![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 25, 2022, 10:10 AM IST
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರು ಭಾನುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದಂದು ಅವರ ಸ್ಮಾರಕ ‘ಸದೈವ್ ಅಟಲ್’ಗೆ ನಮನ ಸಲ್ಲಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.
ಸ್ಮಾರಕಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ, “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ:ಕೃಷ್ಣಾಪುರ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್ 25ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಜನಿಸಿದ್ದರು.
Delhi | President Droupadi Murmu, Vice-President Jagdeep Dhankhar and Prime Minister Narendra Modi pay floral tribute at ‘Sadaiv Atal’ on former PM Atal Bihari Vajpayee’s birth anniversary. pic.twitter.com/sIpjzeUmNL
— ANI (@ANI) December 25, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.