ಡ್ರೋನ್‌ಗೆ ಇನ್ನು ಕೀಟನಾಶಕ ಸಿಂಪಡಣೆ ಹೊಣೆ

100 ಕಿಸಾನ್‌ ಡ್ರೋನ್‌ಗಳಿಗೆ ಪ್ರಧಾನಿ ಮೋದಿ ಚಾಲನೆ; ಕೃಷಿ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ಎಂದು ಬಣ್ಣನೆ

Team Udayavani, Feb 20, 2022, 7:15 AM IST

ಡ್ರೋನ್‌ಗೆ ಇನ್ನು ಕೀಟನಾಶಕ ಸಿಂಪಡಣೆ ಹೊಣೆ

ನವದೆಹಲಿ: ದೇಶದ ಹೊಲಗಳಲ್ಲಿ ಇನ್ನು ಮುಂದೆ ಕೀಟನಾಶಕಗಳು, ಪೋಷಕಾಂಶಗಳ ಸಿಂಪಡಣೆಯ ಕೆಲಸವನ್ನು ಡ್ರೋನ್‌ಗಳೇ ಮಾಡಲಿವೆ. ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಎಂಬಂತೆ, ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ದೇಶಾದ್ಯಂತ 100 “ಮೇಡ್‌ ಇನ್‌ ಇಂಡಿಯಾ ಕಿಸಾನ್‌ ಡ್ರೋನ್‌’ಗಳಿಗೆ ಚಾಲನೆ ನೀಡಿದ್ದಾರೆ. ಭಾರತೀಯ ಕೃಷಿ ಕ್ಷೇತ್ರದಲ್ಲಿ ಇದೊಂದು ಮಹತ್ವದ ಮೈಲುಗಲ್ಲು ಎಂದೂ ಅವರು ಬಣ್ಣಿಸಿದ್ದಾರೆ.

ವರ್ಚುವಲ್‌ ಆಗಿ ಕಿಸಾನ್‌ ಡ್ರೋನ್‌ಗಳಿಗೆ ಚಾಲನೆ ನೀಡಿದ ಬಳಿಕ ಹರ್ಯಾಣದ ಮನೇಸಾರ್‌ನಲ್ಲಿ ರೈತರ ಸಮೂಹದೊಂದಿಗೆ ಸಂವಾದವನ್ನೂ ನಡೆಸಿದ್ದಾರೆ. ಅಲ್ಲದೇ, “ಡ್ರೋನ್‌ ಕಿಸಾನ್‌ ಯಾತ್ರೆ’ಗೂ ಹಸಿರು ನಿಶಾನೆ ತೋರಿದ್ದಾರೆ.

ಈ ವೇಳೆ ಮಾತನಾಡಿದ ಮೋದಿ, “ಕಿಸಾನ್‌ ಡ್ರೋನ್‌ಗಳು ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಮುಂಬರುವ ದಿನಗಳಲ್ಲಿ ರೈತರು ಅಧಿಕ-ಸಾಮರ್ಥ್ಯದ ಡ್ರೋನ್‌ಗಳನ್ನು ಬಳಸಿಕೊಂಡೇ ಅತ್ಯಂತ ಕನಿಷ್ಠ ಸಮಯದಲ್ಲಿ ಹಣ್ಣು, ತರಕಾರಿ, ಹೂವು ಮತ್ತಿತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಾಟ ಮಾಡಬಹುದು. ಇದರಿಂದ ರೈತರ ಆದಾಯವೂ ಹೆಚ್ಚಳವಾಗಲಿದೆ’ ಎಂದಿದ್ದಾರೆ.

ದೇಶದಲ್ಲೀಗ ಡ್ರೋನ್‌ ಮಾರುಕಟ್ಟೆಗೆ ಹಾಗೂ ಹೊಸ ಆವಿಷ್ಕಾರಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಈಗಾಗಲೇ ಗರುಡ ಏರೋಸ್ಪೇಸ್‌ ಸಂಸ್ಥೆಯು ಮುಂದಿನ 2 ವರ್ಷಗಳಲ್ಲಿ 1 ಲಕ್ಷ ಮೇಡ್‌-ಇನ್‌-ಇಂಡಿಯಾ ಡ್ರೋನ್‌ಗಳನ್ನು ತಯಾರಿಸುವ ಗುರಿ ಹಾಕಿಕೊಂಡಿದೆ. ಇದರಿಂದ ಯುವಜನರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ಈಗ 200ರಷ್ಟಿರುವ ಡ್ರೋನ್‌ಗಳ ಸಂಖ್ಯೆ ಸದ್ಯದಲ್ಲೇ ಸಾವಿರ ದಾಟಲಿದೆ ಎಂದೂ ಮೋದಿ ಹೇಳಿದ್ದಾರೆ.

ಕಿಸಾನ್‌ ಡ್ರೋನ್‌ನ ಅಂದಾಜು ಬೆಲೆ – 5-10 ಲಕ್ಷ ರೂ.
ಕಾರ್ಯನಿರ್ವಹಣೆ – ಇಂಟರ್ನೆಂಟ್‌ ಆಧಾರಿತ ಸ್ಮಾರ್ಟ್‌ ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಣೆ
ಡ್ರೋನ್‌ನ ಕೆಲಸ – ಕ್ರಿಮಿನಾಶಕ ಸಿಂಪಡಣೆ, ಬೆಳೆಗಳ ಪರಿಶೀಲನೆ, ಪೋಷಕಾಂಶ ಸಿಂಪಡಣೆ ಇತ್ಯಾದಿ

ಅನುಕೂಲತೆಗಳೇನು?
– ಬೆಳೆ ಮೌಲ್ಯಮಾಪನ, ಭೂದಾಖಲೆಗಳ ಡಿಜಿಟಲೀಕರಣ, ಕೀಟನಾಶಕಗಳು ಮತ್ತು ಪೋಷಕಾಂಶಗಳ ಸಿಂಪಡಣೆಗೆ ಬಳಕೆ.
– ದೇಶಾದ್ಯಂತ “ರಾಸಾಯನಿಕಮುಕ್ತ ರಾಷ್ಟ್ರೀಯ ಕೃಷಿ’ಗೆ ಉತ್ತೇಜನ ನೀಡುವ ಉದ್ದೇಶ
– ಮುಂದಿನ ದಿನಗಳಲ್ಲಿ ಹೂವು, ಹಣ್ಣು, ತರಕಾರಿಗಳನ್ನು ಹೊಲಗಳಿಂದ ನೇರವಾಗಿ ಮಾರುಕಟ್ಟೆಗೆ ಒಯ್ಯಲು ಅಧಿಕ ಸಾಮರ್ಥ್ಯದ ಡ್ರೋನ್‌ಗಳ ಬಳಕೆ.
– ಇದರಿಂದ ಉತ್ಪನ್ನಗಳಿಗೆ ಹಾನಿ ಆಗುವುದನ್ನು ತಪ್ಪಿಸಬಹುದು, ಸಮಯವೂ ಉಳಿತಾಯವಾಗುತ್ತದೆ, ರೈತರು ಮತ್ತು ಮೀನುಗಾರರ ಆದಾಯವೂ ಹೆಚ್ಚುತ್ತದೆ
– ಡ್ರೋನ್‌ ಮಾರುಕಟ್ಟೆ ಅಭಿವೃದ್ಧಿಯಿಂದ ಯುವಜನರಿಗೆ ಉದ್ಯೋಗ ಮತ್ತು ಹೊಸ ಅವಕಾಶಗಳ ಸೃಷ್ಟಿ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.