![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jul 8, 2024, 7:05 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ರಷ್ಯಾ ಮತ್ತು ಆಸ್ಟ್ರಿಯಾ ರಾಷ್ಟ್ರಗಳ ಪ್ರವಾಸ ಜು. 8ರಂದು ಆರಂಭವಾಗಲಿದೆ. 2022ರ ಫೆಬ್ರವರಿಯಲ್ಲಿ ರಷ್ಯಾ-ಉಕ್ರೇನ್ ಸೇನಾ ಕಾರ್ಯಾಚರಣೆ ಆರಂಭದ ಬಳಿಕ ಮೋದಿ ಮೊದಲ ಬಾರಿಗೆ ರಷ್ಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಅದೇ ರೀತಿ ಆಸ್ಟ್ರಿಯಾಕ್ಕೆ 41 ವರ್ಷಗಳ ಬಳಿಕ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ.
ಮೋದಿ ಜು. 8 ಮತ್ತು 9ರಂದು ರಷ್ಯಾ ಹಾಗೂ ಜು. 9, ಜು. 10ರಂದು ಆಸ್ಟ್ರಿಯಾಕ್ಕೆ ಭೇಟಿ ನೀಡಲಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಅವರು ಕೈಗೊಳ್ಳುತ್ತಿರುವ 2ನೇ ವಿದೇಶ ಪ್ರವಾಸ ಇದು. ಇತ್ತೀಚೆಗಷ್ಟೇ ಅವರು ಇಟಲಿ ಪ್ರವಾಸ ಕೈಗೊಂಡಿದ್ದರು. ರಷ್ಯಾ ಪ್ರವಾಸದ ವೇಳೆ ಮೋದಿ ಅವರು 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗದಲ್ಲಿ ಪಾಲ್ಗೊಳ್ಳಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಆಹ್ವಾನದ ಮೇರೆಗೆ ಅವರು ಈ ಕಾರ್ಯಕ್ರಮದಲ್ಲಿ ಭಾಗ ವಹಿಸುತ್ತಿದ್ದಾರೆ.
ಮೋದಿ-ಪುತಿನ್ ಮಾತುಕತೆ
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುತಿನ್ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಗಳು, ಸಮಕಾಲೀನ ಹಾಗೂ ಜಾಗತಿಕ ಸಮಸ್ಯೆಗಳ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ರಷ್ಯಾದ ರಾಜತಾಂತ್ರಿಕ ಅಧಿಕಾರಿ ಡಿಮಿಟ್ರಿ ಪೆಸ್ಕೊವ್ ತಿಳಿಸಿದ್ದಾರೆ.
41 ವರ್ಷದ ಬಳಿಕ ಆಸ್ಟ್ರಿಯಾಕ್ಕೆ ಮೋದಿ
1983ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಳಿಕ ಆಸ್ಟ್ರಿಯಾಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
ಕಾಕತಾಳೀಯ ಎಂಬಂತೆ ಆಸ್ಟ್ರಿಯಾ ಮತ್ತು ಭಾರತ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 75 ವರ್ಷಗಳಾಗುತ್ತಿರುವ ಹೊತ್ತಿನಲ್ಲೇ ಮೋದಿ ಭೇಟಿ ನೀಡುತ್ತಿದ್ದಾರೆ. “ಭಾರತ ಮತ್ತು ಆಸ್ಟ್ರಿಯಾ ನಡುವಿನ ಸಂಬಂಧವನ್ನು ಬಲಪಡಿಸಲು ಮತ್ತು ಸಹಕಾರದ ಹೊಸ ಮಾರ್ಗಗಳನ್ನು ಅನ್ವೇಷಿಸಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಆಸ್ಟ್ರಿಯಾ ಪ್ರಧಾನಿ ಕಾರ್ಲ್ ನೆಹಮ್ಮರ್ ಅವರು, “ಮೋದಿ ಅವರನ್ನು ವಿಯೆನ್ನಾದಲ್ಲಿ ಸ್ವಾಗತಿಸುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.