Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

7ನೇ ಹಂತಕ್ಕೆ ಬಹಿರಂಗ ಪ್ರಚಾರ ಕೊನೆಯಾದ ದಿನವೇ ತ. ನಾಡಿಗೆ ಪಯಣ

Team Udayavani, May 29, 2024, 7:00 AM IST

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕಾಗಿ ಬಹಿರಂಗ ಪ್ರಚಾರಕ್ಕೆ ಮೇ 30ರಂದು ತೆರೆ ಬೀಳಲಿದ್ದು, ಅಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಸ್ಥರಾಗಲಿದ್ದಾರೆ!

ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಶಿಲಾ ಸ್ಮಾರಕದಲ್ಲಿರುವ ಧ್ಯಾನ ಮಂಟಪಂನಲ್ಲಿ ಮೇ 30ರ ಸಂಜೆಯಿಂದ ಜೂ. 1ರ ವರೆಗೆ ಪ್ರಧಾನಿ ಮೋದಿಯವರು ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯ ಪ್ರಚಾರ ಅಂತ್ಯವಾದಾಗಲೂ ಮೋದಿಯವರು ಉತ್ತರಾಖಂಡದ ಕೇದಾರನಾಥದ ಗುಹೆಯಲ್ಲಿ ಇದೇರೀತಿ ಧ್ಯಾನ ಮಾಡಿದ್ದರು.

ಸ್ವಾಮಿ ವಿವೇಕಾನಂದರು ಭಾರತದ ಬಗೆಗೆ ಕಂಡ ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರದರ್ಶಿಸುವುದು ಕೂಡ ಮೋದಿಯವರ ಉದ್ದೇಶವಾಗಿದೆ. ಇದೇ ಕಾರಣಕ್ಕೆ ಅವರು ಧ್ಯಾನಕ್ಕಾಗಿ ಕನ್ಯಾಕುಮಾರಿಯನ್ನು ಆಯ್ಕೆ ಮಾಡಿಕೊಂಡರು ಎಂದು ಪಕ್ಷದ ನಾಯಕರು ಹೇಳಿದ್ದಾರೆ. ಗೌತಮ ಬುದ್ಧನ ಬದುಕಿನಲ್ಲಿ ಸಾರನಾಥವು ಹೇಗೆ ಪ್ರಮುಖ ಸ್ಥಾನ ಪಡೆದಿದೆಯೋ ಅದೇ ರೀತಿ ಕನ್ಯಾಕುಮಾರಿಯ ಈ ಸ್ಥಳವು ಸ್ವಾಮಿ ವಿವೇಕಾನಂದರ ಜೀವನದಲ್ಲಿ ಅತ್ಯಂತ ಮಹತ್ವದ ಸ್ಥಾನ ಪಡೆದಿದೆ. ಇಲ್ಲೇ ವಿವೇಕಾನಂದರು 3 ದಿನ ಧ್ಯಾನಸ್ಥರಾಗಿ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಕಂಡಿದ್ದರು.

ಕನ್ಯಾಕುಮಾರಿಯ ವಿಶೇಷತೆಗಳೇನು?
– ಸ್ವಾಮಿ ವಿವೇಕಾನಂದರು ಭಾರತಮಾತೆಯ ಪರಿಕಲ್ಪನೆಯನ್ನು ಹೊಂದಿದ್ದು ಕನ್ಯಾಕುಮಾರಿಯಲ್ಲೇ. ಗೌತಮ ಬುದ್ಧನಿಗೆ ಸಾರನಾಥದಂತೆ ವಿವೇಕಾನಂದರ ಬದುಕಿನಲ್ಲಿ ಕನ್ಯಾಕುಮಾರಿ ಎಂದು ನಂಬಲಾಗಿದೆ
– ಇಲ್ಲಿನ ಧ್ಯಾನ ಮಂಟಪಂನಲ್ಲಿ ಸ್ವಾಮಿ ವಿವೇಕಾನಂದರು 3 ದಿನ ಧ್ಯಾನ ಮಾಡಿದ್ದರು
– ಪೌರಾಣಿಕವಾಗಿಯೂ ಈ ಸ್ಥಳ ಮಹತ್ವ ಪಡೆದಿದೆ. ಶಿವನಿಗಾಗಿ ಕಾಯುತ್ತ ದೇವಿ ಪಾರ್ವತಿಯು ಇದೇ ಸ್ಥಳದಲ್ಲಿ ಧ್ಯಾನ ಮಾಡಿದ್ದಳು ಎಂಬ ಪ್ರತೀತಿಯಿದೆ.
– ಕನ್ಯಾಕುಮಾರಿಯು ಭಾರತದ ದಕ್ಷಿಣದ ತುದಿಯ ಪ್ರದೇಶ. ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಯನ್ನು ಬೆಸೆಯುವ ಬಿಂದುವೂ ಹೌದು.
– ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರಬಿ ಸಮುದ್ರ ಸಂಗಮವಾಗುವ ಸ್ಥಳವಿದು.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

stalin

NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ

1-wewewewqewq

Telangana;ಗಾಜಿನ ಕಾರ್ಖಾನೆ ಸ್ಫೋಟ: 5 ಸಾವು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.