72 ತಾಸುಗಳ ಸೂತ್ರ: ಕೋವಿಡ್ ಹೆಚ್ಚಿರುವ ರಾಜ್ಯಗಳ ಸಿಎಂಗಳ ಜತೆ ಚರ್ಚೆ
ಪರೀಕ್ಷೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಲಹೆ
Team Udayavani, Aug 12, 2020, 6:35 AM IST
ಹೊಸದಿಲ್ಲಿ: “ಎಪ್ಪತ್ತೆರಡು ತಾಸುಗಳಲ್ಲಿ ಸೋಂಕುಪೀಡಿತರನ್ನು ಪತ್ತೆ ಹಚ್ಚಿ, ಪರೀಕ್ಷೆ ನಡೆಸಿ’ ಎಂಬ ಹೊಸ ಸೂತ್ರವನ್ನು ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನಿ ಮೋದಿ ಮಂಡಿಸಿದ್ದಾರೆ. ದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳಿರುವ 10 ರಾಜ್ಯಗಳ ಸಿಎಂಗಳ ಜತೆ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ, ಈ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಿಸಿದರೆ ನಾವು ಗೆಲ್ಲುತ್ತೇವೆ ಎಂದಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ನಡೆಸಿರುವ 9ನೇ ವೀಡಿಯೋ ಕಾನ್ಫರೆನ್ಸ್ ಇದು. ಪ್ರಸ್ತುತ 10 ರಾಜ್ಯಗಳಲ್ಲಿ ದೇಶದ ಶೇ. 80 ರಷ್ಟು ಪ್ರಕರಣಗಳಿವೆ. ಹೀಗಾಗಿ ಈ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣವೇ ಕೀಲಿಕೈ ಎಂದ ಪ್ರಧಾನಿ, ಪರೀಕ್ಷೆ ಹೆಚ್ಚಿಸುವಂತೆ ಸೂಚನೆ ನೀಡಿದರು. ಮುಖ್ಯವಾಗಿ ಬಿಹಾರ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಲ ಮತ್ತು ತೆಲಂಗಾಣದಲ್ಲಿ ಪರೀಕ್ಷೆಗಳನ್ನು ಹೆಚ್ಚಿಸುವಂತೆ ಸೂಚಿಸಿದರಲ್ಲದೆ, ಈ ಕೆಲಸ ಅತ್ಯಂತ ತುರ್ತಾಗಿ ಆಗಬೇಕು ಎಂದರು.
ಸೋಂಕುಪೀಡಿತರ ಸಂಪರ್ಕಕ್ಕೆ ಬಂದವರನ್ನು 72 ತಾಸುಗಳಲ್ಲಿ ಪತ್ತೆ ಹಚ್ಚಿ ಪರೀಕ್ಷಿಸುವುದು ಸೋಂಕು ಪ್ರಸಾರ ನಿಯಂತ್ರಣಕ್ಕೆ ಮುಖ್ಯ. ಹೀಗಾಗಿ ಈ ಸೂತ್ರ ಅನುಸರಿಸುವಂತೆ ಪ್ರಧಾನಿ ಸೂಚಿಸಿದರು. ಕೇಂದ್ರ -ರಾಜ್ಯ ಜತೆಗೂಡಿ ಹೋರಾಡೋಣ ಎಂದರು.
ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗುಜರಾತ್ ಸಿಎಂ ವಿಜಯ್ ರೂಪಾನಿ, ಬಿಹಾರ ಸಿಎಂ ನಿತೀಶ್ ಕುಮಾರ್, ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಭಾಗವಹಿಸಿದ್ದರು. ಹೋಂ ಕ್ವಾರಂಟೈನ್ನಲ್ಲಿರುವ ಕರ್ನಾಟಕ ಸಿಎಂ ಯಡಿಯೂರಪ್ಪ ಪರವಾಗಿ ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಡಾ| ಕೆ. ಸುಧಾಕರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.