![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 18, 2020, 7:51 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ವಿಶ್ವನಾಯಕರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ “ಯು.ಎಸ್ ಅಧ್ಯಕ್ಷರಾಗಿ ಆಯ್ಕೆಯಾದ ಜೋ ಬೈಡೆನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ನಿರ್ಧಾರವನ್ನು ತಳೆದಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರ ಸೇರಿದಂತೆ ಉಭಯ ರಾಷ್ಟ್ರಗಳ ಆದ್ಯತೆಯ ಬಗ್ಗೆ ಚರ್ಚಿಸಲಾಗಿದೆ” ಎಂದರು.
Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns – Covid-19 pandemic, climate change, and cooperation in the Indo-Pacific Region.
— Narendra Modi (@narendramodi) November 17, 2020
ಇದೇ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದೇನೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿದೆ ಮಾತ್ರವಲ್ಲದೆ, ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಹೆಮ್ಮೆ ಮತ್ತು ಸ್ಫೂರ್ತಿಯ ಸಂಗತಿಯಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
I also conveyed warm congratulations for VP-elect @KamalaHarris. Her success is a matter of great pride and inspiration for members of the vibrant Indian-American community, who are a tremendous source of strength for Indo-US relations.
— Narendra Modi (@narendramodi) November 17, 2020
ಪ್ರಧಾನಿ ನರೇಂದ್ರ ಮೋದಿ, ಕೊನೆಯ ಬಾರಿಗೆ ಜೋ ಬೈಡೆನ್ ಅವರನ್ನು ವಾಷಿಂಗ್ಟನ್ನಲ್ಲಿ ಸೆಪ್ಟೆಂಬರ್ 30, 2014 ರಂದು ಭೇಟಿಯಾಗಿದ್ದರು. ಈ ವೇಳೆ ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದರೇ, ಜೋ ಬೈಡೆನ್ ಉಪಾಧ್ಯಕ್ಷರಾಗಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.