್ಯುನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಅಲ್ಲಿ ಅವರು ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ, ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಮತ್ತು ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಾರಣಾಸಿಯ ಸಂಸ್ಕೃತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಸಮವಸ್ತ್ರದ ಸೆಟ್ಗಳು, ಸಂಗೀತ ವಾದ್ಯಗಳು ಮತ್ತು ಮೆರಿಟ್ ವಿದ್ಯಾರ್ಥಿವೇತನವನ್ನು ವಿತರಿಸುತ್ತಾರೆ ಮತ್ತು ಭಾಗವಹಿಸುವವರ ಜೊತೆ ‘ಸನ್ವರ್ತಿ ಕಾಶಿ’ ವಿಷಯದ ಕುರಿತು ತಮ್ಮ ಛಾಯಾಚಿತ್ರ ವಿಚಾರದ ಬಗ್ಗೆಯೂ ಸಂವಾದ ನಡೆಸುತ್ತಾರೆ.
“ಪ್ರಧಾನಿ ಮೋದಿ ಅವರು ಸೀರ್ಗೋವರ್ಧನ್ನಲ್ಲಿರುವ ಸಂತ ರವಿದಾಸ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ, ಬಳಿಕ ಸಂತ ರವಿದಾಸ್ ಜನ್ಮಸ್ಥಳದ ಸುತ್ತಮುತ್ತ ಸುಮಾರು 32 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಸಂತ ರವಿದಾಸ್ ಪ್ರತಿಮೆ ಅನಾವರಣ, ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಮತ್ತು ಸುಮಾರು 62 ಕೋಟಿ ವೆಚ್ಚದ ಉದ್ಯಾನವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಉದ್ಘಾಟಿಸಲಿದ್ದಾರೆ ಎಂದು ಕಾಶಿ ಪ್ರದೇಶ ಬಿಜೆಪಿ ಅಧ್ಯಕ್ಷ ದಿಲೀಪ್ ಪಟೇಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.